ಪತ್ರಿಕೆಗಳು ಸಾಮಾನ್ಯ ಜ್ಞಾನದ ಕಣಜ: ರಮೇಶ್

KannadaprabhaNewsNetwork |  
Published : Sep 03, 2026, 01:15 AM IST
ೇ್‌ | Kannada Prabha

ಸಾರಾಂಶ

ಶೃಂಗೇರಿನಮ್ಮ ಸುತ್ತಮುತ್ತಲಿನ ಜಗತ್ತಿನ ಪ್ರಚಲಿತ ವಿದ್ಯಮಾನಗಳನ್ನು ದಿನನಿತ್ಯ ನಮಗೆ ತಿಳಿಸುವ ಕೆಲಸ ಪತ್ರಿಕೆಗಳು ಮಾಡುತ್ತಿವೆ. ಪತ್ರಿಕೆಗಳು ಕೇವಲ ಸುದ್ದಿಗಳನ್ನು ನೀಡುವ ಕೆಲಸ ಮಾಡುತ್ತಿಲ್ಲ. ವಿವಿಧ ವಿಷಯಗಳನ್ನು ನೀಡುತ್ತದೆ. ಪತ್ರಿಕೆಗಳು ಸಾಮಾನ್ಯ ಜ್ಞಾನದ ಕಣಜ ಎಂದು ತಾಪಂ ಮಾಜಿ ಸದಸ್ಯ ಕೆ.ಎಸ್.ರಮೇಶ್ ಹೇಳಿದರು.

ಮೆಣಸೆ ಪಿಎಂಶ್ರೀ ಶಾಸಕರ ಸರ್ಕಾರಿ ಮಾದರಿ ಶಾಲೆಯಲ್ಲಿ ಕನ್ನಡಪ್ರಭ ಯುವ ಆವೃತ್ತಿ ಬಿಡುಗಡೆ

ಕನ್ನಡಪ್ರಭ ವಾರ್ತೆ ಶೃಂಗೇರಿ

ನಮ್ಮ ಸುತ್ತಮುತ್ತಲಿನ ಜಗತ್ತಿನ ಪ್ರಚಲಿತ ವಿದ್ಯಮಾನಗಳನ್ನು ದಿನನಿತ್ಯ ನಮಗೆ ತಿಳಿಸುವ ಕೆಲಸ ಪತ್ರಿಕೆಗಳು ಮಾಡುತ್ತಿವೆ. ಪತ್ರಿಕೆಗಳು ಕೇವಲ ಸುದ್ದಿಗಳನ್ನು ನೀಡುವ ಕೆಲಸ ಮಾಡುತ್ತಿಲ್ಲ. ವಿವಿಧ ವಿಷಯಗಳನ್ನು ನೀಡುತ್ತದೆ. ಪತ್ರಿಕೆಗಳು ಸಾಮಾನ್ಯ ಜ್ಞಾನದ ಕಣಜ ಎಂದು ತಾಪಂ ಮಾಜಿ ಸದಸ್ಯ ಕೆ.ಎಸ್.ರಮೇಶ್ ಹೇಳಿದರು.

ತಾಲೂಕಿನ ಮೆಣಸೆ ಪಂಚಾಯಿತಿ ಮೆಣಸೆ ಪಿಎಂಶ್ರೀ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಆಯೋಜಿಸಿದ್ದ ಕನ್ನಡ ಪ್ರಭ ಯುವ ಆವೃತ್ತಿ ಬಿಡುಗಡೆಗೊಳಿಸಿ ಮಾತನಾಡಿದರು. ಕ್ರೀಡೆ, ರಾಜಕೀಯ, ಸಿನೆಮಾ, ಸಾಹಿತ್ಯ, ಆರೋಗ್ಯ,ಶಿಕ್ಷಣ,ಸಾಂಸ್ಕೃತಿಕ ಸೇರಿ ಹಲವಾರು ವಿಷಯಗಳನ್ನು ಪತ್ರಿಕೆ ಒಳಗೊಂಡಿರುತ್ತದೆ. ದೇಶದ ಸ್ವಾತಂತ್ರ್ಯ ಹೋರಾಟ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಜಗತ್ತಿನ ಅನೇಕ ದೇಶಗಳ ಸ್ವಾತಂತ್ರ್ಯ ಹೋರಾಟ, ಕ್ರಾಂತಿಗಳಲ್ಲಿ ಪತ್ರಿಕೆಗಳು ಮಹತ್ತರ ಪಾತ್ರ ವಹಿಸಿದೆ ಎಂದರು.

ಪತ್ರಿಕೆಗಳು ಜನಜಾಗೃತಿ ಜೊತೆಗೆ ಸಮಾಜ ಕಟ್ಟುವ ಕೆಲಸ ಮಾಡಬೇಕು. ಸಮಾಜದಲ್ಲಿರುವ ಸಮಸ್ಯೆ, ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಬೇಕು. ವಿದ್ಯಾರ್ಥಿಗಳು ದಿನನಿತ್ಯ ಪತ್ರಿಕೆ ಓದುವ ಹವ್ಯಾಸ ರೂಡಿಸಿಕೊಳ್ಳಬೇಕು. ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಪಠ್ಯ ವಿಷಯಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಬೇಕು ಎಂದರು.

ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸಂತೋಷ್ ಕಾಳ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ ಪತ್ರಿಕೆ ಓದುವುದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಉಪಯೋಗವಾಗುತ್ತದೆ. ಕನ್ನಡ ಪ್ರಭ ಯುವ ಆವೃತ್ತಿ ಬಹಳ ಉಪಯುಕ್ತ ಸಂಚಿಕೆ. ಗ್ರಂಥಾಲಯಗಳಲ್ಲಿ ವಿದ್ಯಾರ್ಥಿ ಗಳು ಪತ್ರಿಕೆಓದಬೇಕು.ನಮ್ಮ ಬದುಕಿಗೆ ಪೂರಕ. ಸಾಕಷ್ಟು ವಿಷಯಗಳು ಪತ್ರಿಕೆಗಳಲ್ಲಿವೆ. ವಿದ್ಯಾರ್ಥಿಗಳು ಇದರ ಸದ್ಭಳಕೆ ಮಾಡಿ ಎಂದರು.

ಪತ್ರಕರ್ತ ನೆಮ್ಮಾರ್ ಅಬೂಬಕರ್ ಕನ್ನಡ ಪ್ರಭ ಯುವ ಆವೃತ್ತಿ ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ಉಪಯುಕ್ತ ಅತ್ಯ ಮೂಲ್ಯ ವಿಷಯಗಳು ಈ ಸಂಚಿಕೆಯಲ್ಲಿದೆ. ಪ್ರಚಲಿತ ವಿದ್ಯಮಾನಗಳು,ಸಾಮಾನ್ಯ ಜ್ಞಾನ ವಿಷಯಗಳು,ಸ್ಪರ್ಧಾತ್ಮಕ ವಿಷಯಗಳು,ಉದ್ಯೋಗ ಅಂಕಣ,ಶೈಕ್ಷಣಿಕ ವಿಷಯಗಳು ಇದರಲ್ಲಿವೆ.ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತ. ವಿದ್ಯಾರ್ಥಿಗಳು ಈ ಆವೃತ್ತಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಶಿಕ್ಷಕರಾದ ಕಾಂತರಾಜ್, ಉಮೇಶ್,ಕಲ್ಲೇಶಾಚಾರ್,ಸುಬ್ರಮಣ್ಯ,ಮಮತಾ,ಪುಷ್ಪ,ಅನಿತಾ,ವಿದ್ಯಾರ್ಥಿ ಮುಖ್ಯಮಂತ್ರಿ ಭವೀಷ್ ಮತ್ತಿತರರುಉಪಸ್ಥಿತರಿದ್ದರು.ಮಮತಾ ಸ್ವಾಗತಿಸಿ ನಿರೂಪಿಸಿ ವಂದಿಸಿದರು.

2 ಶ್ರೀ ಚಿತ್ರ 1-

ಶೃಂಗೇರಿ ಮೆಣಸೆ ಪಿಎಂಶ್ರೀ ಸರ್ಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ತಾಪಂ ಮಾಜಿ ಸದಸ್ಯ ಕೆ.ಎಸ್.ರಮೇಶ್ ಕನ್ನಡ ಪ್ರಭ ಯುವ ಆವೃತ್ತಿ ಬಿಡುಗಡೆ ಗೊಳಿಸಿದರು. ಸಂತೋಷ್ ಕಾಳ್ಯ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಬುರಗಿ ಬರಪೀಡಿತ ಘೋಷಣೆಗೆ ಆಗ್ರಹಿಸಿ ಪ್ರತಿಭಟನೆ
ಡಾ. ಅಪ್ಪಾಜಿ ಪುಣ್ಯಸ್ಮರಣೆ: ಭಾವಪೂರ್ಣ ನುಡಿನಮನ