ಕೆಫೆ ಬಾಂಬರ್‌ ಬಗ್ಗೆ ಸುಳಿವು ಕೊಟ್ಟರೆ ₹10 ಲಕ್ಷ ಇನಾಮು

KannadaprabhaNewsNetwork |  
Published : Mar 07, 2024, 01:46 AM ISTUpdated : Mar 07, 2024, 09:09 AM IST
ಕೆಫೆ ಬಾಂಬರ್‌ ಬಗ್ಗೆ ಸುಳಿವು ಕೊಟ್ಟರೆ ₹10 ಲಕ್ಷ ಇನಾಮು

ಸಾರಾಂಶ

ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಶಂಕಿತ ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ 10 ಲಕ್ಷ ರು. ನಗದು ಬಹುಮಾನ ಘೋಷಿಸಿದೆ.

ಪಿಟಿಐ ನವದೆಹಲಿ

ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಶಂಕಿತ ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ 10 ಲಕ್ಷ ರು. ನಗದು ಬಹುಮಾನ ಘೋಷಿಸಿದೆ.

ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಇದನ್ನು ಪ್ರಕಟಿಸಿರುವ ಎನ್‌ಐಎ, ಕೆಫೆಗೆ ಪ್ರವೇಶಿಸುವಾಗ ಶಂಕಿತ ಬಾಂಬರ್ ಕ್ಯಾಪ್, ಮಾಸ್ಕ್‌ ಮತ್ತು ಕನ್ನಡಕವನ್ನು ಧರಿಸಿರುವ ಚಿತ್ರವನ್ನು ಪೋಸ್ಟ್ ಮಾಡಿದೆ. 

ಈತನ ಸುಳಿವು ಸಿಕ್ಕಲ್ಲಿ 080-29510900 ಅಥವಾ 8904241100 ಅಥವಾ ಇ-ಮೇಲ್ ವಿಳಾಸ info.blr.nia.@gov.in ಗೆ ಸಂಪರ್ಕಿಸಿ ಎಂದು ತಿಳಿಸಲಾಗಿದೆ.

ಇದೇ ವೇಳೆ, ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಎನ್‌ಐಎ ಭರವಸೆ ನೀಡಿದೆ. ಕೆಫೆಯಲ್ಲಿ ನಡೆದ ಸ್ಫೋಟದ ತನಿಖೆಯನ್ನು ಈ ವಾರದ ಆರಂಭದಲ್ಲಿ ಕರ್ನಾಟಕ ಪೊಲೀಸರಿಂದ ಎನ್‌ಐಎಗೆ ಹಸ್ತಾಂತರಿಸಲಾಗಿತ್ತು.

ಮಾ.1 ರಂದು ಪೂರ್ವ ಬೆಂಗಳೂರಿನ ವೈಟ್‌ಫೀಲ್ಡ್‌ ಸನಿಹದ ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ 10 ಜನರು ಗಾಯಗೊಂಡಿದ್ದರು. 

ಕೆಫೆಗೆ ಬಂದ ವ್ಯಕ್ತಿಯೊಬ್ಬ ರವೆ ಇಡ್ಲಿ ಟೋಕನ್‌ ಪಡೆದು ಕೆಲ ಹೊತ್ತು ಅಲ್ಲಿ ಇದ್ದ. ಆದರೆ ಇಡ್ಲಿ ತಿನ್ನದೇ ಬಾಂಬ್‌ ಇಟ್ಟ ಬ್ಯಾಗ್‌ ಅನ್ನು ಕೆಫೆಯ ವಾಷ್‌ ಬೇಸಿನ್‌ ಬಳಿ ಇಟ್ಟು ಪರಾರಿ ಆಗಿದ್ದ. ಆತ ಅಲ್ಲಿಂದ ನಿರ್ಗಮಿಸಿದ ಕೆಲವು ನಿಮಿಷ ಬಳಿಕ ಸ್ಫೋಟ ಸಂಭವಿಸಿತ್ತು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...