ಕಮತಗಿ ಪಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ

KannadaprabhaNewsNetwork |  
Published : Jun 21, 2025, 12:48 AM ISTUpdated : Jun 21, 2025, 12:49 AM IST
 ವಿಶೇಷ ಸಾಮಾನ್ಯ ಸಭೆ ಕರೆಯುವಂತೆ ಆಗ್ರಹಿಸಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಕಮತಗಿ ಪಟ್ಟಣ ಪಂಚಾಯತಿ ಹಾಲಿ ಅಧ್ಯಕ್ಷ ರಮೇಶ ಎಸ್. ಜಮಖಂಡಿ ವಿರುದ್ಧ ಅವರದೇ ಪಕ್ಷದ ಸದಸ್ಯರು ಹಾಗೂ ಬಿಜೆಪಿ ಸದಸ್ಯರು ಸೇರಿ ಅವಿಶ್ವಾಸ ಗೊತ್ತುವಳಿ ಮಂಡಿಸಲು ವಿಶೇಷ ಸಾಮಾನ್ಯ ಸಭೆ ಕರೆಯುವಂತೆ ಆಗ್ರಹಿಸಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎಫ್.ಎನ್. ಹುಲ್ಲಿಕೇರಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಕಮತಗಿ

ಕಮತಗಿ ಪಟ್ಟಣ ಪಂಚಾಯತಿ ಹಾಲಿ ಅಧ್ಯಕ್ಷ ರಮೇಶ ಎಸ್. ಜಮಖಂಡಿ ವಿರುದ್ಧ ಅವರದೇ ಪಕ್ಷದ ಸದಸ್ಯರು ಹಾಗೂ ಬಿಜೆಪಿ ಸದಸ್ಯರು ಸೇರಿ ಅವಿಶ್ವಾಸ ಗೊತ್ತುವಳಿ ಮಂಡಿಸಲು ವಿಶೇಷ ಸಾಮಾನ್ಯ ಸಭೆ ಕರೆಯುವಂತೆ ಆಗ್ರಹಿಸಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎಫ್.ಎನ್. ಹುಲ್ಲಿಕೇರಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಪಟ್ಟಣ ಪಂಚಾಯತಿ ಹಾಲಿ ಅಧ್ಯಕ್ಷ ರಮೇಶ ಎಸ್. ಜಮಖಂಡಿ ಅವರು ತಮ್ಮ ಆಡಳಿತ ವೈಖರಿ ಹಾಗೂ ಪಟ್ಟಣ ಪಂಚಾಯತಿ ಸದಸ್ಯರನ್ನು ವಿಶ್ವಾಸಕ್ಕೆ ತಗೆದುಕೊಳ್ಳದೆ ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದು, ಜನಪ್ರತಿನಿಧಿಗಳ ಮಾತಿಗೆ ಮನ್ನಣೆ ಕೊಡದಿರುವುದು, ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು, ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆ ಉಂಟಾಗಿದೆ. ಆದ್ದರಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಪಟ್ಟಣ ಪಂಚಾಯತಿ ಸದಸ್ಯರು ಸ್ವ ಇಚ್ಛೆಯಿಂದ ಸಹಿ ಮಾಡಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲು ವಿಶೇಷ ಸಭೆ ಕರೆಯುವಂತೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳ ಮೂಲಕ ಅಧ್ಯಕ್ಷರಿಗೆ ಮನವಿ ಪತ್ರ ನೀಡಿ ಆಗ್ರಹಿಸಿದ್ದಾರೆ.

ಪಟ್ಟಣ ಪಂಚಾಯಿತಿ ಸದಸ್ಯರಾದ ಬಸವರಾಜ ಕುಂಬಳಾವತಿ, ಸಂಗಪ್ಪ ಗಾಣಗೇರ, ಹುಚ್ಚೇಶ ಮದ್ಲಿ, ರತ್ನಾ ತಳಗೇರಿ, ನೇತ್ರಾವತಿ ನಿಂಬಲಗುಂದಿ, ಹುಚ್ಚವ್ವ ಹಗೇದಾಳ, ಲಕ್ಷ್ಮಣ ಮಾದರ, ದೇವಿಪ್ರಸಾದ ನಿಂಬಲಗುಂದಿ, ನಂದಾ ದ್ಯಾಮಣ್ಣವರ, ಸುಮಿತ್ರಾ ಲಮಾಣಿ, ಮಂಜುಳಾ ಮುರಾಳ, ಕಸ್ತೂರಿಬಾಯಿ ಬಾಗೇವಾಡಿ,ಚಂದಪ್ಪ ಕುರಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ