ಕನ್ನಡಪ್ರಭವಾರ್ತೆ ಭಾಲ್ಕಿ
ಈ ಕುರಿತು ಕನ್ನಡಪ್ರಭ ಶನಿವಾರ ವರದಿ ಪ್ರಕಟ ಮಾಡಿದ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆಗೆ ಶನಿವಾರ ಶಾಲೆಗೆ ಭೇಟಿ ನೀಡಿದ ಅವರು, ಶಿಕ್ಷಕರು ಮಕ್ಕಳಿಗೆ ಹೊಡೆಯುವುದು, ಥಳಿಸುವುದು, ಹಲ್ಲೆ ನಡೆಸುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಆದರೆ ಯಾವ ಆಧಾರದ ಮೇಲೆ ಶಿಕ್ಷಕರು ಮಗುವಿಗೆ ಥಳಿಸಿದ್ದಾರೆ. ಮಗುವಿಗೆ ಹೆಚ್ಚು ಕಡಿಮೆಯಾದರೆ ಯಾರೂ ಹೊಣೆ ಎಂದು ಪ್ರಶ್ನಿಸಿದರು. ಮಗುವಿನ ಮನೆಗೆ ಭೇಟಿ ನೀಡಿದ್ದು ಮಗುವಿನ ಬೆನ್ನು, ತೊಡೆ, ಕಾಲಿನ ಮೇಲೆ ಗಂಭೀರ ಸ್ವರೂಪದ ಗಾಯವಾಗಿವೆ.
ಮಗುವನ್ನು ಥಳಿಸುವ ಸಂದರ್ಭದಲ್ಲಿ ಉಳಿದ ಶಿಕ್ಷಕರು ತಡೆಯುವ ಪ್ರಯತ್ನ ಏಕೆ ಮಾಡಲಿಲ್ಲ. ಇದನ್ನು ಆಯೋಗ ಗಂಭೀರವಾಗಿ ಪರಿಗಣಿಸಿದ್ದು ಸ್ವಯಂ ಪ್ರೇರಿತ ದೂರು ದಾಖಲಿಸಿ ತನಿಖೆ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.ಪ್ರಕರಣ ಬೆಳಕಿಗೆ ಬಂದ ಮೇಲೆ ಥಳಿಸಿದ ಶಿಕ್ಷಕನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಆದರೆ ಘಟನೆ ನಡೆದು ಎರಡ್ಮೂರು ದಿನಗಳು ಕಳೆದರೂ ಆಡಳಿತ ಮಂಡಳಿ ಶಿಕ್ಷಕನ ವಿರುದ್ಧ ಕ್ರಮ ಜರುಗಿಸಲು ಏಕೆ ಹಿಂದೇಟು ಹಾಕಿದೆ. ಥಳಿತಕ್ಕೊಳಗಾದ ವಿದ್ಯಾರ್ಥಿ ಎಂಟನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದು ಶಾಲೆಯಲ್ಲಿನ ಸಿಸಿ ಕ್ಯಾಮರಾದಲ್ಲಿ ವಿದ್ಯಾರ್ಥಿಗೆ ಥಳಿಸಿದ ದೃಶ್ಯಾವಳಿ ಸೆರೆಯಾದರೂ ಇದನ್ನು ಮುಚ್ಚಿಡುವ ಪ್ರಯತ್ನ ಮಾಡಲಾಗುತ್ತಿದೆ. ಇದು ಹಲವು ಅನುಮಾನಕ್ಕೆ ಕಾರಣವಾಗಿದೆ. ಸೂಕ್ತ ತನಿಖೆ ನಡೆದರಷ್ಟೇ ಸತ್ಯಾಂಶ ಹೊರಬೀಳಲಿದೆ.
ಶಿಕ್ಷಕನಿಂದ ಥಳಿತಕ್ಕೊಳಾದ ಮಗುವಿನ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಭೇಟಿ ನೀಡಿದರು. ಕಮಲನಗರ ತಾಲೂಕಿನ ನಿಡೋದಾ ಗ್ರಾಮದ ಮಗುವಿನ ಮನೆಗೆ ಭೇಟಿ ನೀಡಿದ ಅವರು ಮಗುವಿನ ಆರೋಗ್ಯ ಪರಿಶೀಲಿಸಿ ಪಾಲಕರಿಗೆ ಧೈರ್ಯ ತುಂಬಿದರು.
ಕಾನೂನಿನ ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ಪಾಲಕರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಿಲ್ಲ. ಮಗುವಿನ ರಕ್ಷಣೆ ಆಯೋಗ ನೋಡಿಕೊಳ್ಳಲಿದೆ ಎಂದು ಅಭಯ ನೀಡಿದರು.ಬೆಂಗಳೂರು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಶಶಿಧರ ಕೋಸಂಬೆ ಮಾತನಾಡಿ, ಶಿಕ್ಷಕರು ಮಗುವನ್ನು ಥಳಿಸಿರುವುದನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ. ತನಿಖೆ ವರದಿ ನಂತರ ಶಾಲೆಯ ಮಾನ್ಯತೆ ರದ್ದು ಪಡಿಸುವ ಬಗ್ಗೆ ಶಿಫಾರಸ್ಸು ಮಾಡಲಾಗುವುದು. ಮಗುವನ್ನು ಥಳಿಸಿದ ಆರೋಪದಡಿ ಪ್ರಕರಣ ದಾಖಲಾಗಿದ್ದು ಬಾಲ ನ್ಯಾಯ ಕಾಯ್ದೆಡಿ ದೂರು ದಾಖಲಿಸಿ ಚಾರ್ಚಶಿಟ್ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದರು.