ಕನ್ನಡಪ್ರಭ ವಾರ್ತೆ ದಾಬಸ್ಪೇಟೆ
ತ್ಯಾಮಗೊಂಡ್ಲು ಪಟ್ಟಣದ ಜ್ಞಾನಧಾಮ ಶಾಲೆಯಲ್ಲಿ ನೆಲಮಂಗಲ ತಾಲೂಕು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಸರ್ಕಾರಕ್ಕೆ ಖಾಸಗಿ ಶಾಲೆಗಳಿಂದ ಅನುಕೂಲಬೇಕು. ಆದರೆ ಶಿಕ್ಷಕರ ದಿನಾಚರಣೆ ವೇಳೆ ಖಾಸಗಿ ಶಿಕ್ಷಕರನ್ನು ನೆನಪಿಸಿಕೊಳ್ಳುವುದಿಲ್ಲ, ಕಡಿಮೆ ಸಂಬಳ ಪಡೆದರೂ ಸರ್ಕಾರಿ ಶಾಲೆಗಳ ಶಿಕ್ಷಕರಿಗಿಂತ ಹೆಚ್ಚಿನ ಫಲಿತಾಂಶ ನೀಡುವಲ್ಲಿ ಮುಂದೆ ಇದ್ದಾರೆ. ಸರ್ಕಾರ ಸರ್ಕಾರಿ- ಖಾಸಗಿ ಶಾಲೆ ಎಂಬ ಮಲತಾಯಿ ಧೋರಣೆ ಬಿಟ್ಟು ಇಬ್ಬರನ್ನೂ ಸಮಾನವಾಗಿ ಕಾಣಬೇಕಿದೆ. ಸರ್ಕಾರಿ ಶಾಲೆಗಳಿಂತ ಖಾಸಗಿ ಶಾಲೆಗಳಲ್ಲೇ ಹೆಚ್ಚು ಫಲಿತಾಂಶ ಉತ್ತಮವಾಗಿರುವುದನ್ನು ಮನಗಾಣಬೇಕು ಎಂದರು.
ವಿಆರ್ ಮಾಧ್ಯಮ ಸಂಸ್ಥೆಯ ಸಂಪಾದಕ ಚನ್ನೇಗೌಡ ಮಾತನಾಡಿ, ಖಾಸಗಿ ಶಾಲೆಗಳಲ್ಲಿ ಕಲಿಕೆ ಗುಣಮಟ್ಟ ಹೆಚ್ಚಾಗುತ್ತಿದೆ. ಕೃತಕ ಬುದ್ದಿಮತ್ತೆ, ಡಿಜಿಟಲ್ ಪ್ರಗತಿ ಬಳಸಿಕೊಂಡು ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರಿ ಶಾಲೆಗಳಲ್ಲಿ ಓದಿದವರಿಗೆ ಉದ್ಯೋಗ ಹಾಗೂ ಉನ್ನತ ಶಿಕ್ಷಣದಲ್ಲಿ ಮೀಸಲಾತಿ ಬಗ್ಗೆ ಘೋಷಣೆ ಮಾಡಿರುವುದು ಸ್ವಾಗತಾರ್ಹ. ಆದರೆ ಇದು ಖಾಸಗಿ ಶಾಲೆಗಳಿಗೆ ಸವಾಲಾಗಿದೆ. ಖಾಸಗಿ ಶಾಲಾ ಶಿಕ್ಷಕರು ಆಡಳಿತ ಮಂಡಳಿಗೆ ಬೆನ್ನುಲಾಗಿ ನಿಲ್ಲುವ ಅಗತ್ಯ ಹೆಚ್ಚಿದೆ ಎಂದು ತಿಳಿಸಿದರು.ಜ್ಞಾನಧಾಮ ಶಿಕ್ಷಣ ಸಂಸ್ಥೆ ಶಿವಕುಮಾರ್, ಖಾಸಗಿ ಶಾಲಾ ಶಿಕ್ಷಕರು ಸರ್ಕಾರಿ ಶಾಲಾ ಶಿಕ್ಷಕರಿಗಿಂತ ಕಡಿಮೆಯಿಲ್ಲದೆ ಮಕ್ಕಳನ್ನು ಉತ್ತಮ ಫಲಿತಾಂಶದ ಜೊತೆಗೆ ಸಂಸ್ಕಾರ, ಸಂಸ್ಕೃತಿ ತಿಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತಾಲೂಕಿನ 35ಕ್ಕೂ ಹೆಚ್ಚು ಖಾಸಗಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಉತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಜ್ಞಾನಗುರು, ಪ್ರಾಂಶುಪಾಲರಿಗೆ ಜ್ಞಾನತಪಸ್ವಿ, ಆಡಳಿತ ಮಂಡಳಿಯವರಿಗೆ ಜ್ಞಾನಸಾರಥಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.