ಸಕಲೇಶಪುರ ವಿಜಯಪುರ ಬಸ್‌ಗೆ ಶಾಸಕ ಮಂಜು ಚಾಲನೆ

KannadaprabhaNewsNetwork |  
Published : Aug 20, 2024, 12:50 AM IST
19ಎಚ್ಎಸ್ಎನ್6 :  ಸಕಲೇಶಪುರದಿಂದ ವಿಜಯಪುರಕ್ಕೆ ಆರಂಭವಾಗಿರುವ ನೂತನ ಬಸ್‌ಗೆ ಶಾಸಕ ಸಿಮೆಂಟ್ ಮಂಜು ಹಸಿರು ಧಜ ತೋರಿಸುವ ಮುಖಾಂತರ ಚಾಲನೆ ನೀಡಿದರು. | Kannada Prabha

ಸಾರಾಂಶ

ಸಕಲೇಶಪುರದಿಂದ ವಿಜಯಪುರಕ್ಕೆ ಆರಂಭವಾಗಿರುವ ನೂತನ ಬಸ್‌ಗೆ ಶಾಸಕರು ಹಸಿರು ಧ್ವಜ ತೋರಿಸುವ ಮುಖಾಂತರ ಚಾಲನೆ ನೀಡಿ ಮಾತನಾಡಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಹೊಸ ಬಸ್‌ನ್ನು ಸಕಲೇಶಪುರ ಡಿಪೋದಿಂದ ವಿಜಯಪುರಕ್ಕೆ ಬಿಡಲಾಗುತ್ತಿದೆ. ಈ ಬಸ್‌ನಿಂದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಪ್ರತಿ ದಿನ ಪಟ್ಟಣದಿಂದ ಮಧ್ಯಾಹ್ನ ೧೨.೩೦ರ ವೇಳೆಗೆ ಬಿಡುವ ಈ ಬಸ್ ಮರುದಿನ ಮುಂಜಾನೆ ೬ ಗಂಟೆಗೆ ವಿಜಯಪುರ ತಲುಪುತ್ತದೆ ಎಂದರು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಮಲೆನಾಡಿನಿಂದ ಉತ್ತರ ಕರ್ನಾಟಕ ಭಾಗಕ್ಕೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಹೊಸ ಬಸ್‌ವೊಂದನ್ನು ಸಕಲೇಶಪುರದಿಂದ ವಿಜಯಪುರಕ್ಕೆ ಬಿಡಲಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಸಕಲೇಶಪುರದಿಂದ ವಿಜಯಪುರಕ್ಕೆ ಆರಂಭವಾಗಿರುವ ನೂತನ ಬಸ್‌ಗೆ ಶಾಸಕರು ಹಸಿರು ಧ್ವಜ ತೋರಿಸುವ ಮುಖಾಂತರ ಚಾಲನೆ ನೀಡಿ ಮಾತನಾಡಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಹೊಸ ಬಸ್‌ನ್ನು ಸಕಲೇಶಪುರ ಡಿಪೋದಿಂದ ವಿಜಯಪುರಕ್ಕೆ ಬಿಡಲಾಗುತ್ತಿದೆ. ಈ ಬಸ್‌ನಿಂದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಪ್ರತಿ ದಿನ ಪಟ್ಟಣದಿಂದ ಮಧ್ಯಾಹ್ನ ೧೨.೩೦ರ ವೇಳೆಗೆ ಬಿಡುವ ಈ ಬಸ್ ಮರುದಿನ ಮುಂಜಾನೆ ೬ ಗಂಟೆಗೆ ವಿಜಯಪುರ ತಲುಪುತ್ತದೆ. ನಂತರ ಸಂಜೆ ೭ ಗಂಟೆಗೆ ವಿಜಯಪುರ ಬಸ್ ಮರುದಿನ ಮಧ್ಯಾಹ್ನದ ವೇಳೆಗೆ ಸಕಲೇಶಪುರ ತಲುಪುತ್ತದೆ. ಸಾರ್ವಜನಿಕರು ಈ ಬಸ್‌ನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಹೇಳಿದರು. ಈ ಬಸ್ ನಿಲ್ದಾಣದಲ್ಲಿ ಕೆಲವೊಂದು ಸಮಸ್ಯೆಗಳಿದ್ದು ಇದನ್ನು ಬಗೆಹರಿಸಲು ಆದ್ಯತೆ ನೀಡಲಾಗುವುದು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂತರ್ಜಾತಿ ವಿವಾಹಿತರಿಗೆ ಪೊಲೀಸರ ರಕ್ಷಣೆ : ಗೃಹ ಮಂತ್ರಿ
ಮುಂಬೈ ಮೇಯರ್‌ ಹುದ್ದೆಗೆ ಶಿಂಧೆ ಲಡಾಯಿ?