ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಕಿಂಡ್ರೆಲ್ ಮತ್ತು ಮೈಕ್ರೋಸಾಫ್ಟ್ ಸಂಸ್ಥೆಯ ಸಹಯೋಗದಲ್ಲಿ ಸೆ.೨೩ ಹಾಗೂ ೨೪ ರಂದು ಸತತ ೨೪ ಗಂಟೆಗಳ ಹ್ಯಾಕಥಾನ್ ‘ಎಐನ್ನೋವೇಶನ್ II 2025’ ಆಯೋಜಿಸಿತ್ತು.
ಕನ್ನಡಪ್ರಭ ವಾರ್ತೆ ಕಾರ್ಕಳ
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಕಿಂಡ್ರೆಲ್ ಮತ್ತು ಮೈಕ್ರೋಸಾಫ್ಟ್ ಸಂಸ್ಥೆಯ ಸಹಯೋಗದಲ್ಲಿ ಸೆ.೨೩ ಹಾಗೂ ೨೪ ರಂದು ಸತತ ೨೪ ಗಂಟೆಗಳ ಹ್ಯಾಕಥಾನ್ ‘ಎಐನ್ನೋವೇಶನ್ II 2025’ ಆಯೋಜಿಸಿತ್ತು.
ಕಾರ್ಯಕ್ರಮದ ಸಮಾರೋಪದಲ್ಲಿ ಕಿಂಡ್ರೆಲ್ ಸಂಸ್ಥೆಯ ಗ್ಲೋಬಲ್ ಡೆಲಿವರಿ ಲೀಡರ್ಶಿಪ್ ಹಿರಿಯ ಉಪಾಧ್ಯಕ್ಷ ಶಂಕರ ಶ್ರೀನಿವಾಸನ್ ಭಾಗವಹಿಸಿ ಮಾತನಾಡಿ, ಇಂತಹ ಹ್ಯಾಕಥಾನ್ಗಳು ಉತ್ತಮ ಐಡಿಯಾಗಳನ್ನು ಹೊರತರುವಲ್ಲಿ ಸಹಕಾರಿಯಾಗುತ್ತವೆ. ಈ ರೀತಿಯ ಸ್ಪರ್ಧೆಗಳಲ್ಲಿ ಹೊರಹೊಮ್ಮಿದ ಯೋಜನೆಗಳು ನಿತ್ಯಜೀವನದಲ್ಲಿ ಕಮರ್ಶಿಯಲೈಸ್ ಆಗುವ ಹಂತವನ್ನು ಕಾಣಬೇಕಾಗಿದೆ. ಈ ಐಡಿಯಾಗಳು ಕೇವಲ ಸ್ಪರ್ಧೆಗಷ್ಟೇ ಸೀಮಿತವಾಗಿರದೆ ಸಮಾಜಕ್ಕೆ ಪ್ರಯೋಜನಕಾರಿಯಾಗಬೇಕು ಎಂದರು.
ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಆಡಳಿತ ವಿಭಾಗದ ಪ್ರೊ.ಚಾನ್ಸಲರ್ ವಿಶಾಲ್ ಹೆಗ್ಡೆ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ವಿವಿಧ ಬಗೆಯ ಸಾಮಾಜಿಕ ಸಮಸ್ಯೆಗಳಿಗೆ ವಿನೂತನ ಚಿಂತನೆಯೊಂದಿಗೆ ಪರಿಹಾರ ಕಂಡುಕೊಳ್ಳಬೇಕು. ಇಂತಹ ಹ್ಯಾಕಥಾನ್ಗಳು ವಿದ್ಯಾರ್ಥಿಗಳ ಆಲೋಚನಾಶಕ್ತಿಯನ್ನು ವೃದ್ಧಿಸುತ್ತದೆ ಎಂದು ಹೇಳಿದರು.
ಕಿಂಡ್ರೆಲ್ ಸಂಸ್ಥೆಯ ಡೆಲಿವರಿ ಮ್ಯಾನೇಜ್ಮೆಂಟ್ ಮತ್ತು ಇಂಡಿಯಾ ಯೂನಿವರ್ಸಿಟಿ ಲೀಡರ್ ವಿಭಾಗದ ನಿರ್ದೇಶಕ ಡಾ. ರಾಜ್ ಮೋಹನ್ ಸಿ., ಮೈಕ್ರೋಸಾಫ್ಟ್ ಸಂಸ್ಥೆಯ ಡೇಟಾ ಮತ್ತು ಎಐ ಪ್ರೋಗ್ರಾಂ ಮುಖ್ಯಸ್ಥ ಸುಮಿತ್ ರಂಜನ್, ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲೂಣ್ಕರ್ ಉಪಸ್ಥಿತರಿದ್ದರು.ಸ್ಪರ್ಧೆಯ ವಿಜೇತರು:
ಸೇಂಟ್ ಜೋಸೆಫ್ ಕಾಲೇಜಿನ ರಿಯನ್ ಜೇಡನ್ ವಾಲ್ಡರ್, ಸಲೋಮಿ ಡಿಸೋಜ, ಮ್ಯಾಕ್ ರಿಯಾನ್ ಡಿಸೋಜ ಮತ್ತು ಮಿಲ್ಟನ್ ಬ್ರಾಗ್ಸ್ ಅವರನ್ನು ಒಳಗೊಂಡ ನಲ್ ಪಾಯಿಂಟರ್ಸ್ ತಂಡ ಪ್ರಥಮ ಸ್ಥಾನ ಗಳಿಸಿತು. ಕೆನರಾ ಎಂಜಿನಿಯರಿಂಗ್ ಕಾಲೇಜಿನ ಅನನ್ಯಾ ಭಟ್, ಪ್ರತೀಕ್ ಪ್ರಕಾಶ್ ಕಿಣಿ, ಸುಜನ್ ಕುಮಾರ್ ಶೆಟ್ಟಿ ಮತ್ತು ಲಕ್ಷ್ಮೀಶ್ ಎಂ. ಪ್ರಭು ಅವರನ್ನೊಳಗೊಂಡ ಬಯೋ ಇನ್ನೋವೇಟರ್ಸ್ ತಂಡ ದ್ವಿತೀಯ ಸ್ಥಾನ, ಎಜೆ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಜ್ಞಾನೇಶ್, ಮಿಲನ್ ಸಿಐ, ಹಿಮಾಂಶು ಹೆಗ್ಡೆ ಮತ್ತು ಗೌರೇಶ್ ಜಿ ಪೈ ಅವರನ್ನೊಳಗೊಂಡ ಅನ್ಡಿಫೈನ್ಡ್ ತಂಡವು ಎರಡನೇ ರನ್ನರ್ಸ್ ಅಪ್ ಸ್ಥಾನವನ್ನು ತನ್ನದಾಗಿಸಿಕೊಂಡಿತು.ಕಾರ್ಯಕ್ರಮವನ್ನು ಕೌನ್ಸೆಲಿಂಗ್, ವೆಲ್ಫೇರ್, ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ವಿಭಾಗದ ಮುಖ್ಯಸ್ಥ ಭರತ್ ಜಿ. ಕುಮಾರ್, ಕೌನ್ಸಿಲರ್ ಅಂಕಿತ್ ಎಸ್. ಕುಮಾರ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ.ಶಶಾಂಕ್ ಶೆಟ್ಟಿ ಸಂಯೋಜಿಸಿದ್ದರು. ವಿದ್ಯಾರ್ಥಿ ನಂದನ್ ಪೈ ಅತಿಥಿಗಳನ್ನು ಸ್ವಾಗತಿಸಿದರು. ಎಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಅನುಷಾ ಆರ್. ಶರತ್ ಕಾರ್ಯಕ್ರಮ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.