ನೆನಪಿನ ಕಾಣಿಕೆ, ಸಿಹಿ ಹಂಚಿ ಪತ್ರಿಕಾ ವಿತರಕರ ದಿನಾಚರಣೆ

KannadaprabhaNewsNetwork |  
Published : Sep 06, 2026, 02:15 AM IST
4ಕೆಎಂಎನ್ ಡಿ26,27 | Kannada Prabha

ಸಾರಾಂಶ

ಹಲವು ವರ್ಷಗಳಿಂದ ಮುಂಜಾನೆ ಎದ್ದು ಮನೆ ಮನೆಗಳಿಗೆ ಪತ್ರಿಕೆಗಳನ್ನು ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ನಾವು ಸಂಘಟಿತರಾದರೆ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಿದೆ. ಆದ್ದರಿಂದ ಒಗ್ಗಟ್ಟಿನಿಂದ ಕೆಲಸ ಮಾಡಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲಾ ಪತ್ರಿಕಾ ವಿತರಕರ ಸಂಘದ ವತಿಯಿಂದ ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಪತ್ರಿಕಾ ವಿತರಕರಿಗೆ ನೆನಪಿನ ಕಾಣಿಕೆ, ಸಿಹಿ ಹಂಚಿ ಆಚರಣೆ ಮಾಡಲಾಯಿತು.

ಸುಭಾಷ್ ನಗರದ ವಿನೋಬಾ ರಸ್ತೆಯಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ವಿವಿಧ ಪತ್ರಿಕೆಗಳ ವಿತರಕರು ಬೆಳಗಿನ ಜಾವ ಸಂಭ್ರಮದಿಂದ ಒಂದೆಡೇ ಸೇರಿ ಕೇಕ್ ಕತ್ತರಿಸಿ ಸಂಭ್ರಮದಿಂದ ಪತ್ರಿಕಾ ವಿತರಕರ ದಿನವನ್ನು ಆಚರಿಸಿದರು.

ಇದೇ ವೇಳೆ ಸುಮಾರು 30 ರಿಂದ 35 ವರ್ಷಗಳಿಂದಲೂ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪತ್ರಿಕಾ ವಿತರಣೆ ಕೆಲಸ ಮಾಡುತ್ತಿರುವ ಹಿರಿಯ ಪತ್ರಿಕಾ ವಿತರಕರಾದ ಕೆ.ಕೆಂಪಯ್ಯ, ಕಲೀಮ್ ಹಾಗೂ ನಾಗೇಶ್ ಅವರನ್ನು ಅತ್ಮೀಯವಾಗಿ ಸನ್ಮಾನಿಸಲಾಯಿತು. ಇದೇ ವೇಳೆ ತಮ್ಮ ಸಂಘದ ಕ್ಷೇಮಾಭಿವೃದ್ಧಿ ವತಿಯಿಂದ ಎಲ್ಲಾ ಪತ್ರಿಕಾ ವಿತರಕರಿಗೆ ಜರ್ಕಿನ್ , ಗೋಡೆ ಗಡಿಯಾರ, ಸಿಹಿ ಬಾಕ್ಸ್ ಗಳನ್ನು ನೀಡಿ ಶುಭ ಕೋರಿದರು.

ಇದೇ ವೇಳೆ ಹಿರಿಯ ಪತ್ರಿಕಾ ವಿತರಕರು ಮಾತನಾಡಿ, ಎಲ್ಲಾ ಪತ್ರಿಕಾ ವಿತರಕರು ಸಂಘಟಿತರಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಹಲವು ವರ್ಷಗಳಿಂದ ಮುಂಜಾನೆ ಎದ್ದು ಮನೆ ಮನೆಗಳಿಗೆ ಪತ್ರಿಕೆಗಳನ್ನು ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ನಾವು ಸಂಘಟಿತರಾದರೆ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಿದೆ. ಆದ್ದರಿಂದ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಈ ವೇಳೆ ಪತ್ರಿಕಾ ವಿತರಕರಾದ ಸುರೇಶ್, ಗಿರೀಶ್, ಲೋಕೇಶ್, ಶ್ರೀಧರ್, ಮಾದೇಶ, ಮಧು, ಆನಂದ, ಶಿವಲಿಂಗ, ಮಹೇಂದ್ರ, ತುಂಗೇಶ್, ಗಣೇಶ, ಗೋವಿಂದಸ್ವಾಮಿ ಸೇರಿದಂತೆ ವಿವಿಧ ಹಲವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಕೆಲಸಗಳಿಗೆ ಅಲೆದಾಟ ತಪ್ಪಲಿದೆ
ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಗಣನೀಯ ಪ್ರಗತಿ