ಕನ್ನಡಪ್ರಭ ವಾರ್ತೆ ರಾಮನಗರ
ಬೆಳಗ್ಗೆ 11.30ಕ್ಕೆ ಅಂಚಿಪುರ ಗ್ರಾಮಕ್ಕೆ ಆಗಮಿಸಿದ ನಿಖಿಲ್ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಅಂಚಿಪುರ ಗ್ರಾಮದ ಶಕ್ತಿದೇವತೆ ಮಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ‘ನಮ್ಮ ಭೂಮಿ-ನಮ್ಮ ಹಕ್ಕು’ ಘೋಷಣೆಯೊಂದಿಗೆ ನಿಖಿಲ್ ಪಾದಯಾತ್ರೆಗೆ ಚಾಲನೆ ನೀಡಿದರು. ಆದರೆ, ಪಾದಯಾತ್ರೆಯಲ್ಲಿ ಎಲ್ಲಿಯೂ ಜೆಡಿಎಸ್ ಪಕ್ಷದ ಬಾವುಟಗಳನ್ನು ಬಳಸಲಿಲ್ಲ. ಬದಲಿಗೆ, ಪ್ರತಿಭಟನಾಕಾರರು ಹೆಗಲ ಮೇಲೆ ಹಸಿರು ಶಾಲು ಹಾಕಿಕೊಂಡು ಪಾದಯಾತ್ರೆಯಲ್ಲಿ ಸಾಗಿದರು. ಜೆಡಿಎಸ್ ಶಾಸಕರು ಸೇರಿ ಸುಮಾರು ಎರಡೂವರೆ ಸಾವಿರ ಜನರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.‘ದೇವನಹಳ್ಳಿಲಿ ಡಿನೋಟಿಫಿಕೇಷನ್ಮಾ ಡಿದ ಸಿದ್ದು ಜೈಲಿಗೆ ಹೋದ್ರಾ?’:
ಈ ಮಧ್ಯೆ, ಮೆರೆವೇಗೌಡನದೊಡ್ಡಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತೆತ್ತಿದರೆ ಕುಮಾರಣ್ಣ ರೆಡ್ ಜೋನ್ ಮಾಡಿ ನೋಟಿಫಿಕೇಷನ್ ಹೊರಡಿಸಿದರು. ಆದರೆ, ಡಿನೋಟಿಫಿಕೇಷನ್ ಮಾಡಿ ನಾನು ಜೈಲಿಗೆ ಹೋಗಲ್ಲ ಅಂತ ಹೇಳುತ್ತಾರೆ. ಆದರೆ, ನಿಮ್ಮದೇ ಸರ್ಕಾರದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ದೇವನಹಳ್ಳಿಯಲ್ಲಿ ಡಿನೋಟಿಫಿಕೇಷನ್ ಮಾಡಿದರು. ಅವರು ಜೈಲಿಗೆ ಹೋದರಾ? ಈಗ ನೀವು ಡಿನೋಟಿಫಿಕೇಷನ್ ಮಾಡಿದರೆ ಮಾತ್ರ ಜೈಲಿಗೆ ಹೋಗುತ್ತೀರಾ ಎಂದು ಲೇವಡಿ ಮಾಡಿದರು.ಸಿದ್ದರಾಮಯ್ಯನವರು ದೇವನಹಳ್ಳಿಯಲ್ಲಿ ರೈತರ ಭೂಮಿಯನ್ನು ಕೈ ಬಿಟ್ಟರು. ನೀವು ಇಲ್ಲಿ ರೈತರ ಭೂಮಿ ಕೈಬಿಡಿ, ಇದೇ ಜಿಲ್ಲೆಯಿಂದ ಮುಖ್ಯಮಂತ್ರಿ ಆಗಿದ್ದೀರಿ. ಜನರ ಬಳಿ ಕಾಡಿ ಬೇಡಿ ಪೆನ್ನು ಪೇಪರ್ ಪಡೆದಿದ್ದೀರಿ, ಈಗ ರೈತರ ಪರ ನಿಮ್ಮ ಪೆನ್ನು, ಪೇಪರ್ ಉಪಯೋಗಿಸಿ ಎಂದು ಆಗ್ರಹಿಸಿದರು.
ಬೇನಾಮಿ ಆಸ್ತಿ ಸಾಬೀತುಪಡಿಸಿ:
ಕೇತಗಾನಹಳ್ಳಿ ಗ್ರಾಮದಲ್ಲಿ 1985ರಲ್ಲಿ ನಮ್ಮ ತಂದೆ ಜಾಗ ಖರೀದಿ ಮಾಡಿದ್ದಾರೆ. ಯಾರ ತಲೆ ಒಡೆದು ಅದನ್ನು ಖರೀದಿ ಮಾಡಿಲ್ಲ. ಸಿನಿಮಾ ಹಂಚಿಕೆ ಮಾಡಿದ ಹಣದಲ್ಲಿ ಆ ಜಮೀನನ್ನು ಖರೀದಿ ಮಾಡಿದ್ದೇವೆ. ನಮ್ಮ ತಾಯಿಯ ಹೆಸರಲ್ಲಿ 27 ಎಕರೆ, ನನ್ನ ಹೆಸರಲ್ಲಿ 5 ಎಕರೆ ಜಾಗವನ್ನು ಕೋವಿಡ್ ಸಮಯದಲ್ಲಿ ಖರೀದಿ ಮಾಡಿದ್ದೇವೆ. ನಮ್ಮ ಜಾಗದಲ್ಲಿ ವಾಣಿಜ್ಯ ಕಟ್ಟಡ ಕಟ್ಟಿಲ್ಲ. ರೈತರಿಗೆ ಅನುಕೂಲ ಮಾಡಲು ಹಾಲಿನ ಉತ್ಪನ್ನಗಳ ಉತ್ಪಾದನೆಗೆ ಅದನ್ನು ಬಳಸಲು ಇಟ್ಟಿದ್ದೇವೆ ಎಂದು ಹೇಳಿದರು.ಅಂಚಿಪುರ ಕಾಲೋನಿಯಲ್ಲಿ ಉದ್ವಿಗ್ನ ವಾತಾವರಣ:
ಈ ವೇಳೆ, ನಿಖಿಲ್ ಅವರು ಕಾಲೋನಿಯ ಮಾರಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ಯೋಜನೆಯ ಪರವಾಗಿರುವವರ ಜತೆ ಮಾತುಕತೆ ನಡೆಸಲು ಮುಂದಾದರು. ಆಗ ದಲಿತ ಮುಖಂಡರು ಕೈಯಲ್ಲಿ ಯೋಜನೆ ಪರವಾದ ಫ್ಲೆಕ್ಸ್ಗಳನ್ನು ಹಿಡಿದು ಪಾದಯಾತ್ರಿಗಳಿಗೆ ಎದುರಾದರು.
..ಕೋಟ್ ...
-ನಿಖಿಲ್ ಕುಮಾರಸ್ವಾಮಿ, ರಾಜ್ಯಾಧ್ಯಕ್ಷ, ಜೆಡಿಎಸ್ ಯುವ ಘಟಕ.