ಕುಶಲಕರ್ಮಿಗಳ ಬದುಕಿಗೆ ಹೊಸ ಚೈತನ್ಯ: ಕೋಟಾ ಶ್ರೀನಿವಾಸ ಪೂಜಾರಿ

KannadaprabhaNewsNetwork |  
Published : Mar 14, 2026, 01:15 AM IST
ಸ | Kannada Prabha

ಸಾರಾಂಶ

ಚಿಕ್ಕಮಗಳೂರುಸಮಾಜದ ಕಟ್ಟಕಡೆ ಕುಶಲಕರ್ಮಿಗಳ ಬದುಕಿನಲ್ಲಿ ಆರ್ಥಿಕ ಕ್ರಾಂತಿ ಉಂಟು ಮಾಡುವ ಉದ್ದೇಶದಿಂದ ಜಾರಿಗೆ ತರಲಾದ ಪ್ರಧಾನ ಮಂತ್ರಿ ವಿಶ್ವಕರ್ಮಯೋಜನೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಮೂರು ದಿನದ ಪ್ರಧಾನಮಂತ್ರಿ ವಿಶ್ವಕರ್ಮ ವಸ್ತು ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಸಮಾಜದ ಕಟ್ಟಕಡೆ ಕುಶಲಕರ್ಮಿಗಳ ಬದುಕಿನಲ್ಲಿ ಆರ್ಥಿಕ ಕ್ರಾಂತಿ ಉಂಟು ಮಾಡುವ ಉದ್ದೇಶದಿಂದ ಜಾರಿಗೆ ತರಲಾದ ಪ್ರಧಾನ ಮಂತ್ರಿ ವಿಶ್ವಕರ್ಮಯೋಜನೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ನಗರದ ಆಜಾದ್ ಪಾರ್ಕ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನದ ಪ್ರಧಾನಮಂತ್ರಿ ವಿಶ್ವಕರ್ಮ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿ ಸಾಂಪ್ರದಾಯಿಕ ಕುಲ ಕಸುಬುಗಳನ್ನು ಕೇವಲ ಜೀವನೋಪಾಯಕ್ಕೆ ಸೀಮಿತಗೊಳಿಸದೆ ಅವುಗಳನ್ನು ಆಧುನಿಕ ಮಾರುಕಟ್ಟೆ ಬೇಡಿಕೆಗೆ ತಕ್ಕಂತೆ ರೂಪಿಸುವುದು ಈ ಯೋಜನೆ ಆಶಯ. ಉದಾಹರಣೆಗೆ, ಕುಂಬಾರರು ತಯಾರಿಸುವ ಮಣ್ಣಿನ ಪಾತ್ರೆಗಳನ್ನು ಸುಧಾರಿತ ತಂತ್ರಜ್ಞಾನದ ಮೂಲಕ ಆಕರ್ಷಕವಾಗಿ ವಿನ್ಯಾಸಗೊಳಿಸಿ ವಿದೇಶಗಳಿಗೆ ರಫ್ತು ಮಾಡುವ ಹಂತಕ್ಕೆ ಬೆಳೆಸಲಾಗುತ್ತಿದೆ. ಇದರಿಂದ ಗ್ರಾಮೀಣ ಭಾಗದ ಕಲೆಗೆ ಜಾಗತಿಕ ಮನ್ನಣೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ₹21 ಕೋಟಿ ಸಾಲ ವಿತರಣೆಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ ಈವರೆಗೆ ಸುಮಾರು 7500 ಕುಶಲಕರ್ಮಿಗಳು ಯೋಜನೆ ಲಾಭ ಪಡೆದಿದ್ದಾರೆ. ಈ ಪೈಕಿ 4 ಸಾವಿರ ಜನರಿಗೆ ತರಬೇತಿ ನೀಡಲಾಗಿದೆ. ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳ ಮೂಲಕ ₹21 ಕೋಟಿ ಸಾಲ ಸೌಲಭ್ಯ ವಿತರಿಸಲಾಗಿದೆ. ಶೇ.5ರಷ್ಟು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ₹1 ಲಕ್ಷ ದಿಂದ ₹3 ಲಕ್ಷ ದವರೆಗೆ ನೀಡಲಾಗುತ್ತಿರುವ ಸಾಲ ಕುಶಲಕರ್ಮಿಗಳಿಗೆ ದೊಡ್ಡ ಆಸರೆಯಾಗಿದೆ ಎಂದರು.ನೋಂದಾಯಿತ ಕುಶಲಕರ್ಮಿಗಳಿಗೆ ಶಿಷ್ಯವೇತನ ಆಧಾರದ ಒಂದು ವಾರದ ವೃತ್ತಿಪರ ತರಬೇತಿ ನೀಡಲಾಗುತ್ತಿದೆ. ತರಬೇತಿ ಯಶಸ್ವಿ ಪೂರ್ಣಗೊಳಿಸಿದ ನಂತರ, ಸ್ವಂತ ಉದ್ದಿಮೆ ಆರಂಭಿಸಲು ₹15 ಸಾವಿರ ರು. ಮೌಲ್ಯದ ಸುಧಾರಿತ ಪರಿಕರಗಳ ಕಿಟ್‌ ಅನ್ನು ಕೇಂದ್ರ ಸರ್ಕಾರ ಉಚಿತವಾಗಿ ನೀಡುತ್ತಿದೆ ಎಂದು ತಿಳಿಸಿದರು.3 ದಿನಗಳ ಕಾಲ ನಡೆಯಲಿರುವ ಈ ಮೇಳದಲ್ಲಿ ಒಟ್ಟು 54 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ರಾಜ್ಯದ ವಿವಿಧೆಡೆಯಿಂದ ಆಗಮಿಸಿರುವ ಕುಶಲಕರ್ಮಿಗಳು ತಮ್ಮ ಕಲಾಕೃತಿಗಳ ಪ್ರದರ್ಶನ ಹಾಗೂ ಮಾರಾಟ ಮಾಡಲಿದ್ದಾರೆ.

ಕೇಂದ್ರ ಪರಿಸರ ಮೌಲ್ಯಮಾಪನ ಸಮಿತಿ ಅಧ್ಯಕ್ಷ ಎ.ಎನ್.ಮಹೇಶ್ ಮಾತನಾಡಿ, ಪಿಎಂ ವಿಶ್ವಕರ್ಮ ಯೋಜನೆ ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸುವ ಯೋಜನೆಯಾಗಿದೆ. ಆದರೆ, ಫಲಾನುಭವಿಗಳನ್ನು ಗುರುತಿಸುವ ಸಂದರ್ಭದಲ್ಲಿ ಅಧಿಕಾರಿಗಳು ಪ್ರಮಾಣಿಕ ಕೆಲಸ ಮಾಡಬೇಕು. ನಿಜವಾದ ಫಲಾನುಭವಿಗಳಿಗೆ ಯೋಜನೆ ದೊರೆಯುವುದಿಲ್ಲ. ಮಾನದಂಡ ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದರು.

ಸರ್ಕಾರಗಳು ಯೋಜನೆ ಮಾಡುತ್ತವೆ. ಆದರೆ, ಮಾರುಕಟ್ಟೆ ವ್ಯವಸ್ಥೆ ಮಾಡುವುದಕ್ಕೆ ಸಾಧ್ಯವಾಗುವುದಿಲ್ಲ. ಜಾಗತಿಕ ವ್ಯವಸ್ಥೆಯಲ್ಲಿ ವಿದೇಶದಿಂದ ಬಂದ ವಸ್ತುಗಳು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿವೆ. ಇದು ಸ್ಥಳೀಯ ಉದ್ದಿಮೆದಾರರಿಗೆ ತೊಂದರೆ ಆಗಲಿದೆ ಎಂದರು.

ಸಮಾರಂಭದಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮಯೋಜನೆ ರಾಷ್ಟ್ರೀಯ ಸ್ಟೀರಿಂಗ್ ಸಮಿತಿ ಸದಸ್ಯರಾದ ಎಚ್.ಸಿ. ಕಲ್ಮರುಡಪ್ಪ, ಭಾಸ್ಕರ್, ಸಂತೋಷ್‌ ಕೋಟ್ಯಾನ್, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ದಿಶಾ ಕಮಿಟಿ ಸದಸ್ಯ ಮಣಿಕಂಠ, ಎಂ.ಎಸ್.ಎಂ.ಇ ಸಹಾಯಕ‌ ನಿರ್ದೇಶಕ ಜಿ.ನಾಗರಾಜ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ‌ ನಿರ್ದೇಶಕ ಮಹೇಶ್, ಲೀಡ್ ಬ್ಯಾಂಕ್ ಪ್ರಶಾಂತ್ ಪ್ರಭು, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಪ್ರಶಾಂತ್, ಪಿಎಂ ವಿಶ್ವಕರ್ಮ ಯೋಜನೆ‌‌ ಜಿಲ್ಲಾ ಸಂಯೋಜಕ ಸಿ.ಎಸ್.ರಾಕೇಶ್ ಮೊದಲಾದವರಿದ್ದರು.-- ಬಾಕ್ಸ್‌--

ಅನಿಲ ಅಭಾವ ಶೀಘ್ರವೇ ಪರಿಹಾರ: ಕೋಟಾಗಲ್ಫ್ ರಾಷ್ಟ್ರಗಳಲ್ಲಿನ ಯುದ್ಧದ ಪರಿಸ್ಥಿತಿಯಿಂದ ಆಮದಿನಲ್ಲಿ ಸ್ವಲ್ಪ ವ್ಯತ್ಯಯವಾಗಿದೆ. ಈ ಕುರಿತು ವಿದೇಶಾಂಗ ಸಚಿವ ರೊಂದಿಗೆ ಚರ್ಚಿಸಲಾಗಿದೆ. ಜಿಲ್ಲಾಧಿಕಾರಿಗಳ ವರದಿ ಪ್ರಕಾರ, ಗೃಹಬಳಕೆ ಅನಿಲ ಪೂರೈಕೆಯಲ್ಲಿ ಯಾವುದೇ ತೊಂದರೆಯಿಲ್ಲ. ವಾಣಿಜ್ಯ ಬಳಕೆ ಅನಿಲ ಸಮಸ್ಯೆಯೂ ಇನ್ನೆರಡು ದಿನಗಳಲ್ಲಿ ಸುಗಮಗೊಳ್ಳಲಿದೆ ಎಂದು ಸಂಸದ ಕೋಟಾ ಶ್ರೀನಿವಾಸ್‌ ಪೂಜಾರಿ ಭರವಸೆ ನೀಡಿದರು.

--

ಎರಡೂ ಪೋಟೋ ಬಳಸಿ:

ನಗರದ ಅಜಾದ್‌ ಪಾರ್ಕ್‌ ನಲ್ಲಿ ಆಯೋಜಿಸಲಾ್ ಪಿಎಂ ವಿಶ್ವಕರ್ಮ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಸಂಸದ ಕೋಟಾ ಶ್ರೀನಿವಾಸ್‌ ಪೂಜಾರಿ ಶುಕ್ರವಾರ ಚಾಲನೆ ನೀಡಿದರು. ಈ ವೇಳೆ ಎ.ಎನ್.ಮಹೇಶ್, ಎಚ್.ಸಿ. ಕಲ್ಮರುಡಪ್ಪ, ಭಾಸ್ಕರ್, ಸಂತೋಷ್‌ ಕೋಟ್ಯಾನ್, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಇದ್ದರು.

ಫೋಟೋ

ಪಿಎಂ ವಿಶ್ವಕರ್ಮ ವಸ್ತುಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಸಂಸದ ಕೋಟಾ ಶ್ರೀನಿವಾಸ್‌ ಪೂಜಾರಿ ವೀಕ್ಷಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರದ ವಿರುದ್ಧ ಪಾದಯಾತ್ರೆ: ಸಂಸದ ಡಾ.ಕೆ.ಸುಧಾಕರ್‌
ಗೃಹ ಬಳಕೆ ಸಿಲಿಂಡರ್‌ ಅಕ್ರಮ