ಕನ್ನಡಪ್ರಭ ವಾರ್ತೆ ಬೆಂಗಳೂರು
ಎರಡು ಹಸುಗಳನ್ನು ಕಳವು ಮಾಡಿದ ಆರೋಪದ ಮೇಲೆ ತಮ್ಮ ವಿರುದ್ಧ ಚನ್ನಪ್ಪಟ್ಟಣದ ಎಂ.ಕೆ.ದೊಡ್ಡಿ ಠಾಣಾ ಪೊಲೀಸರು ದಾಖಲಿಸಿರುವ ಪ್ರಕರಣ ರದ್ದು ಕೋರಿ ಮಂಗಳಮ್ಮ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಕಿಡಿಕಾರಿತು.
ಅರ್ಜಿದಾರರ ಪರ ವಕೀಲರು, 2024ರಲ್ಲಿ ಎರಡು ಹಸು ಕದ್ದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚನ್ನಪಟ್ಟಣ ತಾಲ್ಲೂಕಿನ ಎಂ.ಕೆ. ದೊಡ್ಡಿ ಠಾಣೆಯಲ್ಲಿ 2026ರಲ್ಲಿ ಒಂದೇ ಕುಟುಂಬದ ನಾಲ್ವರ ವಿರುದ್ಧ (ಅರ್ಜಿದಾರರ) ಪೊಲೀಸರು ಕಳವು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿಸಿದರು.ಅದಕ್ಕೆ ಪೀಠ, ಹಸುಗಳು ನಾಪತ್ತೆ. ಆರೋಪ ಪಟ್ಟಿ ಸಲ್ಲಿಕೆಯಾಗಿದೆಯೇ, ಅದಕ್ಕೂ ಪೊಲೀಸರು ಆರೋಪ ಪಟ್ಟಿ ಹಾಕಿ ಬಿಡ್ತಾರೆ ಎಂದು ನುಡಿಯಿತು.
ಅಂತಿಮವಾಗಿ 2024ರಲ್ಲಿ ಎರಡು ಹಸುಗಳು ನಾಪತ್ತೆಯಾಗಿದ್ದು, ಅವು ಪತ್ತೆಯಾಗಿಲ್ಲ ಎಂದು ಇಡೀ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದರ ತನಿಖೆಗೆ ಅನುಮತಿಸಿದರೆ, ಅದು ಕಾನೂನಿನ ದುರ್ಬಳಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ತಡೆ ನೀಡಲಾಗಿದೆ ಎಂದು ಮಧ್ಯಂತರ ಆದೇಶ ಮಾಡಿತು.
2026ರ ಮಾ.26ರಂದು ದಾಸಯ್ಯ ಎಂಬುವವರು ‘2024ರ ಆ.18ರಂದು ಮಧ್ಯಾಹ್ನ ತನ್ನ ಎರಡು ಸೀಮೆ ಹಸುಗಳನ್ನು ಮೇಯಲು ಕಟ್ಟಿ ಹಾಕಿ ಮನೆಗೆ ಊಟಕ್ಕೆ ಹೋಗಿದ್ದೆ. ನಂತರ ಬಂದು ನೋಡಿದಾಗ ಅವು ಇರಲಿಲ್ಲ. 2026ರ ಮಾ.25ರಂದು ತೌಟನಹಳ್ಳಿಯ ದಲ್ಲಾಡಿ ಶೇಖರನಿಗೆ ಈ ವಿಚಾರ ತಿಳಿಸಿದ್ದು, ಈತ ತಾನೇ ಆ ಹಸುಗಳನ್ನು ಮಾರಾಟ ಮಾಡಿಸಿದ್ದಾಗಿ ತಿಳಿಸಿದ್ದನು. ಈ ಹಸುಗಳನ್ನು ಮಂಗಳಮ್ಮ, ಚೇತನ್, ಚಂದನ್ ಮತ್ತು ಸೌಮ್ಯಾ ಎಂಬುವವರು ಮಾರಿಸಿಕೊಡುವಂತೆ ಕೋರಿದ್ದರು. ಒಂದು ಸಾವಿರ ರುಪಾಯಿ ಕಮಿಷನ್ ಪಡೆದು ಮೈಲನಾಯಕನಹೊಸಹಳ್ಳಿಯ ಹರೀಶನಿಗೆ ಮಾರಾಟ ಮಾಡಿಸಿದ್ದಾಗ ತಿಳಿಸಿದ್ದನು’ ಎಂದು ಎಂ.ಕೆ. ದೊಡ್ಡಿ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಅರ್ಜಿದಾರರ ವಿರುದ್ಧ ಬಿಎನ್ಎಸ್ 302 (2) ಅಡಿಯಲ್ಲಿ ಕಳವು ಪ್ರಕರಣ ದಾಖಲಿಸಿದ್ದರು.ಲೈಂಗಿಕ ಕೇಸ್ಗಳ ತನಿಖೆ ಬಗ್ಗೆ ಚಾಟಿ ಬೀಸಿತ್ತು ಪೀಠ: