ಹಾಸನಾಂಬೆ ದರ್ಶನ ಪಡೆದ ನೂತನ ಡೀಸಿ ಲತಾಕುಮಾರಿ

KannadaprabhaNewsNetwork |  
Published : Jun 19, 2025, 11:49 PM IST
19ಎಚ್ಎಸ್ಎನ್21ಎ : ತಮ್ಮ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಾಂತಲಾ ಅವರಿಂದ ಹೂಗುಚ್ಛ ಸ್ವೀಕರಿಸಿ ಅಧಿಕಾರಿ ಸ್ವೀಕರಿಸಿದರು. | Kannada Prabha

ಸಾರಾಂಶ

ನೂತನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಕಚೇರಿಗೆ ಬರುವುದಕ್ಕೂ ಮೊದಲು ನಗರದಲ್ಲಿರುವ ಅಧಿದೇವತೆ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ನಂತರ ತಮ್ಮ ಕಚೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದರು. ನೂತನ ಡೀಸಿ ಕೆ.ಎಸ್. ಲತಾಕುಮಾರಿ ಮಾಧ್ಯಮದೊಂದಿಗೆ ಮಾತನಾಡಿ, ನಮ್ಮ ತಂದೆ- ತಾಯಿ ಅವರ ಉಪಸ್ಥಿತಿಯಲ್ಲಿ ಉನ್ನತ ಹುದ್ದೆಯ ಅಧಿಕಾರ ಸ್ವೀಕರಿಸಿರುವುದು ತುಂಬ ಸಂತೋಷ ತಂದಿದೆ. ತಂದೆ ಅವರಿಂದ ಹಸಿರು ಇಂಕಿನ ಪೆನ್ನು ಪಡೆದು ಸಿಟಿಸಿಗೆ ಸಹಿ ಮಾಡಿದ್ದು, ನಾನು ಉನ್ನತ ಹುದ್ದೆಗೇರುವುದು ನಮ್ಮ ತಂದೆ ಅವರ ಕನಸ್ಸಾಗಿತ್ತು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲೆಗೆ ಗುರುವಾರ ಆಗಮಿಸಿದ ನೂತನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಕಚೇರಿಗೆ ಬರುವುದಕ್ಕೂ ಮೊದಲು ನಗರದಲ್ಲಿರುವ ಅಧಿದೇವತೆ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ನಂತರ ತಮ್ಮ ಕಚೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದರು.

ನೂತನ ಡೀಸಿ ಕೆ.ಎಸ್. ಲತಾಕುಮಾರಿ ಮಾಧ್ಯಮದೊಂದಿಗೆ ಮಾತನಾಡಿ, ನಮ್ಮ ತಂದೆ- ತಾಯಿ ಅವರ ಉಪಸ್ಥಿತಿಯಲ್ಲಿ ಉನ್ನತ ಹುದ್ದೆಯ ಅಧಿಕಾರ ಸ್ವೀಕರಿಸಿರುವುದು ತುಂಬ ಸಂತೋಷ ತಂದಿದೆ. ತಂದೆ ಅವರಿಂದ ಹಸಿರು ಇಂಕಿನ ಪೆನ್ನು ಪಡೆದು ಸಿಟಿಸಿಗೆ ಸಹಿ ಮಾಡಿದ್ದು, ನಾನು ಉನ್ನತ ಹುದ್ದೆಗೇರುವುದು ನಮ್ಮ ತಂದೆ ಅವರ ಕನಸ್ಸಾಗಿತ್ತು ಎಂದು ತಿಳಿಸಿದರು.

ಪ್ರತಿ ವರ್ಷ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು ತೆಗೆದು ದರ್ಶನ ನೀಡಲಾಗುತ್ತದೆ. ನಾಡಿನ ವಿವಿಧ ಭಾಗಗಳಿಂದ ಜನರು ಆಗಮಿಸುತ್ತಾರೆ. ಜಿಲ್ಲಾಧಿಕಾರಿಯಾಗಿ ನೇಮಕಗೊಂಡಾಗ ವಿಕಿಪೀಡಿಯಾ ಮೂಲಕ ಮಾಹಿತಿ ಪಡೆದು ಇಲ್ಲಿಗೆ ಬಂದಿದ್ದು, ದೇವಸ್ಥಾನದ ಕಿಂಡಿಯಿಂದ ದೇವಿ ನೋಡಬಹುದು ಎಂದುಕೊಂಡಿದ್ದೆನು. ಆದರೆ ಇಲ್ಲಿ ಕಠಿಣ ನಿಯಮಗಳಿವೆ ಎಂಬುದು ಈಗ ತಿಳಿದಿದೆ. ದೇವರಲ್ಲಿ ಒಂದು ನಂಬಿಕೆ. ಅಮ್ಮನ ಆಶೀರ್ವಾದ ಪಡೆದು ಜಿಲ್ಲೆಯಲ್ಲಿ ಒಳ್ಳೆಯ ಕೆಲಸ ಮಾಡಲು ಮೊದಲ ಹೆಜ್ಜೆ ಇಟ್ಟಿದ್ದೇನೆ ಎಂದರು. ಡೀಸಿ ಆಗುವುದು ಐಎಎಸ್ ಆದ ಎಲ್ಲರ ಕನಸು, ಅಂತಹ ಅವಕಾಶ ಹಾಸನ ಜಿಲ್ಲೆಯಲ್ಲಿ ನನಗೆ ಸಿಕ್ಕಿದೆ. ಇದು ನನ್ನ ಅದೃಷ್ಟ. ಹಾಸನಾಂಬೆ ಆಶೀರ್ವಾದದಿಂದ ಸಂವಿಧಾನದ ನಿಯಮದಂತೆ ಪ್ರಾಮಾಣಿಕತೆ, ನಿಷ್ಠೆಯಿಂದ ಕೆಲಸ ಮಾಡುವೆನು. ತಿರುಪತಿಯಂಥ ಸ್ಥಳದಲ್ಲಿ ಲಕ್ಷ ಲಕ್ಷ ಜನರು ಬರ್ತಾರೆ. ಇಲ್ಲಿಯೂ ಭಕ್ತರು ಸುಗಮವಾಗಿ ಹಾಸನಾಂಬೆ ದರ್ಶನ ವ್ಯವಸ್ಥೆಗಾಗಿ ಪ್ರಯತ್ನಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉಪವಿಭಾಗಾಧಿಕಾರಿ ಮಾರುತಿ, ತಹಸೀಲ್ದಾರ್ ಸೇರಿ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ