ಎಐ ತರಬೇತಿಗೆ‘ನಿಪುಣ ಕರ್ನಾಟಕʼ ಯೋಜನೆ

KannadaprabhaNewsNetwork |  
Published : Nov 20, 2025, 02:45 AM IST
Bengaluru Tech Summit 20 | Kannada Prabha

ಸಾರಾಂಶ

ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ ಎರಡನೇ ದಿನ ಐಟಿ, ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕೃತಕ ಬುದ್ಧಿಮತ್ತೆ, ಸೈಬರ್‌ ಸುರಕ್ಷತೆ, ಡೇಟಾ ಸೈನ್ಸ್‌ ಕ್ಷೇತ್ರಗಳಲ್ಲಿ ತರಬೇತಿ ನೀಡಲು ‘ನಿಪುಣ ಕರ್ನಾಟಕʼ ಯೋಜನೆ ಘೋಷಿಸಿದೆ.

- ಟೆಕ್‌ ಸಮ್ಮಿಟ್‌ನಲ್ಲಿ ಐಟಿ, ಬಿಟಿ ಇಲಾಖೆ ಘೋಷಣೆ

- ಎಐ, ಸೈಬರ್‌ ಭದ್ರತೆ, ಡೇಟಾ ಕ್ಷೇತ್ರದಲ್ಲಿ ತರಬೇತಿ

- ಇದರಿಂದ 2,800 ಉದ್ಯೋಗಾವಕಾಶ ಸೃಷ್ಟಿ ನಿರೀಕ್ಷೆ

---ಕನ್ನಡಪ್ರಭ ವಾರ್ತೆ ಬೆಂಗಳೂರು

ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ ಎರಡನೇ ದಿನ ಐಟಿ, ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕೃತಕ ಬುದ್ಧಿಮತ್ತೆ, ಸೈಬರ್‌ ಸುರಕ್ಷತೆ, ಡೇಟಾ ಸೈನ್ಸ್‌ ಕ್ಷೇತ್ರಗಳಲ್ಲಿ ತರಬೇತಿ ನೀಡಲು ‘ನಿಪುಣ ಕರ್ನಾಟಕʼ ಯೋಜನೆ ಘೋಷಿಸಿದೆ.

ಭವಿಷ್ಯದಲ್ಲಿ ಎಐ ಕುಶಲ ಉದ್ಯೋಗಿಗಳಿಗೆ ಬೇಡಿಕೆ ಹೆಚ್ಚಲಿದ್ದು, ಅದಕ್ಕೆ ಅನುಗುಣವಾಗಿ ರಾಜ್ಯದ ಯುವಕರನ್ನು ಅಣಿಗೊಳಿಸಲು ಈ ಯೋಜನೆ ಸಹಕಾರಿ. ಎಐ, ಸೈಬರ್‌ ಸುರಕ್ಷತೆ, ಡೇಟಾ ಸೈನ್ಸ್‌ ಕ್ಷೇತ್ರಗಳಲ್ಲಿ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಈ ತರಬೇತಿ ಯೋಜನೆ ಫಲವಾಗಿ 2,800 ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ನಿರೀಕ್ಷಿಸಲಾಗಿದೆ.

ಈ ಯೋಜನೆ 4,000 ಯುವ ಜನರ ವೃತ್ತಿ ಕೌಶಲ ಹೆಚ್ಚಿಸಲಿದೆ. ಪ್ರತಿಷ್ಠಿತ ಕಾರ್ಪೋರೇಟ್‌ಗಳಾದ ಕ್ಯಾಪ್‌ಜೆಮಿನಿ, ವೆಲ್ಸ್‌ ಫರ್ಗೊ, ಸ್ಟ್ಯಾಂಡರ್ಡ್‌ ಚಾರ್ಟರ್ಡ್‌ ಮತ್ತು ಸುಮೆರಿ ಕಂಪನಿಗಳ ಉದ್ಯೋಗಿಗಳು ತರಬೇತಿ ನೀಡಲಿದ್ದಾರೆ. ಐಸಿಟಿ ಅಕಾಡೆಮಿ, ಎಆರ್‌ಡಬ್ಲ್ಯುಎಸ್‌, ಎಫ್‌ಯುಇಎಲ್‌ ಮತ್ತು ಎಐಎಸ್‌ಇಸಿಟಿ- ತರಬೇತಿ ಪಾಲುದಾರ ಸಂಸ್ಥೆಗಳಾಗಿವೆ.

ಹೆಚ್ಚುವರಿಯಾಗಿ 10,000 ಯುವ ಜನರ ವೃತ್ತಿ ಕೌಶಲ ಹೆಚ್ಚಿಸಲು ಐಟಿ, ಜೈವಿಕ ತಂತ್ರಜ್ಞಾನ,ಎಲೆಕ್ಟ್ರಾನಿಕ್ಸ್‌ ಸಿಸ್ಟಮ್‌ ಡಿಸೈನ್‌ ಆ್ಯಂಡ್‌ ಮ್ಯಾನುಫ್ಯಾಕ್ಚರಿಂಗ್‌ (ಇಎಸ್‌ಡಿಎಂ), ಬ್ಯಾಂಕಿಂಗ್‌, ಹಣಕಾಸು ಸೇವೆ ಮತ್ತು ವಿಮೆ (ಬಿಎಫ್‌ಎಸ್‌ಐ) ವಲಯದ ಪ್ರಮುಖ ಕಂಪನಿಗಳು ತರಬೇತಿ ನೀಡಲು ಇಂಗಿತ ವ್ಯಕ್ತಪಡಿಸಿವೆ.

ಬೆಂಗಳೂರು ಆವಿಷ್ಕಾರ ವರದಿ ಬಿಡುಗಡೆ:

ಶೃಂಗಸಭೆಯಲ್ಲಿ ಬೆಂಗಳೂರು ನಾವೀನ್ಯತಾ ವರದಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಡುಗಡೆ ಮಾಡಿದರು.

ಬೆಂಗಳೂರು ನಗರವು ಕೃತಕ ಬುದ್ಧಿಮತ್ತೆ ಹಾಗೂ ಕ್ವಾಂಟಂ ಕಂಪ್ಯೂಟಿಂಗ್‌ ಕೇಂದ್ರವಾಗಿ ರೂಪುಗೊಳ್ಳುತ್ತಿದೆ. ಈ ಕ್ಷೇತ್ರಗಳ ಜಾಗತಿಕ ದೈತ್ಯ ಕಂಪನಿಗಳಾದ ಓಪನ್‌ಎಐ, ಆ್ಯಂಥ್ರೊಫಿಕ್‌ ಮತ್ತು ಗ್ರಾಫ್‌ಕೋರ್‌- ಗಳನ್ನು ಆಕರ್ಷಿಸಲು ಕ್ರಮ ವಹಿಸಲಾಗಿದೆ. ವಿಶ್ವದ ಐದನೇ ಅತಿದೊಡ್ಡ ಯೂನಿಕಾರ್ನ್‌ ಶಕ್ತಿಕೇಂದ್ರವಾಗಿ ನಗರ ಬೆಳೆದಿದೆ. 1 ಶತಕೋಟಿ ಡಾಲರ್‌ ಮೊತ್ತದ ವಹಿವಾಟು ನಡೆಸುವ (ಯೂನಿಕಾರ್ನ್‌) 53 ನವೋದ್ಯಮ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿವೆ. ಇವುಗಳ ಒಟ್ಟಾರೆ ವಹಿವಾಟಿನ ಮೊತ್ತ ಅಂದಾಜು ₹ 1.70 ಲಕ್ಷ ಕೋಟಿ ಗಳಷ್ಟಿದೆ. ದೇಶದ ಒಟ್ಟಾರೆ ಯೂನಿಕಾರ್ನ್‌ ಮೌಲ್ಯಕ್ಕೆ ಬೆಂಗಳೂರು ಯೂನಿಕಾರ್ನ್‌ಗಳ ಕೊಡುಗೆ ಶೇ 42ರಷ್ಟಿದೆ ಎಂದು ವರದಿಯಲ್ಲಿ ಹೇಳಲಾಗಿದೆ.-------

ಫೋಟೋ

ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಬೆಂಗಳೂರು ನಾವೀನ್ಯತಾ ವರದಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದರು.

PREV

Recommended Stories

ಶಿಸ್ತು, ನ್ಯಾಯಪರತೆ, ಆತ್ಮಸಾಕ್ಷಿಗಳಿಂದ ಕೆಲಸ ಮಾಡಿ
ಸಹಕಾರಿದಲ್ಲಿ ವಿಜಯಪುರ ದೇಶಕ್ಕೆ ಮಾದರಿ