ಸಹಕಾರಿಯಲ್ಲಿ ಜಾತಿ, ಧರ್ಮ, ರಾಜಕಾರಣ ಬೇಡ: ಲೋಕಪ್ಪಗೌಡ

KannadaprabhaNewsNetwork |  
Published : Feb 06, 2026, 01:15 AM IST
ಸಸಸಸಸ | Kannada Prabha

ಸಾರಾಂಶ

ಚಿಕ್ಕಮಗಳೂರುಸಹಕಾರಿ ರಂಗದಲ್ಲಿ ಜಾತಿ, ಧರ್ಮ ಹಾಗೂ ರಾಜಕಾರಣಕ್ಕೆ ಅವಕಾಶ ಇರಬಾರದು. ಪಕ್ಷಾತೀತವಾಗಿ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ಸೇವೆಯೇ ಮೂಲಮಂತ್ರ ವಾಗಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಯೂನಿಯನ್‌ನ ನಿರ್ದೇಶಕ ಬಿ.ಸಿ.ಲೋಕಪ್ಪಗೌಡ ಹೇಳಿದರು.

- ರಾಜ್ಯಮಟ್ಟದ ವಿಶೇಷ ಸಹಕಾರ ತರಬೇತಿ ಕಾರ್ಯಾಗಾರ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಸಹಕಾರಿ ರಂಗದಲ್ಲಿ ಜಾತಿ, ಧರ್ಮ ಹಾಗೂ ರಾಜಕಾರಣಕ್ಕೆ ಅವಕಾಶ ಇರಬಾರದು. ಪಕ್ಷಾತೀತವಾಗಿ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ಸೇವೆಯೇ ಮೂಲಮಂತ್ರ ವಾಗಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಯೂನಿಯನ್‌ನ ನಿರ್ದೇಶಕ ಬಿ.ಸಿ.ಲೋಕಪ್ಪಗೌಡ ಹೇಳಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಸಹಯೋಗದಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ವಿಶೇಷ ಸಹಕಾರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ ಆಧುನಿಕ ಜಗತ್ತಿನಲ್ಲಿ ಸಹಕಾರಿ ರಂಗ ಬಹಳಷ್ಟು ಬದಲಾವಣೆ ಕಂಡಿದೆ. ಸಹಕಾರಿ ಕ್ಷೇತ್ರ ಪಕ್ಷ, ಧರ್ಮಕ್ಕೆ ಸೀಮಿತಗೊಳ್ಳುವುದು ಸರಿ ಯಲ್ಲ. ಸಹಕಾರಿ ಕ್ಷೇತ್ರ ಪ್ರಾರಂಭದ ಕಾಲದಲ್ಲಿ ಗುಂಪುಗಾರಿಕೆ, ಜಾತಿ, ಪಕ್ಷಬೇಧದಿಂದ ಕಾರ್ಯನಿರ್ವಹಿಸುತ್ತಿದ್ದು, ಇಂದಿನ ದಿನಮಾನದಲ್ಲಿ ಸೊಸೈಟಿಗಳು ರಾಜಕೀಯವಾಗಿ ಮಾರ್ಪಾಡುತ್ತಿದೆ ಎಂದರು.

ಇಂದಿನ ದಿನಗಳಲ್ಲಿ ಸಹಕಾರಿ ರಂಗದಲ್ಲಿ ಸಾಕಷ್ಟು ಸವಲತ್ತಿನ ಅನುಕೂಲವಿದ್ದರೂ ಬೆಳವಣಿಗೆಯಲ್ಲಿ ಹಿನ್ನೆಡೆ ಅನುಭವಿಸುತ್ತಿದೆ. ಕಾರಣ ಪಕ್ಷರಾಜಕೀಯ, ಗುಂಪುಗಾರಿಕೆ ಹೆಚ್ಚಾಗುತ್ತಿದ್ದು ಇದರಿಂದ ಜನರಿಗೆ ಸಮರ್ಪಕ ಸೌಲಭ್ಯ ಒದಗಿಸಲು ವಿಫಲ ವಾಗುತ್ತಿದೆ ಎಂದು ತಿಳಿಸಿದರು.

ರಾಜ್ಯಮಟ್ಟದ ಮೈಸೂರು ವಿಭಾಗದಿಂದ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಒಟ್ಟು ಎಂಟು ಜಿಲ್ಲೆಗಳಿಂದ ಸಹಕಾರಿ ಪ್ರತಿನಿಧಿ ಗಳು ಭಾಗವಹಿಸಿ ತರಬೇತಿ ಸೌಲಭ್ಯ ಪಡೆಯುತ್ತಿದ್ದು, ಕೃಷಿ ಮತ್ತು ಕೃಷಿಯೇತರ ಸಹಕಾರಿ ಕ್ಷೇತ್ರ ಹೊರತುಪಡಿಸಿ, ಉಳಿದ ಎಲ್ಲಾ ಸಹಕಾರಿ ರಂಗಕ್ಕೂ ಶಿಕ್ಷಣ, ತರಬೇತಿ, ಪ್ರಚಾರ ಮೂಲಕ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಕಾರ್ಯಾಗಾರದಲ್ಲಿ ಸಹಕಾರಿ ಪ್ರತಿನಿಧಿಗಳು ಅನುಮಾನ, ಮಾಹಿತಿ ಕೊರತೆ ಅಥವಾ ತಿದ್ದುಪಡಿಗಳಂಥ ಸಂದೇಹಗಳಿದ್ದರೆ ಪರಿಣಿತ ಉಪನ್ಯಾಸಕರಿಂದ ಮಾಹಿತಿ ಪಡೆಯಬೇಕು. ಜನರಿಗೆ ಅನುಕೂಲವಾಗುವ ಮಹತ್ತರ ಜವಾಬ್ದಾರಿ ಸಹಕಾರಿ ಸಿಬ್ಬಂದಿ ಮೇಲಿದ್ದು, ಮನಸ್ಸಿನಲ್ಲಿ ಉದ್ಬವಿಸುವ ಪ್ರಶ್ನೆಗಳಿಗೆ ಮಾ ಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು.

ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಬಿ.ನಾಯಕ್ ಮಾತನಾಡಿ, ಸಮಾಜದ ಆರ್ಥಿಕ ವ್ಯವಸ್ಥೆ ನಿರ್ವಹಿಸುತ್ತಿರುವ ಸಹಕಾರಿ ಕ್ಷೇತ್ರದ ಜವಾಬ್ದಾರಿ ಬಹಳಷ್ಟಿದೆ. ಈ ಕ್ಷೇತ್ರದಲ್ಲಿ ಕಲಿಕೆಗೆ ಹೆಚ್ಚಿನ ಮಹತ್ವ ನೀಡಬೇಕು. ಕಲಿತು ಮುನ್ನೆಡೆದರೆ ವಾಸ್ತವದಲ್ಲಿ ಬದುಕುತ್ತಾರೆ. ಕಲಿಯದಿದ್ದರೆ ಭ್ರಮಾಲೋಕದಲ್ಲಿ ಮುಳುಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದರು.

ಇದೇ ವೇಳೆ ಸಹಕಾರ ಸಂಘಗಳ ನಿವೃತ್ತ ಅಪರ ನಿಬಂಧಕ ಆರ್.ಗುರುಸ್ವಾಮಿ ಸಹಕಾರ ಕಾಯ್ದೆ ಪ್ರಮುಖ ಅಂಶಗಳು ಹಾಗೂ ಇತ್ತೀಚಿನ ತಿದ್ದುಪಡಿಗಳು ಮತ್ತು ಸಹಕಾರ ಸಂಘಗಳಿಗೆ ಅನ್ವಯಿಸುವ ತೆರಿಗೆ ಅಂಶಗಳ ಸಮಗ್ರವಾಗಿ ವಿವರಣೆ ನೀಡಿದರು.

ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಿ.ಕೆ.ದಿವಾಕರ್, ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಸೀಗೇಹಡ್ಲು ಹರೀಶ್, ನಿರ್ದೇಶಕ ಪಿ.ಶಶಿಕುಮಾರ್, ಸಮನ್ವಯಾಧಿಕಾರಿ ಎಂ.ಮಲ್ಲರಾಜು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಶಸ್, ವ್ಯವಸ್ಥಾಪಕ ಇಂದ್ರೇಶ್ ಉಪಸ್ಥಿತರಿದ್ದರು.

ಫೋಟೋ:

ಚಿಕ್ಕಮಗಳೂರಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ವಿಶೇಷ ಸಹಕಾರ ತರಬೇತಿ ಕಾರ್ಯಾಗಾರವನ್ನು ಬಿ.ಸಿ.ಲೋಕಪ್ಪಗೌಡ ಉದ್ಘಾಟಿಸಿದರು. ಈ ವೇಳೆ ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಬಿ.ನಾಯಕ್, ನಿವೃತ್ತ ಅಪರ ನಿಬಂಧಕ ಆರ್.ಗುರುಸ್ವಾಮಿ ಮೊದಲಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಣಿ ಚನ್ನಮ್ಮ ನಾಟ್ಯ ಮಂದಿರ ಶೀಘ್ರ ಪ್ರಾರಂಭಿಸಿ
ಗುರಿ ಸಾಧಿಸಲು ಕಠಿಣ ಏಕಾಗ್ರತೆ ಅಗತ್ಯ