ನಿಟ್ಟೆ: ಸೆಂಟರ್ ಆಫ್ ಎಕ್ಸಲೆನ್ಸ್ ಉದ್ಘಾಟನೆ

KannadaprabhaNewsNetwork |  
Published : Jan 26, 2025, 01:33 AM IST
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ತನ್ನ ಕ್ಯಾಂಪಸ್ ನಲ್ಲಿ ಜಪಾನ್ ನ ಟಿಕೆ ಎಂಜಿನಿಯರಿಂಗ್ ಸಹಭಾಗಿತ್ವದಲ್ಲಿ ಅತ್ಯಾಧುನಿಕ ಸೆಂಟರ್ ಆಫ್ ಎಕ್ಸಲೆನ್ಸ್ ನ್ನು ಸ್ಥಾಪಿಸಿದ್ದು ಜ.೨೪ ರಂದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು | Kannada Prabha

ಸಾರಾಂಶ

ನಿಟ್ಟೆಯ ಆಫ್-ಕ್ಯಾಂಪಸ್ ಕೇಂದ್ರವಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ತನ್ನ ಕ್ಯಾಂಪಸ್‌ನಲ್ಲಿ ಜಪಾನ್‌ನ ಟಿಕೆ ಎಂಜಿನಿಯರಿಂಗ್ ಸಹಭಾಗಿತ್ವದಲ್ಲಿ ಅತ್ಯಾಧುನಿಕ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪಿಸಿದ್ದು, ಶುಕ್ರವಾರ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಕಳ: ನಿಟ್ಟೆಯ ಆಫ್-ಕ್ಯಾಂಪಸ್ ಕೇಂದ್ರವಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ತನ್ನ ಕ್ಯಾಂಪಸ್‌ನಲ್ಲಿ ಜಪಾನ್‌ನ ಟಿಕೆ ಎಂಜಿನಿಯರಿಂಗ್ ಸಹಭಾಗಿತ್ವದಲ್ಲಿ ಅತ್ಯಾಧುನಿಕ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪಿಸಿದ್ದು, ಶುಕ್ರವಾರ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಜಪಾನ್ ಟಿಕೆ ಎಂಜಿನಿಯರಿಂಗ್ ಕಂಪನಿ ಲಿಮಿಟೆಡ್‌ನ ಸಿಇಒ ಯುಟಾಕಾ ಶಿಮೊಮುರಾ ಭಾಗವಹಿಸಿದ್ದರು. ಸಂಸ್ಥೆಯ ಕಾರ್ಯನಿರ್ವಾಹಕ ವ್ಯವಸ್ಥಾಪಕ ನಿರ್ದೇಶಕ ಜುನಿಚಿ ಗೋಯಾ ಮತ್ತು ಟಿಕೆ ಎಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಕಾರ್ಪೊರೇಟ್ ಸಲಹೆಗಾರ ಕೆಂಜಿ ಯಮಡಾ ಭಾಗವಹಿಸಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ನಿಟ್ಟೆ ತಾಂತ್ರಿಕ ಶಿಕ್ಷಣದ ಉಪಾಧ್ಯಕ್ಷ ಡಾ.ಗೋಪಾಲ್ ಮುಗೇರಾಯ ವಹಿಸಿದ್ದರು.ಎನ್ಎಂಎಎಂಐಟಿ ಪ್ರಾಂಶುಪಾಲ ಡಾ.ನಿರಂಜನ್ ಎನ್. ಚಿಪ್ಳೂಣ್ಕರ್ ಸ್ವಾಗತಿಸಿ, ಕಲಿಕೆ, ಸಂಶೋಧನೆ ಮತ್ತು ಉದ್ಯಮ-ಶೈಕ್ಷಣಿಕ ಸಹಯೋಗವನ್ನು ಉತ್ತೇಜಿಸುವ ಸೆಂಟರ್ ಆಫ್ ಎಕ್ಸಲೆನ್ಸ್‌ನ ದೃಷ್ಟಿಕೋನವನ್ನು ವಿವರಿಸಿದರು.

ನಿಟ್ಟೆ ಡಿಯು ಅಂತಾರಾಷ್ಟ್ರೀಯ ಸಂಬಂಧಗಳ ನಿರ್ದೇಶಕ ಪ್ರೊ.ಹರಿಕೃಷ್ಣ ಭಟ್, ಜಾಗತಿಕ ಪಾಲುದಾರಿಕೆ ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಈ ಕೇಂದ್ರದ ಸಾಮರ್ಥ್ಯವನ್ನು ಹೇಳಿದರು.

ಈ ಕಾರ್ಯಕ್ರಮವನ್ನು ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಕೆಲಸ ಮಾಡುವ ವಿದ್ಯಾರ್ಥಿಗಳ ಸಲಹೆಗಾರರಾದ ರಾಘವೇಂದ್ರ ಪೈ ಕೆ. ಅವರು ಸಂಯೋಜಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ