ಕನ್ನಡಪ್ರಭ ವಾರ್ತೆ ಮಂಗಳೂರು
ಸಮಾರಂಭದಲ್ಲಿ ವಿಶ್ವವಿದ್ಯಾನಿಲಯ ಕುಲಾಧಿಪತಿ ಎನ್. ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದು, ಸೇನಾಪಡೆಗಳ ವೈದ್ಯಕೀಯ ಸೇವೆಗಳ ಡೈರೆಕ್ಟರ್ ಜನರಲ್ ಡಾ. ಆರ್ತಿ ಸರಿನ್ ಮುಖ್ಯ ಭಾಷಣ ಮಾಡಲಿದ್ದಾರೆ. ಪ್ರೊ. ಡಾ. ಎಂ. ಶಾಂತಾರಾಂ ಶೆಟ್ಟಿ, ಸಹ ಕುಲಾಧಿಪತಿ (ಆಸ್ಪತ್ರೆ ನಿರ್ವಹಣೆ) ಪ್ರೊ.ಡಾ.ಎಂ.ಶಾಂತಾರಾಮ ಶೆಟ್ಟಿ ಹಾಗೂ ಸಹಕುಲಾಧಿಪತಿ(ಆಡಳಿತ) ವಿಶಾಲ್ ಹೆಗ್ಡೆ, ವಿಶ್ವವಿದ್ಯಾನಿಲಯದ ವಿವಿಧ ಕಾಲೇಜುಗಳ ಮುಖ್ಯಸ್ಥರು ಮತ್ತು ಕಾರ್ಯಕಾರಿ ಮಂಡಳಿ ಹಾಗೂ ಶೈಕ್ಷಣಿಕ ಸಮಿತಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಕುಲಪತಿ ಪ್ರೊ. ಡಾ. ಎಂ. ಎಸ್. ಮೂಡಿತ್ತಾಯ ಬುಧವಾರ ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.1,052 ಮಂದಿಗೆ ಪದವಿ:
ಈ ಸಮಾರಂಭದಲ್ಲಿ ಒಟ್ಟು 1,052 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ.ಪಿ.ಎಚ್.ಡಿ-34, ವೈದ್ಯಕೀಯ-163 (ಪಿಜಿ-15+ಯುಜಿ-148), ದಂತ ವೈದ್ಯಕೀಯ-147 (ಫೆಲೋಶಿಪ್-1+ಪಿಜಿ- 49+2-97), 2-209 (22-107+-102), 42-85 (22-30+-55), -143 (22-05+-138), -146 (2-42+2-104), ಮಾನವಿಕ-14 (ಪಿಜಿ-11+ ಯುಜಿ-03), ಜೈವಿಕ ವಿಜ್ಞಾನ -49 (ಪಿಜಿ-45 +ಯುಜಿ-04), ವಾಸ್ತುಶಿಲ್ಪ -41 (ಯುಜಿ), ವಾಕ್ ಮತ್ತು ಶ್ರವಣ -15 (ಪಿಜಿ) ಮತ್ತು ವ್ಯವಹಾರ ನಿರ್ವಹಣೆ - 06 (ಪಿಜಿ-06).ಶೈಕ್ಷಣಿಕ ಶ್ರೇಷ್ಠತೆಗೆ ಗೌರವ ನೀಡುವುದಕ್ಕಾಗಿ ವಿಶ್ವವಿದ್ಯಾಲಯ 22 ಚಿನ್ನದ ಪದಕ (11 ನಿಟ್ಟೆ ವಿಶ್ವವಿದ್ಯಾನಿಲಯ ಚಿನ್ನದ ಪದಕ ಮತ್ತು 11 ದತ್ತಿ ಚಿನ್ನದ ಪದಕ) ಹಾಗೂ 72 ಮೆರಿಟ್ ಪ್ರಮಾಣ ಪತ್ರಗಳನ್ನು ಪ್ರಶಸ್ತಿಯಾಗಿ ನೀಡಲಿದೆ ಎಂದರು.
ವಿಶ್ವವಿದ್ಯಾನಿಲಯದ ಮಾತೃ ಸಂಸ್ಥೆಯಾದ ನಿಟ್ಟೆ ಎಜುಕೇಶನ್ ಟ್ರಸ್ಟ್ ತನ್ನ ಮಂಗಳೂರು ಮತ್ತು ಬೆಂಗಳೂರು ಕ್ಯಾಂಪಸ್ಗಳಲ್ಲಿ 36 ಶಿಕ್ಷಣ ಸಂಸ್ಥೆಗಳನ್ನು ನಿರ್ವಹಿಸುತ್ತಿದೆ ಮತ್ತು ಸುಮಾರು 25,000 ವಿದ್ಯಾರ್ಥಿಗಳು ಇಲ್ಲಿ ಅಧ್ಯಯನ ಮಾಡುತ್ತಿದ್ದಾರೆ ಎಂದರು.
ಪ್ರಮುಖ ಅಧಿಕಾರಿಗಳಾದ ಡಾ.ಹರ್ಷ ಹಾಲಹಳ್ಳಿ, ಪ್ರೊ.ಡಾ.ಪ್ರಸಾದ್ ಬಿ.ಶೆಟ್ಟಿ ಇದ್ದರು.