ಕನ್ನಡಪ್ರಭ ವಾರ್ತೆ ಅರಸೀಕೆರೆ
ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡಿ:
ಈ ಸಂದರ್ಭದಲ್ಲಿ ಶ್ರೇಯಸ್ ಪಾಟೀಲ್ ಅವರು ಸಚಿವ ಕೆ.ಜೆ. ಜಾರ್ಜ್ ಅವರಿಗೆ ವಿಶೇಷ ಮನವಿವೊಡ್ಡಿ, ಅರಸೀಕೆರೆಯ ಶಾಸಕ ಶಿವಲಿಂಗೇಗೌಡರನ್ನು ಸಚಿವ ಸ್ಥಾನದತ್ತ ಕೊಂಡೊಯ್ಯಲು ಹಾಗೂ ಹಾಸನ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಲು ಸಹಕರಿಸಬೇಕು ಎಂದು ವಿನಂತಿಸಿದರು.ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ ತಾಲ್ಲೂಕಿನ ಅಭಿವೃದ್ಧಿಯ ಸರಮಾಲೆಯು ಸತತವಾಗಿ ಮುಂದುವರಿಯುತ್ತಿದೆ. ಹಾಸನ ಜಿಲ್ಲೆಯ ಬರ ಪ್ರದೇಶವಾದ ತಾಲೂಕಿನಲ್ಲಿ ನೀರಾವರಿ ಮತ್ತು ವಿದ್ಯುತ್ ಶಕ್ತಿಯನ್ನು ಸಮೃದ್ಧಗೊಳಿಸುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಕೈಗೊಂಡಿದ್ದೇವೆ. ಎತ್ತಿನಹೊಳೆ ಯೋಜನೆ ಮೂಲಕ ಕಣಕಟ್ಟೆ ಸುತ್ತ ಹತ್ತು ಕೆರೆಗಳನ್ನು ತುಂಬಿಸಲಾಗಿದೆ. ಮುಂದಿನ ಜುಲೈ ವೇಳೆಗೆ ಹಾರನಹಳ್ಳಿ ಕೆರೆಯಿಂದ ಹಿಡಿದು ಕಸಬಾ ಹೋಬಳಿಯ ಎಲ್ಲಾ ಕೆರೆಗಳು ತುಂಬಿಸುವ ಪಣ ತೊಟ್ಟಿದ್ದೇನೆ ಎಂದರು.ಗಂಡಸಿ ಭಾಗದ ಕೆರೆಗಳಿಗೆ ಹೇಮಾವತಿ ನದಿಯಿಂದ ನೀರು ತರಲಾಗುತ್ತದೆ. ಬಾಣಾವರಕ್ಕೆ ಅಪ್ಪರ್ ಭದ್ರ ಯೋಜನೆಯ ಮಂಜೂರಾತಿಯಾಗಿದೆ. ಬರಡು ತಾಲೂಕಿಗೆ ನೀರು ತರಲು ಹಾಗೂ ಸ್ಥಳೀಯವಾಗಿ ವಿದ್ಯುತ್ ಉತ್ಪಾದನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ತಾಲೂಕಿಗೆ ಅಗತ್ಯವಿರುವ 100 ಮೆಗಾವ್ಯಾಟ್ ವಿದ್ಯುತ್ನಿಂದ ಈಗ 50–52 ಮೆಗಾವ್ಯಾಟ್ ಮಾತ್ರ ದೊರೆಯುತ್ತಿದೆ. ಅದಕ್ಕಾಗಿ ಅರಸೀಕೆರೆಯಲ್ಲೇ ಸೌರ ವಿದ್ಯುತ್ ಘಟಕ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.ಶಿವಲಿಂಗೇಗೌಡ ಅವರು ಸಚಿವ ಜಾರ್ಜ್ ಅವರ ಬಳಿ ತಾಲೂಕಿನ ಯೋಜನೆಗೆ ಹೆಚ್ಚುವರಿ 200 ಕೋಟಿ ಮಂಜೂರು ಮಾಡಿ ಬರಡು ಪ್ರದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಹಕಾರ ನೀಡಿ ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಜಾರ್ಜ್ ಅವರು, “ಜಾಗ ಖಾತರಿ ಮಾಡಿಕೊಂಡು ಬನ್ನಿ, ತಾಲೂಕು ಅಭಿವೃದ್ಧಿಯಲ್ಲಿ ನಾವು ಸಹ ಕೈಜೋಡಿಸುತ್ತೇವೆ” ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ, ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಧರ್ಮಶೇಖರ್, ದುಮ್ಮೇನಹಳ್ಳಿ ಪಂಚಾಯಿತಿ ಅಧ್ಯಕ್ಷ ಅಜ್ಜಪ್ಪ, ಅಗುಂದ ಪಂಚಾಯಿತಿ ಅಧ್ಯಕ್ಷೆ ಕವಿತಾ, ಎಂಜಿನಿಯರ್ ಮಹೇಶ್, ಮುಖ್ಯ ಇಂಜಿನಿಯರ್ ಸತೀಶ, ಸಲಹಾ ಸಮಿತಿ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ನೂರಾರು ನಾಗರಿಕರು ಭಾಗವಹಿಸಿದರು.* ಬಾಕ್ಸ್ ನ್ಯೂಸ್:ಕೆಎಂಶಿಗೆ ಸಚಿವ ಸ್ಥಾನ ನೀಡುವ ನಿರ್ಧಾರ ಸಿಎಂ,
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಕುರಿತು ಯಾವುದೇ ನಿರ್ಧಾರ ಈಗಾಗಲೇ ಕೈಗೊಳ್ಳಲಾಗಿಲ್ಲ, ಈ ವಿಷಯ ಸಂಪೂರ್ಣವಾಗಿ ಹೈಕಮಾಂಡ್ನ ವ್ಯಾಪ್ತಿಯಲ್ಲಿದೆ ಎಂದು ಹೇಳಿದರು. ಸಭೆಯಲ್ಲಿ ಮೊಳಗಿದ ಶಾಸಕರಿಗೆ ಸಚಿವ ಸ್ಥಾನ ಕೊಡಬೇಕು ಎಂಬ ಸಾರ್ವಜನಿಕರ ಕೂಗಿಗೆ ಪ್ರತಿಕ್ರಿಯಿಸಿದ ಅವರು, ಶಾಸಕ ಕೆ.ಎಂ. ಶಿವಲಿಂಗೇಗೌಡರು ಸಚಿವ ಸ್ಥಾನದ ಆಕಾಂಕ್ಷಿಯಲ್ಲ; ಅವರು ಸೋಲಿಲ್ಲದ ನಾಯಕರು. ಸಚಿವ ಸ್ಥಾನ ನೀಡುವ ನಿರ್ಧಾರ ಸಿಎಂ, ಕೆಪಿಸಿಸಿ ಹಾಗೂ ಹೈಕಮಾಂಡ್ ಅವರದ್ದಾಗಿದೆ. ಸಿಎಂ ಬದಲಾವಣೆ ಕುರಿತು ಊಹಾಪೋಹಗಳು ನಡೆಯುತ್ತಿವೆ. ಆದರೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಅಥವಾ ಸೋನಿಯಾ ಗಾಂಧಿ ಅವರಿಂದ ಯಾವುದೇ ಹೇಳಿಕೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ನಲ್ಲಿ ಪ್ರಜಾಪ್ರಭುತ್ವದ ಪ್ರಕ್ರಿಯೆ ಇದೆ, ಸಿಎಲ್ಪಿ ಸಭೆ ಹಾಗೂ ಹೈಕಮಾಂಡ್ ನಿರ್ಧಾರವೇ ಅಂತಿಮ, ಎಂದು ಹೇಳಿದರು. ನವೆಂಬರ್ 15ರ ನಂತರ ರಾಹುಲ್ ಗಾಂಧಿಯವರ ರಾಜ್ಯ ಭೇಟಿ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಈ ಕುರಿತು ಮಾತನಾಡುವ ಅಧಿಕಾರ ನನಗಿಲ್ಲ ಎಂದು ಪ್ರತಿಕ್ರಿಯಿಸಿದರು.