ಸರ್ಕಾರಿ ಬಸ್‌ ಹೊಸ ಮಾರ್ಗ ಪ್ರಯಾಣಿಕರಿಗೆ ಅನುಕೂಲ: ಇಂದಿರಾ ನಗರ ರಘು

KannadaprabhaNewsNetwork |  
Published : Jun 04, 2026, 01:45 AM IST
ನರಸಿಂಹರಾಜಪುರ ಬಸ್ಸು ನಿಲ್ದಾಣಕ್ಕೆ ಬಂದ ಬೆಲಗೂರು- ಶೃಂಗೇರಿ ಮಾರ್ಗದ ಸರ್ಕಾರಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕರಿಗೆ ಗ್ಯಾರಂಟಿ ಯೋಜನೆಯ ಸದಸ್ಯರಿಂದ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ನರಸಿಂಹರಾಜಪುರಬೆಲಗೂರಿನಿಂದ ಶೃಂಗೇರಿಗೆ ನೂತನ ಬಸ್ ಸಂಚಾರ ಪ್ರಾರಂಭಿಸಿರುವುದು ಮಹಿಳಾ ಪ್ರಯಾಣಿಕರಿಗೆ ಅತ್ಯಂತ ಅನುಕೂಲವಾಗಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಇಂದಿರಾನಗರ ರಘು ಹರ್ಷ ವ್ಯಕ್ತಪಡಿಸಿದರು.

- ಬೆಲಗೂರು- ಶೃಂಗೇರಿ ಮಾರ್ಗದ ಬಸ್ಸು ಸಂಚಾರ- ಎನ್.ಆರ್.ಪುರ ಬಸ್ಸು ನಿಲ್ದಾಣದಲ್ಲಿ ಬಸ್ಸಿಗೆ ಪೂಜೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರಬೆ

ಲಗೂರಿನಿಂದ ಶೃಂಗೇರಿಗೆ ನೂತನ ಬಸ್ ಸಂಚಾರ ಪ್ರಾರಂಭಿಸಿರುವುದು ಮಹಿಳಾ ಪ್ರಯಾಣಿಕರಿಗೆ ಅತ್ಯಂತ ಅನುಕೂಲವಾಗಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಇಂದಿರಾನಗರ ರಘು ಹರ್ಷ ವ್ಯಕ್ತಪಡಿಸಿದರು.

ಮಂಗಳವಾರ ಬೆಲಗೂರಿನಿಂದ ಶೃಂಗೇರಿ ಮಾರ್ಗಕ್ಕೆ ಕೆಎಸ್.ಆರ್.ಟಿ. ಬಸ್ ನೂತನವಾಗಿ ಸಂಚಾರ ಪ್ರಾರಂಭಿಸಿದ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ಪೂಜೆ ಸಲ್ಲಿಸಿ ಮಾತನಾಡಿದರು. ಶೃಂಗೇರಿ ಕ್ಷೇತ್ರದ ಶಾಸಕರು ಹಾಗೂ ಹೊಸದುರ್ಗ ಶಾಸಕರು ಈ ಬಸ್ ಸಂಚಾರಕ್ಕಾಗಿ ಶ್ರಮವಹಿಸಿದ್ದು ಇದರಿಂದ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಅತ್ಯಂತ ಅನುಕೂಲಕರವಾಗಿದೆ. ಈ ಮಾರ್ಗವೂ ಕೂಡ ಸೂಕ್ತ ಮಾರ್ಗವಾಗಿದೆ. ಈ ಬಸ್ಸಿನ ಸದುಪಯೋಗವನ್ನು ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಜುಬೇದಾ ಮಾತನಾಡಿ, ಈ ಬಸ್ ಸಂಚಾರದಿಂದ ಮಹಿಳಾ ಯಾತ್ರಿ ಕರಿಗೆ ಧಾರ್ಮಿಕ ಸ್ಥಳಕ್ಕೆ ತೆರಳಲು ಹಾಗೂ ತರೀಕೆರೆ ಮಾರ್ಗಕ್ಕೆ ಅಧಿಕಾರಿಗಳಿಗೆ, ಕುವೆಂಪು ಯೂನಿ ವರ್ಸಿಟಿಗೆ ತೆರಳುವ ವಿದ್ಯಾರ್ಥಿಗಳಿಗೂ ಬಹಳಷ್ಟು ಅನುಕೂಲವಾಗಲಿದೆ ಎಂದರು.ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಬಸ್‌ಗೆ ಪೂಜೆ ಸಲ್ಲಿಸಿ ಸಿಹಿ ಹಂಚಿ, ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು. ಇದೇ ಸಂದರ್ಭದಲ್ಲಿ ನೂತನ ಬಸ್‌ನ ಚಾಲಕ ಹಾಗೂ ನಿರ್ವಾಹಕರಿಗೆ ಶಾಲು ಹೊದಿಸಿ, ಹಾರ ಹಾಕಿ ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಬೇಸಿಲ್, ನಾಗರಾಜ್, ಹೂವಮ್ಮ, ನಿತ್ಯಾನಂದ, ಕಾಂಗ್ರೆಸ್ ಪಕ್ಷದ ಮುಖಂಡರಾದ ಈಚಿಕೆರೆ ಸುಂದರೇಶ್, ಸಮೀರಾ ನಹೀಂ, ಬಿ.ವಿ.ಉಪೇಂದ್ರ, ಸುನೀಲ್‌ಕುಮಾರ್, ನಾಗೇಶ್‌ಪೂಜಾರಿ, ಪೊಲೀಸ್ ಠಾಣಾಧಿಕಾರಿ ನೂತನ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊಸ ವೇತನ ಶ್ರೇಣಿ ಜಾರಿಗೆ ಒತ್ತಾಯಿಸಿ ಮನವಿ
ಜಿಲ್ಲೆಯಲ್ಲಿ ಎಸ್ಐಆರ್‌ ಪ್ರಕ್ರಿಯೆ ಆರಂಭ: ಡಿಸಿ