ಹುಬ್ಬಳ್ಳಿ: ಈದ್ ಮಿಲಾದ್ ಹಬ್ಬಕ್ಕೆ ಡಿಜೆಗೆ ಅನುಮತಿ ನೀಡಿಲ್ಲ. ಗಣೇಶ ವಿಸರ್ಜನೆಗೆ ಸುಮಾರು 3,000 ಅಧಿಕಾರಿ, ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದರು.
ಈದ್ ಮಿಲಾದ್ಗೂ ಹುಬ್ಬಳ್ಳಿಯಲ್ಲಿ ಒಂದು ಲಕ್ಷ, ಧಾರವಾಡದಲ್ಲಿ 40 ಸಾವಿರ ಜನ ಸೇರುವ ಸಾಧ್ಯತೆ ಇದೆ. ಅಂಜುಮನ್ ಕಮಿಟಿ ಹಾಗೂ ಮುಸ್ಲಿಂ ಮುಖಂಡರು ಡಿಜೆಗೆ ಅವಕಾಶ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ. ಹೀಗಾಗಿ, ಅನುಮತಿ ನೀಡಿಲ್ಲ ಎಂದರು.
ಬಿಗಿಭದ್ರತೆ: 9ನೇ ದಿನದ ಗಣೇಶ ಮೂರ್ತಿಗಳ ಮೆರವಣಿಗೆ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ ಮಾರ್ಗದರ್ಶನದಲ್ಲಿ ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಜತೆಗೆ ಕೆಎಸ್ಆರ್ಪಿ ತುಕಡಿಗಳ ಪಹರೆ ಹಾಕಿ ಭದ್ರತೆ ಒದಗಿಲಾಗಿತ್ತು. ಇದಕ್ಕೂ ಪೂರ್ವದಲ್ಲಿ ಪೊಲೀಸ್ ಕಮಿಷನರ್, ಡಿಸಿಪಿಗಳ ನೇತೃತ್ವದಲ್ಲಿ ಇಲ್ಲಿಯ ಈದ್ಗಾ ಮೈದಾನದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಯೋಜಿಸುವ ಕಾರ್ಯ ಅಚ್ಚುಕಟ್ಟಾಗಿ ನಡೆದಿತ್ತು. ಇದೇ ಹಿನ್ನೆಲೆಯಲ್ಲಿ ಮೆರವಣಿಗೆಯುದ್ಧಕ್ಕೂ ಪೊಲೀಸ್ ಪಹರೆ ಹಾಕಿ ಶಾಂತಿಯುತ ಮೆರವಣಿಗೆ ಅನುವು ಮಾಡಲಾಯಿತು.