ನಿಲಜಗಿಗೆ ಆದರ್ಶ ದಂಪತಿ ಪುರಸ್ಕಾರ

KannadaprabhaNewsNetwork |  
Published : May 03, 2025, 01:20 AM ISTUpdated : May 03, 2025, 05:25 AM IST
ಹುಕ್ಕೇರಿ | Kannada Prabha

ಸಾರಾಂಶ

ಇಲ್ಲಿನ ಮಹಾವೀರ ಉದ್ಯೋಗ ಸಮೂಹ ಸಂಸ್ಥೆಗಳ ಅಧ್ಯಕ್ಷ ಮಹಾವೀರ ನಿಲಜಗಿ ಹಾಗೂ ಪದ್ಮಶ್ರೀ ಮಹಾವೀರ ನಿಲಜಗಿ ದಂಪತಿಗೆ ಕೊಲ್ಲಾಪುರ ಶ್ರೀ ಲಕ್ಷ್ಮೀಸೇನ ಜೈನ ಮಠದ ಆದರ್ಶ ದಂಪತಿ ಪುರಸ್ಕಾರಕ್ಕೆ ಪಾತ್ರವಾಗಿದ್ದಾರೆ. 

 ಹುಕ್ಕೇರಿ : ಇಲ್ಲಿನ ಮಹಾವೀರ ಉದ್ಯೋಗ ಸಮೂಹ ಸಂಸ್ಥೆಗಳ ಅಧ್ಯಕ್ಷ ಮಹಾವೀರ ನಿಲಜಗಿ ಹಾಗೂ ಪದ್ಮಶ್ರೀ ಮಹಾವೀರ ನಿಲಜಗಿ ದಂಪತಿಗೆ ಕೊಲ್ಲಾಪುರ ಶ್ರೀ ಲಕ್ಷ್ಮೀಸೇನ ಜೈನ ಮಠದ ಆದರ್ಶ ದಂಪತಿ ಪುರಸ್ಕಾರಕ್ಕೆ ಪಾತ್ರವಾಗಿದ್ದಾರೆ. ಮಠದಲ್ಲಿ ನಡೆದ ಸಮಾರಂಭದಲ್ಲಿ ತತ್ವಾರ್ಥನಂದಿ ಮುನಿಮಹಾರಾಜ್ ಮತ್ತು ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾರಾಜರು, ನಿಲಜಗಿ ದಂಪತಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದರು.

ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಸಹಕಾರಿ ಕ್ಷೇತ್ರದಲ್ಲಿ ಅನನ್ಯ ಕೊಡುಗೆ ನೀಡಿರುವುದನ್ನು ಗುರುತಿಸಿ ನಿಲಜಗಿ ದಂಪತಿಗೆ ಈ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಈ ವೇಳೆ ಅನುಪಮಾ, ಪ್ರಜ್ವಲ, ಪ್ರೀಯಾ ಮತ್ತಿತರರು ಉಪಸ್ಥಿತರಿದ್ದರು.

ಈ ಪುರಸ್ಕಾರವು ತಮ್ಮ ಜವಾಬ್ದಾರಿ ಹೆಚ್ಚಿಸಿದ್ದು ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತಷ್ಟು ಕೆಲಸ ಮಾಡಲು ಪ್ರೇರೇಪಣೆಯಾಗಲಿದೆ.

-ಮಹಾವೀರ ನಿಲಜಗಿ, ಮಹಾವೀರ ಉದ್ಯೋಗ ಸಮೂಹ ಸಂಸ್ಥೆಗಳ ಅಧ್ಯಕ್ಷರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ