ಇಂಗ್ಲಿಷ್‌ ಮಾಧ್ಯಮ ಶಾಲೆ ಪ್ರಾರಂಭಿಸಲು ಪ್ರೋತ್ಸಾಹ ಬೇಡ

KannadaprabhaNewsNetwork |  
Published : Feb 20, 2025, 12:46 AM IST
್್್್್‌ | Kannada Prabha

ಸಾರಾಂಶ

ಕನ್ನಡ ಭಾಷೆ, ಶಾಲೆಗಳನ್ನು ಉಳಿಸಿ, ಬೆಳೆಸಲು ಶಾಸನ ಮಾಡುವ ಸರ್ಕಾರವೇ ಇಂದು ಇಂಗ್ಲಿಷ್‌ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲು ಪ್ರೋತ್ಸಾಹ ನೀಡುತ್ತಿರುವುದು ವಿಷಾದನೀಯ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ.ಬಸವರಾಜ ಸಾದರ ಕಳವಳ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ರಾಯಬಾಗ

ಕನ್ನಡ ಭಾಷೆ, ಶಾಲೆಗಳನ್ನು ಉಳಿಸಿ, ಬೆಳೆಸಲು ಶಾಸನ ಮಾಡುವ ಸರ್ಕಾರವೇ ಇಂದು ಇಂಗ್ಲಿಷ್‌ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲು ಪ್ರೋತ್ಸಾಹ ನೀಡುತ್ತಿರುವುದು ವಿಷಾದನೀಯ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ.ಬಸವರಾಜ ಸಾದರ ಕಳವಳ ವ್ಯಕ್ತಪಡಿಸಿದರು.

ಪಟ್ಟಣದ ಮಹಾವೀರ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಯಬಾಗ ತಾಲೂಕು ಘಟಕದಿಂದ ಬುಧವಾರ ಹಮ್ಮಿಕೊಂಡಿದ್ದ ರಾಯಬಾಗ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅವರು, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಅನೇಕರು ಇಂದು ಉನ್ನತ ಹುದ್ದೆಗಳನ್ನು ಅಲಂಕಾರಿಸಿದ್ದಾರೆ ಎಂದರು.

ಶಾಸಕ ಡಿ.ಎಂ.ಐಹೊಳೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಥಮ ಬಾರಿಗೆ ರಾಯಬಾಗ ಮತಕ್ಷೇತ್ರದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿರುವುದು ಅತ್ಯಂತ ಸಂತೋಷದ ವಿಷಯ. ಕನ್ನಡ ಭಾಷೆ, ಸಾಹಿತ್ಯ ಅತ್ಯಂತ ಶ್ರೀಮಂತವಾಗಿದೆ. ಕನ್ನಡವನ್ನು ಗಟ್ಟಿಯಾಗಿ ಕಟ್ಟಲು ಎಲ್ಲರೂ ಕೈಜೋಡಿಸಬೇಕು ಎಂದು ಕೋರಿದರು.ಅಬಾಜಿ ಫೌಂಡೇಶನ್‌ ಅಧ್ಯಕ್ಷ, ಬರ್ಗಂಡಿ ವಿಂಟರ್ಸ್ ಇನ್ ಯುರೋಪ ಕಾದಂಬರಿ ಲೇಖಕ ಪ್ರಣಯ ಪಾಟೀಲ ಮಾತನಾಡಿ, ಕರ್ನಾಟಕದಲ್ಲಿ ಕನ್ನಡ ಭಾಷೆ ಉಳಿಸಲು, ಬೆಳೆಸಲು ಕನ್ನಡಿಗರು ಕಂಕಣಬದ್ಧವಾಗಿರಬೇಕು. ಕನ್ನಡ ರಕ್ಷಣೆಗೆ ತಾವು ಸದಾ ಸಿದ್ಧವಾಗಿರುವೆ. ಇಂದಿನ ಯುವಕರು ಮಾದಕದ್ರವ್ಯಗಳ ದಾಸರಾಗುತ್ತಿದ್ದಾರೆ, ಅದನ್ನು ತಪ್ಪಿಸಲು ಪಾಲಕರು ತಮ್ಮ ಮಕ್ಕಳಿಗೆ ಕ್ರೀಡೆ, ಸಾಹಿತ್ಯದಲ್ಲಿ ತೊಡಗುವಂತೆ ಪ್ರೋತ್ಸಾಹಬೇಕು ಎಂದು ಸಲಹೆ ನೀಡಿದರು.

ಸಮ್ಮೇಳನ ಸರ್ವಾಧ್ಯಕ್ಷೆ ಡಾ.ರತ್ನಾ ಬಾನಪ್ಪನವರ, ಕ.ಸಾ.ಪ ಬೆಳಗಾವಿ ಜಿಲ್ಲಾಧ್ಯಕ್ಷೆ ಮಂಗಲಾ ಮೆಟ್ಟಗುಡ್ಡ ಮಾತನಾಡಿದರು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಹಂದಿಗುಂದದ ಶಿವಾನಂದ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಿದ್ದರು.ಸಮಾರಂಭದಲ್ಲಿ ಸಾಹಿತಿ ಡಾ.ವಿ.ಎಸ್.ಮಾಳಿ, ತಹಸೀಲ್ದಾರ್‌ ಸುರೇಶ ಮುಂಜೆ, ಪ.ಪಂ ಅಧ್ಯಕ್ಷ ಅಶೋಕ ಅಂಗಡಿ, ಕ.ಸಾ.ಪ.ತಾಲೂಕಾಧ್ಯಕ್ಷ ರವೀಂದ್ರ ಪಾಟೀಲ, ಸಿಪಿಐ ಬಿ.ಎಸ್.ಮಂಟೂರ, ಬಿಇಒ ಬಸವರಾಜಪ್ಪ.ಆರ್, ಕ.ರಾ.ಸ.ನೌ.ಸಂಘದ ತಾಲೂಕಾಧ್ಯಕ್ಷ ಉಮೇಶ ಪೋಳ, ಕ.ಸಾ.ಪ ಕುಡಜಿ ಹೋಬಳಿ ಅಧ್ಯಕ್ಷ ಸಂತೋಷ ಸನದಿ, ದಶರಥ ಶೆಟ್ಟಿ ಹಾಗೂ ಕನ್ನಡ ಪರ ಸಂಘಟನೆಗಳ ಅಧ್ಯಕ್ಷರು, ಕ.ಸಾ.ಪ ಪದಾಧಿಕಾರಿಗಳು, ಶಿಕ್ಷಕರು ಮತ್ತು ಕನ್ನಡಾಭಿಮಾನಿಗಳು ಇದ್ದರು.ಸಾಂಸ್ಕೃತಿಕ ತೊಟ್ಟಿಲು ಎನ್ನಿಸಿಕೊಂಡಿರುವ ರಾಯಬಾಗ ಪಟ್ಟಣ ಐತಿಹಾಸಿಕ ಪರಂಪರೆ ಹೊಂದಿದೆ. ರಾಜರ ಕಾಲದಿಂದಲೂ ಎಲ್ಲ ಭಾಷೆ, ಧರ್ಮ, ಎಲ್ಲ ವರ್ಗದ ಜನರನ್ನು ಒಳಗೊಂಡು ಸಮನ್ವಯದಿಂದ ಬಾಳುತ್ತಿರುವ ನಾಡು ಅದು ರಾಯಬಾಗ ಎಂದು ಹೇಳಲು ಹೆಮ್ಮೆ ಎನ್ನಿಸುತ್ತದೆ.

-ಡಾ.ಬಸವರಾಜ ಸಾದರ, ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ