ಕನ್ನಡಪ್ರಭ ವಾರ್ತೆ ಹೊಸಪೇಟೆ
ನಗರದ ಪತ್ರಿಕಾಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಒಳಮೀಸಲಾತಿ ಜಾರಿ ಮಾಡುವ ಅಧಿಕಾರ ರಾಜ್ಯಗಳಿಗೆ ದಕ್ಕಿದ ನಂತರವೂ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಅತ್ಯಂತ ನಿಧಾನಗತಿಯಲ್ಲಿ ತೆವಳುತ್ತಿದೆ. ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ ಹರ್ಯಾಣ, ತೆಲಂಗಾಣ, ಆಂಧ್ರಪ್ರದೇಶ ಸರ್ಕಾರಗಳು ಒಳಮೀಸಲಾತಿ ಜಾರಿಗೊಳಿಸಿಡಿವೆ. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ನೆಪ ಹುಡುಕುತ್ತಾ ಮೀನಾಮೇಷ ಎಣಿಸುತ್ತಿದೆ ಎಂದು ದೂರಿದರು.ಮಾದಿಗ ಸಮುದಾಯ ಆಯೋಗ ರಚಿಸಲು ಬೇಡಿಕೆ ಇಟ್ಟಿರಲಿಲ್ಲ. ಇದಕ್ಕೂ ಕಾಲಹರಣ ಮಾಡಲಾಯಿತು. ಕಳೆದ ೩೦ ವರ್ಷದಿಂದ ಒಳ ಮೀಸಲಾತಿ ಹೋರಾಟವನ್ನು ವಿರೋಧಿಸುತ್ತಿದ್ದ ಶಕ್ತಿಗಳೇ ಸರ್ಕಾರದ ಮೇಲೆ ಒತ್ತಡ ಹೇರಿ ಆಯೋಗ ರಚನೆ ಮಾಡಿಸಿದವು. ಪ್ರಮುಖ ನಾಯಕರೇ ಇದಕ್ಕೆ ಕಾರಣ. ಈಗ ಹೊಸ ಸಮೀಕ್ಷೆ ಆಗಬೇಕೆಂಬ ಬೇಡಿಕೆ ಬಂದಿದೆ. ಇದು ಕಾಲಹರಣ ಮಾಡುವ ತಂತ್ರವಾಗಿದೆ. ಈ ನಿಧಾನ ದ್ರೋಹವನ್ನು ಮಾದಿಗ ಸಮಾಜ ಒಪ್ಪುವುದಿಲ್ಲ. ಮಧ್ಯಂತರ ವರದಿಯಲ್ಲಿ ಮಾದಿಗ ಸಮಾಜದ ಶೇ. ೬ ರ ಪ್ರತ್ಯೇಕ ಮೀಸಲಾತಿ ಜಾರಿ ಮಾಡಿ ಮತ್ತೆ ಸಮೀಕ್ಷೆ ಮಾಡಿ ಎಂಬುದು ನಮ್ಮ ಬೇಡಿಕೆಯಾಗಿತ್ತು. ಆದರೆ, ಆಯೋಗ ವರ್ಗೀಕರಣದ ವಿಷಯ ಬದಿಗಿಟ್ಟು, ಹಸಿದು ಕಂಗಾಲಾಗಿರುವ ಮಾದಿಗ ಸಮಾಜಕ್ಕೆ ಮತ್ತೊಂದು ಸಮೀಕ್ಷೆಯ ಶಿಫಾರಸ್ಸು ಮಾಡಿರುವುದು ಅನ್ಯಾಯವಾಗಿದೆ ಎಂದರು.
ಬಂಜಾರ ಸಮುದಾಯದ ರಾಜು ಕುಡಚಿ, ಉಮೇಶ್ ಜಾಧವ್ ಮತ್ತು ಬೋವಿ ಸಮುದಾಯದ ಮುಖಂಡರೇ ಒಳಮೀಸಲಾತಿ ಪರವಾಗಿದ್ದಾರೆ. ಆದರೆ, ಸರ್ಕಾರದ ಯಾವುದೇ ಸಚಿವ, ಶಾಸಕರು ಈ ಬಗ್ಗೆ ಮಾತನಾಡದಿರುವುದು ದುರಂತ. ಇನ್ನೂ ಮುಂದೂಡುವ ಪ್ರಯತ್ನ ಮಾಡಿದರೆ ಬೃಹತ್ ಹೋರಾಟ ಅನಿವಾರ್ಯವಾಗಲಿದೆ ಎಂದರು.