ಕನ್ನಡಪ್ರಭ ವಾರ್ತೆ ಗುಡ್ಡೆಹೊಸೂರು
ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಸಮುದಾಯ ಭವನದಲ್ಲಿ ಸೋಮವಾರ ನಡೆದ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ಯಾಮೆರಾದಲ್ಲಿ ಫೋಟೋ ಕ್ಲಿಕ್ಕಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಿಕೆಗಳಲ್ಲಿ ಸುದ್ದಿಗಳು ಮಾತ್ರವೇ ಇದ್ದರೆ ಅದು ನೀರಸವಾಗುತ್ತದೆ. ಛಾಯಾಚಿತ್ರ ಇದ್ದರೆ ಮಾತ್ರ ಆ ಸುದ್ದಿಗೆ ಹೆಚ್ಚಿನ ಮಹತ್ವ ಇರುತ್ತದೆ. ಒಂದು ಛಾಯಾಚಿತ್ರ ಸಾವಿರ ಪದಗಳಿಗೆ ಸಮಾನ ಎಂಬುದು ಸತ್ಯ. ಒಂದು ಚಿತ್ರ ಹಲವು ಭಾವನೆಗಳನ್ನು ಹುಟ್ಟುಹಾಕುತ್ತದೆ. ಇಂದು ಸುದ್ದಿ ಛಾಯಾಗ್ರಾಹಕರು ಹಲವು ಸವಾಲುಗಳನ್ನು ಎದುರಿಸುವಂತಾಗಿದೆ. ಛಾಯಾಗ್ರಾಹಕರ ಕಷ್ಟ ಸಾಕಷ್ಟಿದೆ ಎಂದರು.20ನೇ ಶತಮಾನದಲ್ಲಿ ಪ್ರಿಂಟ್ ಫೋಟೋಗ್ರಾಪಿ ಇತ್ತು. ನಂತರ ಡಿಜಿಟಲ್ ಫೋಟೋಗ್ರಫಿ ಆರಂಭವಾಗಿ ಇಂದು ಛಾಯಾಚಿತ್ರ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಿದೆ. ಇಂದು ಮೊಬೈಲ್ ಕ್ಯಾಮೆರಾ ಇರುವುರೆಲ್ಲರೂ ಛಾಯಾಗ್ರಾಹಕರಾಗಲು ಹೊರಟಿರುವುದರಿಂದ ನೈಜ ವೃತ್ತಿಪರ ಛಾಯಾಗ್ರಾಹಕರಿಗೆ ಹೊಡೆತಬಿದ್ದಿದೆ. ಛಾಯಾಗ್ರಾಹಕರಿಗೆ ಸವಾಲು ಹುಟ್ಟುಹಾಕಿದಂತಾಗಿದೆ. ಮುಂದಿನ ದಿನಗಳಲ್ಲಿ ವೃತ್ತಿ ಉಳಿಯುತ್ತದೆಯೋ ಎಂಬ ಆತಂಕ ಉಂಟಾಗಿದೆ ಎಂದು ಹೇಳಿದರು.
ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರುಳೀಧರ್ ಮಾತನಾಡಿ, ಎಲ್ಲರಿಗೂ ಅತ್ಯುತ್ತಮವಾಗಿ ಛಾಯಾಗ್ರಹಣ ಮಾಡಲು ಸಾಧ್ಯವಿಲ್ಲ. ಇದೊಂದು ಕಲೆ ಇದ್ದಂತೆ. ಚಿತ್ರಗಳನ್ನು ತಮ್ಮದೇ ಆದ ಶೈಲಿಯಲ್ಲಿ ಕ್ಲಿಕ್ಕಿಸುವ ಮೂಲಕ ಛಾಯಾಚಿತ್ರಗಾರರು ಚಿತ್ರಗಳಿಗೆ ಜೀವಂತಿಕೆ ತುಂಬುತ್ತಾರೆ ಎಂದು ಹೇಳಿದರು.
ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಪತ್ರಕರ್ತ ಹಾಗೂ ಹವ್ಯಾಸಿ ಛಾಯಾಗ್ರಾಹಕರಾದ ವಿಘ್ನೇಶ್ ಭೂತನಕಾಡು ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಕೆ. ತಿಮ್ಮಪ್ಪ ನಿರೂಪಿಸಿದರು. ಸಂಘದ ಖಜಾಂಚಿ ನವೀನ್ ಚಿನ್ನಪ್ಪ ಸ್ವಾಗತಿಸಿ, ಬಿ.ಎನ್. ರವಿಕುಮಾರ್ ವಂದಿಸಿದರು.