ಕನ್ನಡಪ್ರಭ ವಾರ್ತೆ, ಚಾಮರಾಜನಗರ
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಚಿಕ್ಕಲ್ಲೂರು ಸಿದ್ದಾಪ್ಪಾಜಿ ಜಾತ್ರೆಯಲ್ಲಿ ದೇವರ ಹಾಗೂ ಪಂಕ್ತಿ ಸೇವೆ ಹೆಸರಿನಲ್ಲಿ ನಡೆಯುತ್ತಿದ್ದ ಪ್ರಾಣಿ ಬಲಿ ಶೇ. ೯೦ ರಷ್ಟು ನಿಂತಿದ್ದೂ ಆದರೂ ಕೆಲವೆಡೆ ನಡೆಯುತ್ತಿರರುವ ಪ್ರಾಣಿ ಬಲಿಯನ್ನು ತಡೆಯಬೇಕು ಇದು ೨೦೧೭ರ ಹೈಕೋರ್ಟ್ನ ಆದೇಶವಾಗಿದೆ ಎಂದರು.
ಕರ್ನಾಟಕ ಹೈಕೋರ್ಟ್ನ ಆದೇಶದಂತೆ ಜಿಲ್ಲಾಡಳಿತ ಚಿಕ್ಕಲ್ಲೂರಿನ ಶ್ರೀ ಸಿದ್ದಪ್ಪಾಜಿ ಜಾತ್ರೆ, ಬಿಳಿಗಿರಿ ರಂಗನ ಬೆಟ್ಟದ ರಂಗನಾಥಸ್ವಾಮಿ ಜಾತ್ರೆ ಹಾಗೂ ವಡಗೆರೆ ಶ್ರೀ ಆಂಜನೇಯಸ್ವಾಮಿ, ಕುರುಬನ ಕಟ್ಟೆ ಶ್ರೀ ಮಂಟೇಸ್ವಾಮಿ ದೇವಾಲಯಗಳು ಮತ್ತು ಅವುಗಳ ಸುತ್ತಮುತ್ತಲಿನ ಪರಿಸರಗಳಲ್ಲಿ ಹಾಗೂ ಇನ್ನಿತರ ಧಾರ್ಮಿಕ ಸ್ಥಳಗಳಲ್ಲಿ ನಡೆಯಲಿರುವ ಪ್ರಾಣಿಗಳ ಬಲಿಯನ್ನು ತಡೆಯಬೇಕು ಎಂದರು.ಪಂಕ್ತಿ ಸೇವೆಗೆ ಹಾಗೂ ಮಾಂಸಾಹಾರಕ್ಕೆ ನಮ್ಮ ವಿರೋಧವಿಲ್ಲ, ಆದರೆ ಜಾತ್ರೆ ನಡೆಯುವ ಸ್ಥಳ ಹಾಗೂ ಸುತ್ತಮುತ್ತ ಯಾವುದೇ ಪ್ರಾಣಿ ಬಲಿ ನಡೆಯಬಾರದು, ಇಲ್ಲಿ ಬಲಿ ಪೀಠವಿಲ್ಲ, ಸಂವಿಧಾನದಲ್ಲಿ ಪ್ರತಿಯೊಂದು ಪ್ರಾಣಿಗೂ ಬದುಕುವ ಹಕ್ಕನ್ನು ನೀಡಲಾಗಿದೆ ಇದನ್ನು ನಾವು ಗೌರವಿಸಬೇಕು ಎಂದರು.
ಭಾರತ ಸಂವಿಧಾನದ ಆರ್ಟಿಕಲ್ ೫೧-ಎ ರ ಅಡಿಯಲ್ಲಿ ಭಕ್ತರಲ್ಲಿ ಅಹಿಂಸೆ, ಜೀವದಯೆ ಮತ್ತು ಪ್ರಾಣಿಬಲಿ ತಡೆ ಕುರಿತು ಜಾಗೃತಿ ಮೂಡಿಸಲು ಅಹಿಂಸಾ- ಪ್ರಾಣಿದಯಾ-ಆಧ್ಯಾತ್ಮ ಸಂದೇಶ ಯಾತ್ರೆಯನ್ನು ಜಾತ್ರಾ ಪರಿಸರ ಮತ್ತು ಸುತ್ತ ಮುತ್ತಲಿನ ಊರುಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.ರಾಜ್ಯಾದ್ಯಂತ ದೇವರ ಹೆಸರಿನಲ್ಲಿ ನಡೆಯುವ ಪ್ರಾಣಿಗಳ ರಕ್ತಪಾತ ಕೈಬಿಟ್ಟು ಅಹಿಂಸಾತ್ಮಕವಾಗಿ ಸಾತ್ವಿಕ ಪದಾರ್ಥಗಳಿಂದ ಪೂಜೆ ಸಲ್ಲಿಸಲು, ಧಾರ್ಮಿಕ ಸೇವಾ ಕೈಂಕರ್ಯಗಳನ್ನು ಕೈಗೊಳ್ಳುವಂತೆ ಭಕ್ತರಲ್ಲಿ ಜಾಗೃತಿ ಮೂಡಿಸಲು ಈ ಅಹಿಂಸ- ಪ್ರಾಣಿ ದಯಾ- ಆಧ್ಯಾತ್ಮ ಸಂದೇಶ ಯಾತ್ರೆಯನ್ನು ಕೈಗೊಳ್ಳಲಾಗಿದೆ ಎಂದರು.
ಮಂಟೇಸ್ವಾಮಿ, ಸಿದ್ದಪ್ಪಾಜಿ, ರಾಚಪ್ಪಾಜಿ ಶರಣ ಪರಂಪರೆಯವರು, ಇವರ ಹೆಸರಿನಲ್ಲಿ ಯಾವುದೇ ಪ್ರಾಣಿ ಬಲಿ ಮಾಡಬಾರದು, ದಯವೇ ಧರ್ಮದ ಮೂಲ, ದಯವಿರಬೇಕು ಸಕಲ ಪ್ರಾಣಿಗಳೆಲ್ಲರಲ್ಲಿ ಎಂಬ ವಿಶ್ವಗುರು ಬಸವಣ್ಣನವರ ಈ ದಿವ್ಯ ಸಂದೇಶ ಹಾಗೂ ಅಹಿಂಸಾ ಪರಮೋ ಧಮಃ ಎಂಬ ಭಗವಾನ್ ಮಹಾವೀರರ ಮತ್ತು ಇನ್ನಿತರ ಧರ್ಮಗುರುಗಳ, ಮಹಾತ್ಮರ ದಿವ್ಯ ಉದಾತ್ತ ಸಂದೇಶಗಳನ್ನು ಸಾರಿ, ಸಾವಿರಾರು ಮೂಕ ಪ್ರಾಣಿಗಳನ್ನು ಉಳಿಸಬೇಕಿದೆ ಎಂದರುಪ್ರಾಣಿಬಲಿಯು ಅನಾಗರೀಕವೂ, ಅಂಧ ಶ್ರದ್ದೆಯೂ, ಪರಿಸರ ಮಾಲಿನ್ಯಕಾರಕವೂ, ಸಾಂಕ್ರಾಮಿಕ ರೋಗ-ರುಜಿನಕಾರಕವೂ ಆಗಿದ್ದು, ಇದು ಕಾನೂನು ಮತ್ತು ಧರ್ಮ ವಿರೋಧಿ ಆಗಿದೆ, ಆದ್ದರಿಂದ ಭಕ್ತಾದಿಗಳು ಪ್ರಾಣಿಬಲಿ ತ್ಯಜಿಸಿ ಅಹಿಂಸಾತ್ಮಕವಾಗಿ, ಅ? ವಿಧಾರ್ಚನೆ ಮೂಲಕ ಸಾತ್ವಿಕ ಪೂಜೆ ಸಲ್ಲಿಸಬೇಕು ಎಂದರು,
ದೇವಾಲಯಗಳು ವಧಾಲಯಗಳಾಗದೆ ದಿವ್ಯಾಲಯಗಳಾಗಬೇಕು, ಧ್ಯಾನಾಲಯ ಗಳಾಗಬೇಕು, ಜ್ಞಾನಾಲಯಗಳಾಗಬೇಕು. ಜಾತ್ರಾ ಪರಿಸರಗಳು, ಧಾರ್ಮಿಕ ಸ್ಥಳಗಳು, ಧಾರ್ಮಿಕ ಸಮಾವೇಶಗಳಾಗ ಬೇಕು ಎಂದರುಜಿಲ್ಲಾಡಳಿತ, ಕೊಳ್ಳೆಗಾಲ ತಾಲೂಕು ಆಡಳಿತ ಹಾಗೂ ಪೋಲಿಸ್ ಇಲಾಖೆ ಇವರುಗಳು ಮಾನ್ಯ ರಾಜ್ಯ ಉಚ್ಚ ನ್ಯಾಯಾಲಯದ ಆದೇಶದಂತೆ ಪ್ರಾಣಿಬಲಿ ತಡೆ ಕುರಿತು ಸಂಬಂಧಪಟ್ಟ ಸ್ಥಳಗಳಲ್ಲಿ, ಎಲ್ಲೆಡೆ ಕರಪತ್ರಗಳು, ಬ್ಯಾನರ್ಸ್, ಧ್ವನಿವರ್ಧಕ ಮುಂತಾದವುಗಳ ಮೂಲಕ ವ್ಯಾಪಕ ಜಾಗೃತಿ ಮೂಡಿಸಬೇಕೆಂದು ಮನವಿ ಮಾಡಿದರು.
ಈಗಾಗಲೇ ಜಿಲ್ಲಾಡಳಿತ ಮ್ಯಾಜಿಸ್ಟ್ರೇಟ್ಗಳನ್ನು ನೇಮಿಸಿ, ಕ್ರಮಗಳನ್ನು ಕೈಗೊಂಡಿರುವುದನ್ನು ಅಭಿನಂದಿಸುತ್ತೇನೆ ಎಂದರು