ನಗರದ ಹೊರವಲಯದಲ್ಲಿರುವ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನವಾಗಿದ್ದು, ಇದೇ ಮೊದಲ ಬಾರಿ ಹೊರ ರಾಜ್ಯದಿಂದ ಹುಲಿ, ಸಿಂಹಗಳನ್ನು ತರಿಸಲಾಗಿದೆ.
ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನವಾಗಿದ್ದು, ಇದೇ ಮೊದಲ ಬಾರಿ ಹೊರ ರಾಜ್ಯದಿಂದ ಹುಲಿ, ಸಿಂಹಗಳನ್ನು ತರಿಸಲಾಗಿದೆ.
ಶಿವಮೊಗ್ಗ ಮೃಗಾಲಯಕ್ಕೆ ಇದೆ ಮೊದಲ ಬಾರಿ ಬಿಳಿ ಹುಲಿ ಆಗಮನವಾಗಿದೆ. ಔರಂಗಾಬಾದ್ ಮೃಗಾಲಯದಿಂದ 2 ವರ್ಷದ ವಿಕ್ರಂ ಹುಲಿ ತರಿಸಲಾಗಿದೆ. ತ್ಯಾವರೆಕೊಪ್ಪ ಸಫಾರಿಗೆ ಮೂರು ಬಂಗಾಳ ಹುಲಿಗಳು ಆಗಮಿಸಿವೆ. ಔರಂಗಾಬಾದ್ ಸಫಾರಿಯಿಂದ ಎರಡು ಹೆಣ್ಣು ಹುಲಿಗಳು 2 ವರ್ಷದ ಶ್ರಾವಣಿ ಮತ್ತು 5 ವರ್ಷದ ರೋಹಿಣಿ, ಇಂದೋರ್ ಮೃಗಾಲಯದಿಂದ 3 ವರ್ಷ ಭದ್ರಾ ಆಗಮಿಸಿದೆ. ಇಂದೋರ್ ಮೃಗಾಲಯದಿಂದ ಎರಡು ಸಿಂಹಗಳು ಆಗಮಿಸಿವೆ. 2 ವರ್ಷದ ಸಿಂಹ ಶಿವ, 2 ವರ್ಷದ ಸಿಂಹಿಣಿ ಸಾರಾ ಆಗಮಿಸಿವೆ. ಶಿವಮೊಗ್ಗಕ್ಕೆ ಆಗಮಿಸಿದಾಗಿನಿಂದ ಕ್ವಾರಂಟೈನ್ನಲ್ಲಿದ್ದ ಪ್ರಾಣಿಗಳು ಈಗ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.