ಅಶ್ವಿನ ಅಮ್ಮಣಗಿ
ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಸರಿಯಾಗಿ 100 ವರ್ಷಗಳ ಹಿಂದೆ 1925ರ ಏಪ್ರಿಲ್ 10, 11 ನಿಪ್ಪಾಣಿಗೆ ಭೇಟಿ ನೀಡಿದ್ದರು. ಬಹಿಷ್ಕೃತ ಹಿತಕಾರಿಣಿ ಸಭೆಯ ಎರಡು ದಿನದ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಮತ್ತು ವಸತಿ ಶಾಲೆಯ ಅಗತ್ಯದ ಬಗ್ಗೆ ಮಾತನಾಡಿದ್ದರು. ಆ ಐತಿಹಾಸಿಕ ಭೀಮ ಹೆಜ್ಜೆಗೆ ಶತಮಾನದ ಸಂಭ್ರಮದ ಹಿನ್ನೆಲೆಯಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಪ್ರಯತ್ನದ ಫಲವಾಗಿ ಇಂದು ನಗರದಲ್ಲಿ ಅತ್ಯಂತ ಭವ್ಯ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಸಚಿವರಾದ ಚಿರಾಗ್ ಪಾಸ್ವಾನ್ ಆಗಮಿಸಲಿದ್ದಾರೆ.
ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕಿ ಜೊಲ್ಲೆ :ನಗರದ ಮುನ್ಸಿಪಾಲ್ ಹೈಸ್ಕೂಲ್ ಮೈದಾನದಲ್ಲಿ ಏ.15ರ ಸಂಜೆ 4 ಗಂಟೆಗೆ ಈ ಭವ್ಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಬ್ಬರೂ ಈ ಸಮಾರಂಭಕ್ಕೆ ಉಪಸ್ಥಿತರಿರಬೇಕು ಎಂದು ಶಾಸಕಿ ಶಶಿಕಲಾ ಜೊಲ್ಲೆ ಆಹ್ವಾನಿಸಿದ್ದಾರೆ.
ಸ್ವತಂತ್ರ ಪಾರ್ಕಿಂಗ್ ವ್ಯವಸ್ಥೆ:ಕಾರ್ಯಕ್ರಮಕ್ಕೆ ಅಂದಾಜು 35,000 ಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ನಿರೀಕ್ಷೆ ಇದ್ದು, ಎಲ್ಲರಿಗಾಗಿ ನಗರದ ಕುರಬೆಟ್ಟಿ ಪೆಟ್ರೋಲ್ ಪಂಪ್ ಹಿಂದೆ, ಮಾನೆ ಪ್ಲಾಟ್ ಹಾಗೂ ಇದಗಾ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಊಟದ ವ್ಯವಸ್ಥೆ:ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ವ್ಯವಸ್ಥಿತ ಊಟದ ವ್ಯವಸ್ಥೆ ಮಾಡಲಾಗಿದ್ದು, ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ಕಾರ್ಯಕ್ರಮಕ್ಕೆ ಗಣ್ಯರ ಸಾಕ್ಷಿ:ಇಂದು ನಡೆಯುವ ಈ ಕಾರ್ಯಕ್ರಮಕ್ಕೆ ಕೇಂದ್ರದ ಆಹಾರ ಸಂಸ್ಕರಣಾ ಕೈಗಾರಿಕೆ ಸಚಿವರಾದ ಚಿರಾಗ್ ಪಾಸ್ವಾನ್, ರಾಜ್ಯದ ವಿಧಾನಸಭೆ ವಿರೋಧಪಕ್ಷ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಚಲುವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಮಾಜಿ ಸಂಸದರು ಹಾಗೂ ಶಾಸಕರು ಸೇರಿದಂತೆ ಹಲವು ಗಣ್ಯಮಾನ್ಯರು ಉಪಸ್ಥಿತ ಇರಲಿದ್ದಾರೆ.----------
ಕೋಟ್...ಡಾ.ಅಂಬೇಡ್ಕರ್ ಏ.11ಕ್ಕೆ ನಿಪ್ಪಾಣಿ ನಗರಕ್ಕೆ ಆಗಮಿಸಿ 100 ವರ್ಷ ಪೂರ್ಣಗಳಾಗಿವೆ. ಇದು ನಮ್ಮೆಲ್ಲ ನಿಪ್ಪಾಣಿ ನಿವಾಸಿಗರಿಗೆ ಒಂದು ಅಭಿಮಾನದ ದಿನ. ಈ ಸುಸಂದರ್ಭವನ್ನು ಭಾರತೀಯ ಜನತಾ ಪಾರ್ಟಿ ವತಿಯಿಂದ ನಿಪ್ಪಾಣಿ ನಗರದಲ್ಲಿ ಇಡೀ ರಾಷ್ಟ್ರವೇ ನೋಡುವಂತಹ ಭವ್ಯ ಮತ್ತು ಅದ್ಭುತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತನ್ನಂತ ಒಬ್ಬ ಸಾಮಾನ್ಯ ಮಹಿಳೆ ಶಾಸಕಿ ಹಾಗೂ ಸಚಿವೆಯಾಗಿ ವಿಧಾನಸಭೆಯವರೆಗೂ ಹೋಗುವ ಹಾಗೆ ಆಗಿದ್ದು ಕೇವಲ ಡಾ.ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಲೇ ಇದು ಸಾಧ್ಯವಾಗಿದೆ.
- ಶಶಿಕಲಾ ಜೊಲ್ಲೆ, ಶಾಸಕರು, ನಿಪ್ಪಾಣಿ.ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಒಬ್ಬ ಮಹಾನ ವ್ಯಕ್ತಿ, ನಿಪ್ಪಾಣಿ ನಗರಕ್ಕೆ ಅವರು ಆಗಮಿಸಿದ್ದು, ಇಲ್ಲಿ ನೆಲೆಸಿದ್ದು ಇಲ್ಲಿಯ ಜನರಿಗೆ ಮಾರ್ಗದರ್ಶನ ಮಾಡಿದ್ದು ನಿಜವಾಗಿಯೂ ಅದು ನಮ್ಮೆಲ್ಲರಿಗೆ ಅಭಿಮಾನದ ವಿಷಯ. ಅವರ ಈ ನೆನಪಿಗಾಗಿ ಗವಾನಿ ಗ್ರಾಮದ ಹತ್ತಿರ ಒಂದು ಸುಂದರ ತೀರ್ಥಕ್ಷೇತ್ರವನ್ನು ಶೀಘ್ರದಲ್ಲಿಯೇ ಮಾಡಲಾಗುವುದು.
-ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಂಸದರು, ಚಿಕ್ಕೋಡಿ ಲೋಕಸಭಾ ಕ್ಷೇತ್ರ.