ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಸೇವಾಕಿರಣ ಸಭಾಂಗಣದಲ್ಲಿ ಭಾನುವಾರ ನಂಜಮ್ಮ ಮೋಟೇಗೌಡ ಚಾರಿಟಬಲ್ ಟ್ರಸ್ಟ್ನಿಂದ ರಾಷ್ಟ್ರೀಯ ಪತ್ರಿಕಾ ದಿನದ ಅಂಗವಾಗಿ ಆಯೋಜಿಸಿದ್ದ ಪತ್ರಕರ್ತ ಕೆ.ಶ್ರೀನಿವಾಸ್ ಅವರಿಗೆ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮೊಬೈಲ್ ಯುಗದಲ್ಲಿ ಪತ್ರಿಕೆಗಳನ್ನು ಓದುವವರ ಸಂಖ್ಯೆ ಕಡಿಮೆಯಾಗಿದ್ದರೂ ಪತ್ರಿಕೆಗಳು ಇನ್ನೂ ಓದುಗರನ್ನು ಹಿಡಿದಿಟ್ಟುಕೊಂಡು ಮುನ್ನಡೆಯುತ್ತಿವೆ. ಸಮಾಜಮುಖಿ ಬರವಣಿಗೆಗಳಿಂದ ಜನರ ಗಮನಸೆಳೆಯುತ್ತಿವೆ. ಸಮಾಜದ ನಾಲ್ಕನೇ ಅಂಗವಾಗಿ ಪತ್ರಿಕಾರಂಗ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದರು.ಪ್ರಸ್ತುತ ಪತ್ರಿಕಾರಂಗ ಹಲವಾರು ಸವಾಲು ಎದುರಿಸುತ್ತಿದೆ. ಈ ಸವಾಲುಗಳ ನಡುವೆಯೂ ಪತ್ರಕರ್ತರು ತಮ್ಮ ಅಸ್ತಿತ್ವ ಕಾಪಾಡಿಕೊಂಡು ಪತ್ರಿಕಾರಂಗದ ಧ್ಯೇಯ ಎತ್ತಿ ಹಿಡಿಯುತ್ತಿದ್ದಾರೆ. ವಸ್ತುನಿಷ್ಠ ವರದಿ ಪ್ರಕಟಿಸುತ್ತಾ ಸಮಾಜಕ್ಕೆ ಮಾದರಿಯಾಗುತ್ತಿರುವುದು ಶ್ಲಾಘನೀಯ ಎಂದರು.
ಅಭಿನಂದನಾ ನುಡಿಗಳನ್ನಾಡಿದ ಹಿರಿಯ ಪತ್ರಕರ್ತ ಡಿ.ಎನ್.ಶ್ರೀಪಾದು, ಕೆ.ಶ್ರೀನಿವಾಸ್ ಜೀವನದಲ್ಲಿ ಕಷ್ಟಪಟ್ಟು ಪತ್ರಿಕಾರಂಗದಲ್ಲಿ ಬೆಳೆದುಬಂದಿದ್ದಾರೆ. ಪ್ರಾಮಾಣಿಕತೆ, ಸಮಯಪ್ರಜ್ಞೆ, ಕರ್ತವ್ಯಪರತೆಯಿಂದ ಇಂದಿಗೂ ಕಾರ್ಯನಿರ್ವಹಿಸುತ್ತಾ ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಯಾರನ್ನೂ ದ್ವೇಷಿಸದೆ ಎಲ್ಲರ ಜೊತೆಗೂಡಿಕೊಂಡು ಸಾಗುವ ಅವರ ಸ್ನೇಹಪರ ವ್ಯಕ್ತಿತ್ವ ಇತರರಿಗೆ ಮಾದರಿಯಾಗಬೇಕು ಎಂದರು.
ಮಂಡ್ಯ ಅನೇಕ ರಂಗಗಳಲ್ಲಿ ಮೊದಲ ಸ್ಥಾನದಲ್ಲಿ ನಿಂತಿದೆ. ಆದರೆ, ಜಿಲ್ಲೆಯ ಮಹತ್ವ, ಗಳಿಸಿರುವ ಹೆಗ್ಗಳಿಕೆ, ಹಲವು ದಾಖಲೆಗಳು ಸ್ಥಳೀಯರಿಗೇ ಗೊತ್ತಿಲ್ಲ. ಇಂದಿನವರಿಗೆ ಜಿಲ್ಲೆಯ ಇತಿಹಾಸ, ವಿಶೇಷತೆಗಳನ್ನು ಪುಸ್ತಕಗಳನ್ನು ಓದಿ ತಿಳಿದುಕೊಳ್ಳುವ ಅಥವಾ ತಿಳಿದವರಿಂದಲಾದರೂ ಕೇಳಿ ತಿಳಿಯಬೇಕೆಂಬ ಆಸಕ್ತಿ ಇಲ್ಲ. ಇಂದಿನ ಯುವಕರು ಪುಸ್ತಕಗಳು, ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಇತಿಹಾಸವನ್ನು ತಿಳಿಯದವರು ಎಂದಿಗೂ ಇತಿಹಾಸವನ್ನು ನಿರ್ಮಿಸಲಾರರು. ಅದಕ್ಕಾಗಿ ದೇಶ, ರಾಜ್ಯ ಮತ್ತು ಜಿಲ್ಲೆಯ ಇತಿಹಾಸವನ್ನು ತಿಳಿಯುವ ಆಸಕ್ತಿ ಬೆಳೆಸಿಕೊಳ್ಳಬೇಕು. ಮಕ್ಕಳಿಗೂ ಅದನ್ನು ಮನದಟ್ಟು ಮಾಡಿಕೊಡುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಿ.ವಿ.ನಾಗರಾಜು, ಸೌತ್ ಮಲ್ಟಿಪಲ್ ಅಲೈಯನ್ಸ್ನ ಒಂದನೇ ಜಿಲ್ಲಾ ರಾಜ್ಯಪಾಲ ಕೆ.ಆರ್.ಶಶಿಧರ ಈಚಗೆರೆ, ಎರಡನೇ ಜಿಲ್ಲಾ ಉಪರಾಜ್ಯಪಾಲ ಕೆ.ಎಸ್.ಚಂದ್ರಶೇಖರ್, ಪತ್ರಕರ್ತ ಕೆ.ಎನ್.ಮಂಜುನಾಥ, ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿಯ ಪ್ರತಿಭಾಂಜಲಿ ಡೇವಿಡ್ ಹಾಜರಿದ್ದರು.