ಕನ್ನಡಪ್ರಭ ವಾರ್ತೆ ಚಾಮರಾಜನಗರ
ಗುಂಡ್ಲುಪೇಟೆ ತಾಲೂಕು ಗುರುವಿನಪುರದಲ್ಲಿ ಚೆಂಡು ಮಲ್ಲಿಗೆ ಸಂಸ್ಕರಣ ಘಟಕ ಪ್ರಾರಂಭಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಸ್ಥಳೀಯವಾಗಿ ಪರಿಸರ ಹಾಳಾಗುತ್ತದೆ ಅಂತರ್ಜಲ ಹಾಳಾಗಿ ಕುಡಿಯುವ ನೀರಿಗೆ ಸಾಕಷ್ಟು ತೊಂದರೆ ಉಂಟಾಗುತ್ತದೆ. ಸ್ಥಳೀಯ ರೈತರ ಆರೋಗ್ಯದ ಮೇಲೆ ಭೀಕರ ಪರಿಣಾಮ ಉಂಟಾಗುತ್ತದೆ. ಆದ ಕಾರಣ ಕಾರ್ಖಾನೆ ಮತ್ತು ಉದ್ಯೋಗ ಸೃಷ್ಟಿಯಾವಕಾಶ ಕಾರ್ಖಾನೆ ಸರ್ಕಾರಕ್ಕೆ ತೆರಿಗೆ ಬೇಕಾಗಿದ್ದರೆ ಸರ್ಕಾರ ಅಭಿವೃದ್ಧಿಪಡಿಸಿರುವ ಕೆಐಡಿಪಿ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿ ಈ ಚೆಂಡು ಸಂಸ್ಕಾರ ಘಟಕ ಮಾಡಲು ಅವಕಾಶ ಕಲ್ಪಿಸಲಿ ಎಂದು ಆಗ್ರಹಿಸಿದರು. ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇಡ ಯಾವುದೇ ಕಾರಣಕ್ಕೂ ಚೆಂಡು ಮಲ್ಲಿಗೆ ಸಂಸ್ಕರಣ ಘಟಕಕ್ಕೆ ಅವಕಾಶ ನೀಡುವುದಿಲ್ಲ. ರೈತರ ಚಿನ್ನ ಕೊಡಿಸುವಲ್ಲಿ ಹಂತ ಹಂತವಾಗಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಡಲಾಯಿತು. ಪ್ರತಿಭಟನೆಯಲ್ಲಿ ಶೇಖರ್ ದೇವ್ರು, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಲೆಯೂರು ಹರ್ಷ, ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್, ಜಿಲ್ಲಾ ಉಪಾಧ್ಯಕ್ಷ ಪ್ರವೀಣ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಹೇಂದ್ರ ಚಾಮರಾಜನಗರ ತಾಲೂಕು ಅಧ್ಯಕ್ಷ ಅರಳಿಕಟ್ಟೆ ಕುಮಾರ್, ಜೆನ್ನೂರ್ ಶಾಂತರಾಜು, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಮಂಚಳ್ಳಿ ಮಣಿಕಂಠ, ಕೋಟೆಕೆರೆ ಮಹದೇವ ನಾಯಕ, ಉಡಿಗಾಲ ಗ್ರಾಮ ಘಟಕದ ಅಧ್ಯಕ್ಷ ಮಂಜುನಾಥ್, ರಾಜಶೇಖರ್, ಮಹದೇವಸ್ವಾಮಿ ಗುರುಮಲ್ಲಪ್ಪ ಮಲೆಯೂರು ಗ್ರಾಮ ಘಟಕದ ಅಧ್ಯಕ್ಷ ಬಸವರಾಜಪ್ಪ ಸತೀಶ್ ಇತರರು ಭಾಗವಹಿಸಿದ್ದರು.