ತೋಟಗಾರಿಕೆ ಇಲಾಖೆ ಪ್ರದೇಶದಲ್ಲಿ ಡಿಸಿ ಕಟ್ಟಡ ಬೇಡ

KannadaprabhaNewsNetwork |  
Published : Mar 06, 2026, 01:15 AM IST
ಚಿತ್ರದುರ್ಗ ಎರಡನೇ ಪುಟದ ಮಿಡ್ಲ್  | Kannada Prabha

ಸಾರಾಂಶ

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಹಾಪ್ ಕಾಮ್ಸ್ ರಾಜ್ಯ ಪ್ರತಿನಿಧಿ ಎಸ್ ಎಂಎಲ್ ತಿಪ್ಪೇಸ್ವಾಮಿ ಮಾತನಾಡಿದರು

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ತೋಟಗಾರಿಕೆ ಇಲಾಖೆ ಪ್ರದೇಶದಲ್ಲಿ ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ ನಿರ್ಮಾಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿಲುವು ಬದಲಾಯಿಸಬೇಕೆಂದು ಜಿಲ್ಲಾ ಹಾಪ್‍ಕಾಮ್ಸ್ ರಾಜ್ಯ ಪ್ರತಿನಿಧಿ ಎಸ್ ಎಂಎಲ್ ತಿಪ್ಪೇಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತೋಟಗಾರಿಕೆ ಇಲಾಖೆಗೆ ಸೇರಿದ ಆರು ಎಕರೆ ಹತ್ತು ಗುಂಟೆ ಹಾಗೂ ಹಾಪ್‍ ಕಾಮ್ಸ್‌ನ 20 ಗುಂಟೆ ಜಾಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ನಿರ್ಮಾಣ ಮಾಡುವುದರಿಂದ ರೈತರು, ಪರಿಸರ ಪ್ರೇಮಿಗಳು ತೊಂದರೆ ಅನುಭವಿಸಬೇಕಾಗುತ್ತದೆ. 2156 ಗಿಡ-ಮರಗಳು ಈ ಜಾಗದಲ್ಲಿದ್ದು, ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಎಲ್ಲವನ್ನು ನಾಶಪಡಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಈ ಜಾಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಕಟ್ಟುವುದು ಬೇಡ. ಕುಂಚಿಗನಹಾಳ್ ಬಳಿ ಜಿಲ್ಲಾಧಿಕಾರಿ ಕಚೇರಿಗೆ ಕಟ್ಟಡ ಕಟ್ಟಿ ಅರ್ಧಕ್ಕೆ ನಿಲ್ಲಿಸಲಾಗಿದೆ. ಪೊಲೀಸ್ ಕವಾಯತು ಮೈದಾನದ ಜಾಗವನ್ನು ನೂತನ ಡಿಸಿ.ಕಚೇರಿ ಕಟ್ಟಡಕ್ಕೆ ಪಡೆದುಕೊಳ್ಳಲಿ ಎಂದರು.

ರೈತರಿಗೆ ಬೀಜ, ಗೊಬ್ಬರ, ಕೃಷಿ ಪರಿಕರಗಳ ವಿತರಣೆಗಾಗಿಯೇ ಮೀಸಲಿದ್ದ, ಹಾಪ್‍ಕಾಮ್ಸ್ ಕಟ್ಟಡವನ್ನು ಕೆಡವುದು ಬೇಡ. ಒಂದು ವೇಳೆ ಇದೆ ಜಾಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಆರಂಭಿಸಿದರೆ ಉಗ್ರವಾದ ಹೋರಾಟ ನಡೆಸಲಾಗುವುದೆಂದು ಎಸ್.ಎಲ್.ಎಂ.ತಿಪ್ಪೇಸ್ವಾಮಿ ಎಚ್ಚರಿಸಿದರು.

ಟಾರ್ಗೆಟ್ ಟೆನ್ ಥೌಸೆಂಡ್‍ನ ಸಿದ್ದರಾಜು ಮಾತನಾಡಿ, ಬಯಲುಸೀಮೆ ಚಿತ್ರದುರ್ಗದಲ್ಲಿ ಗಿಡಗಳನ್ನು ನೆಟ್ಟು ದೊಡ್ಡ ಮರವನ್ನಾಗಿ ಬೆಳೆಸುವುದು ತುಂಬಾ ಕಷ್ಟ. 2015 ರಿಂದ ಇಲ್ಲಿಯವರೆಗೂ ನಲವತ್ತು ಸಾವಿರ ಗಿಡಗಳನ್ನು ನೆಟ್ಟಿದ್ದೇವೆ. ಗಿಡ-ಮರಗಳನ್ನು ಕಡಿದರೆ ಉಸಿರಾಟಕ್ಕೆ ಶುದ್ದ ಗಾಳಿ ಇಲ್ಲದಂತಾಗಿ ಸಕಲ ಜೀವರಾಶಿಗಳು ತೊಂದರೆ ಅನುಭವಿಸಬೇಕಾಗುತ್ತದೆ. ಕುಂಚಿಗನಹಾಳ್ ಸಮೀಪವೆ ಜಿಲ್ಲಾಧಿಕಾರಿ ನೂತನ ಕಚೇರಿ ಆರಂಭಿಸಿದರೆ ಚಿತ್ರದುರ್ಗ ವಿಸ್ತರಣೆಯಾಗಿ ಅಭಿವೃದ್ದಿಯಾಗುತ್ತದೆ. ತೋಟಗಾರಿಕೆ ಇಲಾಖೆ ಜಾಗದಲ್ಲಿ ನೂತನ ಕಚೇರಿ ನಿರ್ಮಾಣವಾಗುವುದು ಬೇಡ ಎಂದರು.

ಹಾಪ್‍ಕಾಮ್ಸ್ ಜಿಲ್ಲಾಧ್ಯಕ್ಷ ಶಂಕರಮೂರ್ತಿ, ಉಪಾಧ್ಯಕ್ಷ ಅರುಣ್, ನಿರ್ದೇಶಕರುಗಳಾದ ಕೆಂಚವೀರಪ್ಪ, ಚಂದ್ರಶೇಖರ್, ರೈತ ಮುಖಂಡ ಸೂರಪ್ಪ, ಸತ್ಯನಾರಾಯಣರೆಡ್ಡಿ ಮುರಳಿ, ನಾಗರಾಜ್‍ ಬೇದ್ರೆ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ರಕ್ಷಣಾ ನೀತಿ ಸಮರ್ಪಕ ಅನುಷ್ಠಾನದಲ್ಲಿ ಉದಾಸೀನ
ಮಿಡ್ಲ್‌.. 8 ಚದರ ಅಡಿ ಸಿದ್ದರಾಮಯ್ಯ ಭಾವಚಿತ್ರ ಅನಾವರಣ