ಮಳೆಯನ್ನು ಲೆಕ್ಕಿಸದೇ ಮಹದೇಶ್ವರನಿಗೆ ಅಮಾವಾಸ್ಯೆ ಪೂಜೆ

KannadaprabhaNewsNetwork |  
Published : May 28, 2025, 12:00 AM IST
27ಸಿಎಚ್‌ಎನ್‌51, 52ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ  ಪ್ರಯುಕ್ತ ಮಳೆಯನ್ನು ಲೆಕ್ಕಿಸದೇ ಪೂಜೆ ಸಲ್ಲಿಸಲು ಭಕ್ತರು ಆಗಮಿಸಿರುವುದು. | Kannada Prabha

ಸಾರಾಂಶ

ಮಲೆ ಮಹದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ ಪ್ರಯುಕ್ತ ಬೆಳಗಿನ ಜಾವದಿಂದಲೇ ಅಭಿಷೇಕ ಪೂಜಾ ಕಾರ್ಯಕ್ರಮಗಳು ಸಂಭ್ರಮ ಸಡಗರದೊಂದಿಗೆ ಜರುಗಿತು.

ಕನ್ನಡಪ್ರಭ ವಾರ್ತೆ ಹನೂರುತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ ಪ್ರಯುಕ್ತ ಮಳೆಯನ್ನು ಲೆಕ್ಕಿಸದೇ ಭಕ್ತರು ಪೂಜೆ ಸಲ್ಲಿಸಿದರು.ಮಲೆ ಮಾದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಅಮಾವಾಸ್ಯೆ ಪೂಜೆಯನ್ನು ಸಾಲೂರು ಬೃಹನ್ ಮಠದ ಪೀಠಾಧಿಪತಿ ಶಾಂತ ಮಲ್ಲಿಕಾರ್ಜುನ ಸ್ವಾಮಿ ದಿವ್ಯ ಸಾನಿಧ್ಯದಲ್ಲಿ ಬೇಡಗಂಪಣ ಅರ್ಚಕರ ಸರದಿಯಂತೆ ಸಾಂಪ್ರದಾಯಿಕವಾಗಿ ಪೂಜಾ ಕಾರ್ಯಕ್ರಮವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಭ್ರಮ ಸಡಗರದಿಂದ ಜರುಗಿತು.

ಮಲೆ ಮಹದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ ಭಕ್ತಾದಿಗಳು ಬೆಳ್ಳಿ ರಥೋತ್ಸವ, ಹುಲಿ ವಾಹನ ಉತ್ಸವ, ರುದ್ರಾಕ್ಷಿ ಮಂಟಪೋತ್ಸವ, ಮಾದೇಶ್ವರನ ಉತ್ಸವ ಹಾಗೂ ಉರುಳು ಸೇವೆ ಮತ್ತು ಪಂಜಿನ ಸೇವೆ, ಮುಡಿಸೇವೆ ದೂಪದ ಸೇವೆ ಸೇರಿದಂತೆ ಹಲವು ಉತ್ಸವಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಮಾದೇಶ್ವರನಿಗೆ ಬೆಳಗಿನ ಜಾವದಿಂದಲೇ ಅಭಿಷೇಕ ಪೂಜಾ ಕಾರ್ಯಕ್ರಮಗಳು ಸಂಭ್ರಮ ಸಡಗರದೊಂದಿಗೆ ಜರುಗಿತು.ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆದ ಅಮಾವಾಸ್ಯೆ ಪೂಜೆಗೆ ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ ಭಕ್ತಾದಿಗಳು ಸರದಿ ಸಾಲಿನಲ್ಲಿ ನಿಂತು ಮಾದೇಶ್ವರನ ದರ್ಶನ ಪಡೆದು ವಿಶೇಷ ಉತ್ಸವಗಳಲ್ಲಿ ಪಾಲ್ಗೊಳ್ಳುವ ಮೂಲಕ ಇಷ್ಟಾರ್ಥ ಸಿದ್ಧಿಸುವಂತೆ ಮಾದೇಶ್ವರನಿಗೆ ಜೈಕಾರಗಳನ್ನು ಕೂಗುವ ಮೂಲಕ ಭಕ್ತಿ ಸಮರ್ಪಿಸಿದರು.

ವಿಶೇಷ ದಾಸೋಹ:

ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಮಾವಾಸ್ಯೆ ವಿಶೇಷ ಪೂಜೆಗೆ ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ ಭಕ್ತಾದಿಗಳಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ದಾಸೋಹ ಭವನದಲ್ಲಿ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.ಸಾಲೂರು ಮಠಕ್ಕೆ ಭೇಟಿ:

ಮಲೆ ಮಾದೇಶ್ವರ ಬೆಟ್ಟಕ್ಕೆ ಬಂದಂತ ಭಕ್ತಾದಿಗಳು ಅಮಾವಾಸ್ಯೆ ಪ್ರಯುಕ್ತ ಮಾದೇಶ್ವರನ ದರುಶನ ಪಡೆದು ಶ್ರೀ ಕ್ಷೇತ್ರದ ಶಾಲೂರು ಮಠಕ್ಕೆ ಮಾದಪ್ಪನ ಭಕ್ತಾದಿಗಳು ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದು ಅಲ್ಲಿನ ದಾಸೋಹದಲ್ಲಿ ದಾಸೋಹ ಮೂಲಕ ಭಕ್ತಾದಿಗಳು ತಮ್ಮ ಇಷ್ಟಾರ್ಥ ಸಿದ್ಧಿಸುವಂತೆ ಮಾದೇಶ್ವರನಲ್ಲಿ ನಿವೇದನೆ ಮಾಡಿಕೊಂಡರು.ಸೂಕ್ತ ಬಂದೋಬಸ್ತ್:

ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಮಾವಾಸ್ಯೆ ಪೂಜೆಗೆ ರಾಜ್ಯದ ನಾನಾ ಭಾಗಗಳಿಂದ ಅಪಾರ ಸಂಖ್ಯೆಯ ಭಕ್ತಾದಿಗಳು ಆಗಮಿಸಿರುವ ಹಿನ್ನೆಲೆಯಲ್ಲಿ ಯಾವುದೇ ಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತ ಕ್ರಮವಾಗಿ ಪೋಲಿಸ್ ಇಲಾಖೆ ಆಯಾ ಕಟ್ಟಿನ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡುವ ಮೂಲಕ ಬಿಗಿ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

------

27ಸಿಎಚ್‌ಎನ್‌51, 52

ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ ಪ್ರಯುಕ್ತ ಮಳೆಯನ್ನು ಲೆಕ್ಕಿಸದೇ ಪೂಜೆ ಸಲ್ಲಿಸಲು ಭಕ್ತರು ಆಗಮಿಸಿರುವುದು.

----------

PREV

Recommended Stories

ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್