- 100ರಿಂದ 500 ಎಕ್ರೆ ಬಡಾವಣೆ ನಿರ್ಮಾಣ । ಸೋವಿ ದರದಲ್ಲಿ ಸೈಟ್: ಸಚಿವ ಬೈರತಿ ಸೂಚನೆಕನ್ನಡಪ್ರಭ ವಾರ್ತೆ ಬೆಂಗಳೂರು
ವಿಧಾನಸೌಧದಲ್ಲಿ ಮಂಗಳವಾರ ರಾಜ್ಯದ ಎಲ್ಲ 31 ನಗರಾಭಿವೃದ್ಧಿ ಪ್ರಾಧಿಕಾರಿಗಳ ಆಯುಕ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸುರೇಶ್, ನಗರಾಭಿವೃದ್ಧಿ ಪ್ರಾಧಿಕಾರಿಗಳಲ್ಲಿ ಚಾಲ್ತಿಯಲ್ಲಿರುವ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಜನರಿಗೆ ಕಡಿಮೆ ಬೆಲೆಯಲ್ಲಿ ನಿವೇಶನ ನೀಡುವ ಸಲುವಾಗಿ ರಾಜ್ಯದಲ್ಲಿ ಎಲ್ಲ ನಗರಾಭಿವೃದ್ಧಿ ಪ್ರಾಧಿಕಾರಿಗಳು ತಾವೇ ಜಮೀನನ್ನು ಗುರುತಿಸಿ ಅದನ್ನು ಖರೀದಿ ಮಾಡಿ ಬಡಾವಣೆ ಅಭಿವೃದ್ಧಿಪಡಿಸಿ, ಜನರಿಗೆ ಹಂಚಿಕೆ ಮಾಡಬೇಕು. ಮೈಸೂರು, ಬೆಳಗಾವಿಯಂತಹ ವ್ಯಾಪ್ತಿ ದೊಡ್ಡದಿರುವ ನಗರಾಭಿವೃದ್ಧಿ ಪ್ರಾಧಿಕಾರಗಳು ತಲಾ 500 ಎಕರೆ, ತುಮಕೂರು ಸೇರಿ ಇನ್ನಿತರ ವ್ಯಾಪ್ತಿ ಕಡಿಮೆ ಇರುವ ಪ್ರಾಧಿಕಾರಗಳು ತಲಾ 200 ಎಕರೆ ಹಾಗೂ ತಾಲೂಕು ಮಟ್ಟದ ಪ್ರಾಧಿಕಾರಗಳು ತಲಾ 100 ಎಕರೆ ಭೂಮಿಯನ್ನು ಗುರುತಿಸಿ ಅಲ್ಲಿ ಬಡಾವಣೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ತಾಕೀತು ಮಾಡಿದರು.ಭೂಮಿ ಗುರುತಿಸುವುದು ಹಾಗೂ ಬಡಾವಣೆ ನಿರ್ಮಾಣ ಕಾರ್ಯದ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸಬೇಕು. ಮುಂದಿನ ಒಂದು ವರ್ಷದಲ್ಲಿ 1 ಲಕ್ಷ ನಿವೇಶನಗಳನ್ನು ರಚಿಸಿ, ಅವುಗಳನ್ನು ಹಂಚಿಕೆ ಮಾಡುವ ಗುರಿಯನ್ನು ಇಟ್ಟುಕೊಂಡು ಕೆಲಸ ಮಾಡಬೇಕು. ಭೂಸ್ವಾಧೀನಕ್ಕೆ ತಗಲುವ ವೆಚ್ಚ, ಕಚೇರಿ ವೆಚ್ಚವನ್ನಾಧರಿಸಿ ನಿವೇಶನಗಳಿಗೆ ಅತಿಕಡಿಮೆ ದರ ನಿಗದಿ ಮಾಡಿ ಮಾರಾಟ ಮಾಡಬೇಕು ಎಂದು ಸೂಚಿಸಿದರು.
ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ನಗರಾಭಿವೃದ್ದಿ ಪ್ರಾಧಿಕಾರಗಳು ಮತ್ತು ನಗರ-ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತ ವೆಂಕಟಾಚಲಪತಿ, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕ ತಿಪ್ಪೇಸ್ವಾಮಿ ಇತರರಿದ್ದರು.
ಸೈಟ್ ವಿತರಣೆ ಶುರು?