ನಿತಿನ್ ನಬಿನ್ ಬಿಜೆಪಿ ರಾಷ್ಟ್ರಾಧ್ಯಕ್ಷ: ಮುಂಡರಗಿಯಲ್ಲಿ ಕಾರ್ಯಕರ್ತರ ಸಂಭ್ರಮ

KannadaprabhaNewsNetwork |  
Published : Jan 21, 2026, 02:45 AM IST
ಬಿಜೆಪಿ ಮುಂಡರಗಿ ಮಂಡಲದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. | Kannada Prabha

ಸಾರಾಂಶ

ದೇಶದಲ್ಲಿ‌ ಅತಿದೊಡ್ಡ ಬಿಜೆಪಿ ಕಾರ್ಯಕರ್ತರನ್ನು ಗುರುತಿಸುವ ಪಕ್ಷವಾಗಿದೆ. ರಾಷ್ಟ್ರೀಯ ನೂತನ ಅಧ್ಯಕ್ಷ ಸ್ಥಾನವನ್ನು ಯುವಕರಿಗೆ ನೀಡುವ ಮೂಲಕ ಪಕ್ಷ ಹೆಚ್ಚಿನ ಸಂಘಟನೆಗೆ ಒತ್ತು ನೀಡಿದೆ.

ಮುಂಡರಗಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನಿತಿನ್ ನಬಿನ್ ಅವರನ್ನು ಆಯ್ಕೆ ಮಾಡಿದ ಹಿನ್ನೆಲೆ ಮಂಗಳವಾರ ಪಟ್ಟಣದಲ್ಲಿ ಮುಂಡರಗಿ ಮಂಡಲದ ವತಿಯಿಂದ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಕರಬಸಪ್ಪ ಹಂಚಿನಾಳ, ಕೊಟ್ರೇಶ ಅಂಗಡಿ ಮಾತನಾಡಿ, ದೇಶದಲ್ಲಿ‌ ಅತಿದೊಡ್ಡ ಬಿಜೆಪಿ ಕಾರ್ಯಕರ್ತರನ್ನು ಗುರುತಿಸುವ ಪಕ್ಷವಾಗಿದೆ. ರಾಷ್ಟ್ರೀಯ ನೂತನ ಅಧ್ಯಕ್ಷ ಸ್ಥಾನವನ್ನು ಯುವಕರಿಗೆ ನೀಡುವ ಮೂಲಕ ಪಕ್ಷ ಹೆಚ್ಚಿನ ಸಂಘಟನೆಗೆ ಒತ್ತು ನೀಡಿದೆ. ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಅಧಿಕಾರಕ್ಕೆ ಬಂದು ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ದೇಶದ ಆರ್ಥಿಕತೆಗೆ ತೊಂದರೆಯಾಗದಂತೆ ದೇಶವನ್ನು ಮುನ್ನಡೆಸಿಕೊಂಡು, ದೇಶದ ಆದಾಯ ಹೆಚ್ಚುವಂತೆ‌ ಮಾಡಿ ಹಲವಾರು ಜನೋಪಯೋಗಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಶೀಘ್ರದಲ್ಲಿಯೇ ಸ್ಥಳೀಯ ಸಂಸ್ಥೆಯ ಸಂಸ್ಥೆ ಚುನಾವಣೆ ಸೇರಿದಂತೆ 2026ರಲ್ಲಿ ಅಧಿಕಾರ ಪೂರ್ಣಗೊಂಡಿರುವ ಎಲ್ಲ ಚುನಾವಣೆಗಳು ಬರಲಿವೆ. ಎಲ್ಲರೂ ಪಕ್ಷ ಸಂಘಟನೆಗೆ ಮುಂದಾಗೋಣ ಎಂದರು.

ಕುಮಾರಸ್ವಾಮಿ‌ ಹಿರೇಮಠ, ಎಸ್.ಎಸ್. ಗಡ್ಡದ, ಮಾತನಾಡಿ, ಬಿಜೆಪಿ ಯುವಕರಿಗೆ ಆದ್ಯತೆ ನೀಡುವ ಮೂಲಕ ಸಂಘಟನೆಗೆ ವಯಸ್ಸು ಮುಖ್ಯವಲ್ಲ, ಚಾಣಾಕ್ಷತನ ಮುಖ್ಯ ಎನ್ನುವುದನ್ನು ಬಿಜೆಪಿ ನಿತಿನ್ ನಬಿನ್ ಅವರನ್ನು‌ ಆಯ್ಕೆ ಮಾಡುವ ಮೂಲಕ ಸಾಬೀತು ಪಡಿಸಿದೆ. ಇದು ಚುನಾವಣಾ ವರ್ಷವಾಗಿರುವುದರಿಂದ ಎಲ್ಲರೂ ಕಂಕಣಬದ್ಧರಾಗಿ ಕಾರ್ಯನಿರ್ವಹಿಸುವ ಮೂಲಕ‌ ನಮ್ಮ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವಂತೆ‌ ಮಾಡೋಣ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಹಣಜಿ ಅವರನ್ನು ಸನ್ಮಾನಿಸಲಾಯಿತು. ರವೀಂದ್ರ ಉಪ್ಪಿನಬೆಟಗೇರಿ, ಮಲ್ಲಿಕಾರ್ಜುನ ಹಣಜಿ, ಬಸವರಾಜ ಬಿಳಿಮಗ್ಗದ, ಪ್ರಶಾಂತಗೌಡ ಗುಡದಪ್ಪನವರ, ಪವಿತ್ರಾ ಕಲ್ಲಕುಟಗರ್, ಪವನ್ ಮೇಟಿ, ಜ್ಯೋತಿ ಹಾನಗಲ್, ಮೈಲಾರಪ್ಪ ಕಲಕೇರಿ, ಪರಶುರಾಮ ಕರಡಿಕೊಳ್ಳ, ರಂಗಪ್ಪ ಕೋಳಿ, ನಾಗರಾಜ ಕೊರ್ಲಹಳ್ಳಿ, ಪ್ರಕಾಶ ಹಲವಾಗಲಿ, ಸುಭಾಸ ಕ್ವಾಟಿ, ಅಶೋಕ ಚೂರಿ, ಬಸವರಾಜ ಚಿಗಣ್ಣವರ, ಪನನ್ ಲಾಂಡ್ವೆ, ಅರುಣಾ ಪಾಟೀಲ, ರಾಧಾ ಬಾರಕೇರ, ವೀಣಾ ಬೂದಿಹಾಳ, ಸೋಮರಡ್ಡಿ ಮುದ್ದಾಬಳ್ಳಿ, ಮರಿಯಪ್ಪ ರಾಮೇನಹಳ್ಳಿ, ವೀರನಗೌಡ ಪಾಟೀಲ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿಯ ಕೃಷ್ಣಮಠದಲ್ಲಿ ಇನ್ನು ಭಕ್ತರಿಗೆ ಕಟ್ಟುನಿಟ್ಟಿನ ನಿಯಮ ಜಾರಿ
ಯುಪಿಐ ಪಾವತಿ ಟಿಕೆಟ್‌ ಅಕ್ರಮ ಬಿಎಂಟಿಸಿ 3 ಕಂಡಕ್ಟರ್‌ ಸಸ್ಪೆಂಡ್‌