ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕಳವು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.
ತಾತ್ಕಾಲಿಕವಾಗಿ ಬಸ್ ನಿಲ್ದಾಣಕ್ಕೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲಾಗುವುದು. ಶಾಶ್ವತವಾಗಿ ಅನುಕೂಲಕರ ವಾತಾವರಣ ಕಲ್ಪಿಸುವ ಉದ್ದೇಶದಿಂದ ನೂತನ ಬಸ್ ನಿಲ್ದಾಣದ ಗುರಿ ಹೊಂದಲಾಗಿದೆ. ಈಗಿರುವ ನಿಲ್ದಾಣವನ್ನು ಆಧುನೀಕರಣಗೊಳಿಸಿದರೂ ಸ್ಥಳಾವಕಾಶದ ಕೊರತೆ ಎದುರಾಗುತ್ತದೆ. ಆದ್ದರಿಂದ 4.5 ಎಕರೆ ವಿಸ್ತೀರ್ಣವನ್ನು ಹೊಂದಿರುವ ಬಸ್ ಡಿಪೋ ಜಾಗದಲ್ಲೇ ನೂತನ ನಿಲ್ದಾಣ ನಿರ್ಮಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.ಇತ್ತೀಚಿನ ದಿನಗಳಲ್ಲಿ ಕೆಎಸ್ರ್ಟಿಸಿ ಬಸ್ ನಿಲ್ದಾಣದಲ್ಲಿ ಕಳವು ಪ್ರಕರಣಗಳು ಹೆಚ್ಚುತ್ತಿದ್ದು, ಕಳ್ಳತನ ಪ್ರಕರಣಗಳು ನಡೆಯದಂತೆ ನಿಗಾ ವಹಿಸಲು ಪೊಲೀಸ್ ಇಲಾಖೆ ಸಿಬ್ಬಂದಿ ಮತ್ತು ಕೆಎಸ್ಆರ್ಟಿಸಿ ಸಿಬ್ಬಂದಿ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಪಾಂಡವಪುರ ಬಸ್ಗಳು ನಿಲುಗಡೆಗೊಳ್ಳುವ ಸ್ಥಳದಲ್ಲಿ ಪ್ರಯಾಣಿರಿಗೆ ಅನುಕೂಲ ಕಲ್ಪಿಸುವುದಕ್ಕಾಗಿ ಶೆಲ್ಟರ್ ವ್ಯವಸ್ಥೆ ಹಾಗೂ ಆಸನಗಳ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಜೊತೆಗೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಅಗತ್ಯತೆಗಳ ಪ್ರಸ್ತಾವನ್ನು ಸಲ್ಲಿಸಿದರೆ ಸರ್ಕಾರದೊಂದಿಗೆ ಸಮಾಲೋಚಿಸಿ ಅನುದಾನ ಬಿಡುಗಡೆ ಮಾಡಿಸುವುದಾಗಿ ಭರವಸೆ ನೀಡಿದರು.
ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಎಂ.ಶರಣ ಬಸವರಾಜು, ನಿಯಂತ್ರಣಾಧಿಕಾರಿ ಚನ್ನಬಸಪ್ಪ, ಭದ್ರತಾಧಿಕಾರಿ ರವೀಂದ್ರ, ಲೆಕ್ಕಾಧಿಕಾರಿ ರವಿಕುಮಾರ್, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್. ಸಂದೇಶ್ ಇತರರು ಹಾಜರಿದ್ದರು.