ಕನ್ನಡಪ್ರಭ ವಾರ್ತೆ ಬೆಳಗಾವಿ
ಜಿಪಂ ಸಭಾಂಗಣದಲ್ಲಿ ಶುಕ್ರವಾರ ಜರುಗಿದ 2024-25ನೇ ಸಾಲಿನ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೆಳೆ ಪರಿಹಾರ ಕಾರ್ಯದಲ್ಲಿ ಜಂಟಿ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ ಆದಷ್ಟು ಬೇಗ ರೈತರಿಗೆ ಬೆಳೆ ಪರಿಹಾರ ಒದಗಿಸಲು ಕ್ರಮ ಜರುಗಿಸಿ, ನೆರೆ ಹಾವಳಿಯಿಂದಾಗಿ ಹಾನಿಗೊಳಗಾದ ರಸ್ತೆ, ಸೇತುವೆಗಳ ದುರಸ್ತಿ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ ಸೂಚಿಸಿದರು.
ಬೆಂಬಲ ಬೆಲೆ ಯೋಜನೆಯಡಿ ಗುರುತಿಸಲಾದ ಬೆಳೆಗಳ ಖರೀದಿ ಪ್ರಕ್ರಿಯೆ ಕೂಡಲೇ ಪ್ರಾರಂಭಿಸಬೇಕು. ಮಹಾನಗರ ಪಾಲಿಕೆಯ ಅಮೃತ ಯೋಜನೆ 1 ಹಾಗೂ 2ರ ಯೋಜನೆಯಡಿ ನಿವೇಶನ ಹಂಚಿಕೆ ಕುರಿತು ಸಲ್ಲಿಸಲಾಗುವ ಪ್ರಸ್ತಾವನೆಗಳನ್ನು ಮಾರ್ಗಸೂಚಿಗಳನ್ವಯ ಸಿದ್ಧಪಡಿಸಿ ಕಳುಹಿಸಿಕೊಡುವುದರ ಜೊತೆಗೆ ಪ್ರಸ್ತಾವನೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯತೆ ಸಾಧಿಸುವಂತೆ ತಿಳಿಸಿದರು.ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಬೇಕು. ವಿವಿಧ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಸೂಕ್ತವಾದ ತಿಳಿವಳಿಕೆ ನೀಡಬೇಕು. ಪ್ರಧಾನಮಂತ್ರಿ ಆವಾಸ ಯೋಜನೆಯಡಿ ನಿರ್ಮಿಸುತ್ತಿರುವ ಜಿ+3 ಮಾದರಿ ಮನೆಗಳ ನಿರ್ಮಾಣ ಕಾಮಗಾರಿ ಶೀಘ್ರದಲ್ಲಿಯೇ ಪ್ರಾರಂಭಿಸಬೇಕು. ಸರ್ಕಾರದಿಂದ ಜಾರಿಯಲ್ಲಿರುವ ವಿವಿಧ ವಸತಿ ಯೋಜನೆಯಡಿ ಕೈಗೆತ್ತಿಕೊಂಡ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಿ ಬಡಜನರಿಗೆ ಅನುಕೂಲ ಮಾಡಿಕೊಡಬೇಕು.
ಜಿಲ್ಲೆಯನ್ನು ಶೈಕ್ಷಣಿಕ, ಸಾಕ್ಷರತೆ ಪ್ರಮಾಣ ಹೆಚ್ಚಿಸಲು ಪ್ರಯತ್ನ ಮಾಡಬೇಕು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಫಲಿತಾಂಶ ಸುಧಾರಣೆಗೆ ಗಮನ ಹರಿಸಬೇಕು. ಕಿತ್ತೂರು ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಬೇಕಾದ ಭೂಸ್ವಾಧೀನ ಪ್ರಕ್ರಿಯೆ ಮುಗಿಸಿ ಜಿಲ್ಲೆಯಲ್ಲಿ ಕೈಗಾರಿಕೊದ್ಯಮ ಉತ್ತೇಜಿಸಲು ಕ್ರಮ ಕೈಗೊಳ್ಳುವಂತೆ ಶೆಟ್ಟರ ತಿಳಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಅತಿವೃಷ್ಟಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಪೂರ್ಣಗೊಂಡಿದ್ದು, ಪರಿಹಾರ ಪಡೆಯುವವರ ವಿವರಗಳನ್ನು ಆಯಾ ಗ್ರಾಪಂ ಹಾಗೂ ಕೃಷಿ ಕೇಂದ್ರಗಳಲ್ಲಿ ಪ್ರಚುರಪಡಿಸಿದ್ದು, ಈ ಕುರಿತು ಆಕ್ಷೇಪಣೆಗಳಿದ್ದರೆ ಸರಿಪಡಿಸಿ ಅಂತಿಮ ಯಾದಿ ತಯಾರಿಸಲಾಗುವುದು. ರೈತರಿಗೆ ಶೀಘ್ರವೇ ಪರಿಹಾರ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವಸರ್ಗಾಯಿಸಲಾಗುವುದು ಎಂದು ಭರವಸೆ ನೀಡಿದ ಅವರು, ನೆರೆ ಹಾವಳಿಯಿಂದ ಹಾನಿಗೊಳಗಾದ ರಸ್ತೆ, ಶಾಲಾ, ಅಂಗನವಾಡಿ ಕಟ್ಟಡಗಳ ದುರಸ್ತಿಗೆ ವಿಪತ್ತು ನಿರ್ವಹಣೆ ಪ್ರಾಧಿಕಾರದ ಮಾರ್ಗಸೂಚಿಗಳನ್ವಯ ಅನುದಾನ ಬಿಡುಗಡೆ ಮಾಡಿ ದುರಸ್ತಿಗೆ ಕ್ರಮ ವಹಿಸಲಾಗುವುದು ಎಂದರು.
ಶಿಷ್ಟಾಚಾರ ಉಲ್ಲಂಘಿಸಿದರೆ ಕ್ರಮ:
ಆಹ್ವಾನಿಸುತ್ತಿಲ್ಲ. ನಿಯಮಗಳ ಪ್ರಕಾರ ಎಲ್ಲ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಆದರೆ, ಅಧಿಕಾರಿಗಳು ಅದನ್ನು ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಗುರಿ ಆಗಬೇಕಾಗುತ್ತದೆ. ಅಧಿಕಾರಿಗಳು ಸಭೆಗೆ ಬರುವುದಕ್ಕೂ ಮುಂಚೆ ತಮ್ಮ ಇಲಾಖೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯೊಂದಿಗೆ ಹಾಜರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.