ಟ್ಯಾಕ್ಸಿ ಸ್ಟ್ಯಾಂಡ್‌ಗೆ ತೊಂದರೆ ಆಗಲ್ಲ

KannadaprabhaNewsNetwork |  
Published : Jul 08, 2026, 02:00 AM IST
ನವಲಗುಂದ ಪಟ್ಟಣದಲ್ಲಿ ಕರ್ನಾಟಕ ಚಾಲಕರ ಒಕ್ಕೂಟದ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ಧರಣಿ ಸ್ಥಳಕ್ಕೆ ಶಾಸಕ ಎನ್.ಎಚ್. ಕೋನರಡ್ಡಿ ಭೇಟಿ ನೀಡಿ ಮನವಿ ಸ್ವೀಕರಿಸಿದರು. | Kannada Prabha

ಸಾರಾಂಶ

ನೀಲಮ್ಮನ ಕೆರೆಯ ದಡದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆದರೂ ಸಹ, ಟ್ಯಾಕ್ಸಿ ಸ್ಟ್ಯಾಂಡ್‌ನ ವರೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಶಾಸಕ ಎನ್‌.ಎಚ್‌. ಕೋನರಡ್ಡಿ ಹೇಳಿದರು.

ನವಲಗುಂದ:

ಪಟ್ಟಣದಲ್ಲಿರುವ ಟ್ಯಾಕ್ಸಿ ಸ್ಟ್ಯಾಂಡ್‌ಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಶಾಸಕ ಎನ್.ಎಚ್. ಕೋನರೆಡ್ಡಿ ಭರವಸೆ ನೀಡಿದರು.

ಪಟ್ಟಣದ ಪುರಸಭೆ ಎದುರು ಕರ್ನಾಟಕ ಚಾಲಕರ ಒಕ್ಕೂಟದ ತಾಲೂಕು ಘಟಕದಿಂದ ಹಮ್ಮಿಕೊಳ್ಳಲಾಗಿದ್ದ 2ನೇ ದಿನದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದರು.

ನೀಲಮ್ಮನ ಕೆರೆಯ ದಡದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆದರೂ ಸಹ, ಟ್ಯಾಕ್ಸಿ ಸ್ಟ್ಯಾಂಡ್‌ನ ವರೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆಟೋ ಚಾಲಕರು ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಭರವಸೆ ನೀಡಿದರು. ಶಾಸಕರ ಭರವಸೆ ಹಿನ್ನೆಲೆಯಲ್ಲಿ ಎರಡು ದಿನಗಳಿಂದ ನಡೆಯುತ್ತಿದ್ದ ಧರಣಿಯಿಂದ ಆಟೋ ಚಾಲಕರು ಹಿಂದೆ ಸರಿದರು.

ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಶರಣು ಪೂಜಾರ, ಮಂಜುನಾಥ ಸುಣಗಾರ, ಮಾಬುಸಾಬ್‌ ಯರಗುಪ್ಪಿ, ನಿಂಗಪ್ಪ ಕೆಳಗೇರಿ, ಮಂಜುನಾಥ ಮೆಣಸಿನಕಾಯಿ, ಸಿರಾಜುದ್ದೀನ್ ಧಾರವಾಡ, ಪ್ರವೀಣ ಕಾಳೆ, ಅಲ್ತಾಫ್‌ ಇಬ್ರಾಹಿಂಪೂರ, ರಿಯಾಜ್ ಹುಗ್ಗಿ, ಶಂಭು ಪವಾರ, ಪುಂಡಲೀಕ್ ಕಲಾಲ, ಅಶೋಕ ಬಸಾಪುರ, ಶಶಿ ತುಳಸಿಗೇರಿ ಸೇರಿ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತುಂಗಭದ್ರೆಗೆ ಒಳಹರಿವು ಆರಂಭ: ರೈತರಲ್ಲಿ ಮತ್ತೆ ಚಿಗುರಿದ ಆಶಾಭಾವ
ಪಾಲಕರು ಮಕ್ಕಳ ಪ್ರತಿಭೆ ಗುರುತಿಸಲಿ: ಸುರೇಶ್‌ ಕುಲಕರ್ಣಿ