ಹುಬ್ಬಳ್ಳಿ:
ಈದ್ ಮಿಲಾದ್-ಉನ್-ನಬಿ ಮೆರವಣಿಗೆಯಲ್ಲಿ ಡಿಜೆ ಹಾಗೂ ಇತರ ಸಂಗೀತ ವಾದ್ಯಗಳ ಬಳಕೆಯನ್ನು ಶಾಶ್ವತವಾಗಿ ನಿಷೇಧಿಸುವಂತೆ ಜು. 31ರಂದು ಸಭೆ ನಡೆಸಿ ಇಂತಹ ನಿರ್ಣಯ ಕೈಗೊಳ್ಳಲಾಗಿದೆ. ಮೆರವಣಿಗೆಯಲ್ಲಿ ಡಿಜೆ ಹಚ್ಚುವುದರಿಂದ ರೋಗಿಗಳು, ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಲಿದೆ. ಹೀಗಾಗಿ ಸೌಂಡ್ ಸಿಸ್ಟಮ್ ಬಳಕೆಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿದರು.ಈ ವೇಳೆ ಅಂಜುಮನ್-ಏ-ಇಸ್ಲಾಂ ಅಧ್ಯಕ್ಷ ಎ.ಎಂ. ಹಿಂಡಸಗೇರಿ, ಉಪಾಧ್ಯಕ್ಷ ಬಾಷಾಸಾಬ್ ಅತ್ತಾರ, ಗೌರವ ಕಾರ್ಯದರ್ಶಿ ಬಶೀರ್ ಅಹ್ಮದ್ ಹಳ್ಳೂರ, ಸಹ ಕಾರ್ಯದರ್ಶಿ ರಫೀಕ್ ಬಂಕಾಪುರ, ಶಿಕ್ಷಣ ಮಂಡಳಿ ಸದಸ್ಯರಾದ ಇಲಿಯಾಸ್ ಮನಿಯಾರ್, ನವೀದ್ ಮುಲ್ಲಾ, ಬಶೀರ್ ಗುಡಮಾಲ್, ವಸೀಂ ಮೊಮಿನ್, ಪಾಲಿಕೆ ಸದಸ್ಯರಾದ ಇಕ್ಬಾಲ್ ನವಲೂರ, ಸಾದಿಕ್ ಯಕ್ಕುಂಡಿ, ಮುದಸ್ಸರ್ ಖೋಜೆ, ಧಾರವಾಡ ಅಂಜುಮನ್ ಸಂಸ್ಥೆಯ ಬಶೀರ್ ಅಹ್ಮದ್ ಜಾಗಿರದಾರ, ಯಾಸೀನ್ ಹಾವೇರಪೇಟ, ರಫೀಕ್ ಶಿರಹಟ್ಟಿ, ಖೈರುದ್ದೀನ್ ಶೇಖ್, ಶಮಶುದ್ಧೀನ್ ಗಿಡದೂರ ಸೇರಿ ಹಲವರಿದ್ದರು.