ಧಾರವಾಡ:
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಉದ್ದೇಶ ಪೂರ್ವಕವಾಗಿ ಕೆಲವರು ತಪ್ಪು ಸಂದೇಶ ಹರಡುತ್ತಿದ್ದಾರೆ. ಈ ಲಸಿಕೆಯನ್ನು ಇಡೀ ವಿಶ್ವದಲ್ಲಿಯೇ ಕೊಡಲಾಗುತ್ತಿದೆ. ಆದ್ದರಿಂದ 14 ವರ್ಷದ ಬಾಲಕಿಯರು ಈ ಲಸಿಕೆ ಪಡೆದರೆ ಭವಿಷ್ಯದಲ್ಲಿ ಅವರಿಗೆ ಗರ್ಭಕಂಠ ಕ್ಯಾನ್ಸರ್ ಬರುವುದಿಲ್ಲ. ಈಗಾಗಲೇ ಇಲಾಖೆಯಿಂದ ಒಂದು ಲಕ್ಷಕ್ಕೂ ಹೆಚ್ಚು ಬಾಲಕಿಯರಿಗೆ ಈ ಲಸಿಕೆ ನೀಡಲಾಗಿದೆ ಎಂದರು.
ಸರ್ಕಾರದ ಆಸ್ಪತ್ರೆಗಳಲ್ಲಿ ರೆಡಿಯೋಲಾಜಿಸ್ಟ್ ಕೊರತೆಯ ಪ್ರಶ್ನೆಗೆ ಉತ್ತರಿಸಿದ ಗುಂಡೂರಾವ್, ರೆಡಿಯೋಲಜಿ ತಜ್ಞರ ಕೊರತೆ ಮೊದಲಿನಿಂದಲೂ ಇದೆ. ಅವರಿಗೆ ಹೆಚ್ಚಿನ ಬೇಡಿಕೆ ಇದ್ದು, ಟೆಲಿ ರೆಡಿಯಾಲಾಜಿ ಮೂಲಕ ಈ ಕೊರತೆ ನೀಗಿಸುತ್ತೇವೆ ಎಂದು ಹೇಳಿದರು.ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆ ಬಗ್ಗೆ ಮಾತನಾಡಿದ ಅವರು, ರಾಜ್ಯದ 1300 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 200ಕ್ಕೂ ಹೆಚ್ಚು ವೈದ್ಯರ ನೇಮಕಕ್ಕೆ ಕ್ರಮಕೈಗೊಳ್ಳಲಾಗುವುದು ಎಂದರು.ಮುಖ್ಯಮಂತ್ರಿ ಬದಲಾವಣೆ ಮಾಧ್ಯಮ ಸೃಷ್ಟಿ. ಮುಖ್ಯಮಂತ್ರಿ ಸ್ಥಾನದ ಬದಲಾವಣೆಗೆ ಯಾರಿಗೂ ಯಾರೂ ಗಡುವು ನೀಡಿಲ್ಲ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಕಾರ್ಯ ನಿಮಿತ್ತ ದೆಹಲಿಗೆ ಹೋಗಿದ್ದು, ವಿಶೇಷ ಏನಿಲ್ಲ.