ದಂಡುಮಂಡಳಿ ಪ್ರದೇಶ ಹಸ್ತಾಂತರಕ್ಕೆ ಇನ್ನೂ ಅಂತಿಮ ನಿರ್ಧಾರವಿಲ್ಲ

KannadaprabhaNewsNetwork |  
Published : Sep 03, 2026, 03:15 AM IST
ದಂಡುಮಂಡಳಿ ಸಿಇಒ ಮಂಚಲದಾರ ಸುದಾಮ ಹರಿವಿಜಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು | Kannada Prabha

ಸಾರಾಂಶ

ದಂಡುಮಂಡಳಿ ವ್ಯಾಪ್ತಿಯ ಪ್ರದೇಶವನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಕುರಿತು ಈವರೆಗೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ ಸಾರ್ವಜನಿಕರು ಹಾಗೂ ಗುತ್ತಿಗೆದಾರರು ಆತಂಕಪಡುವ ಅಗತ್ಯವಿಲ್ಲ ಎಂದು ದಂಡುಮಂಡಳಿ ಸಿಇಒ ಮಂಚಲವಾರ ಸುದಾಮ ಹರಿವಿಜಯ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ದಂಡುಮಂಡಳಿ ವ್ಯಾಪ್ತಿಯ ಪ್ರದೇಶವನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಕುರಿತು ಈವರೆಗೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ ಸಾರ್ವಜನಿಕರು ಹಾಗೂ ಗುತ್ತಿಗೆದಾರರು ಆತಂಕಪಡುವ ಅಗತ್ಯವಿಲ್ಲ ಎಂದು ದಂಡುಮಂಡಳಿ ಸಿಇಒ ಮಂಚಲವಾರ ಸುದಾಮ ಹರಿವಿಜಯ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಂಡುಮಂಡಳಿ ವ್ಯಾಪ್ತಿಯ 112 ಎಕರೆ ಪ್ರದೇಶವನ್ನು ಹೊರತುಪಡಿಸುವ ಪ್ರಸ್ತಾವನೆಯನ್ನು ಮಾತ್ರ ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದೆ. ಆದರೆ, ಈ ಕುರಿತು ರಾಜ್ಯ ಸರ್ಕಾರದಿಂದ ಈವರೆಗೆ ಯಾವುದೇ ಅಧಿಕೃತ ಲಿಖಿತ ಅನುಮೋದನೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.ಇದೇ ವೇಳೆ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ವತಿಯಿಂದ ದಂಡುಮಂಡಳಿ ವ್ಯಾಪ್ತಿಯ 756 ಎಕರೆ ಪ್ರದೇಶವನ್ನು ಹಸ್ತಾಂತರಿಸುವ ಮತ್ತೊಂದು ಪ್ರಸ್ತಾವನೆ ಬಂದಿದ್ದು, ಇದಕ್ಕೆ ದಂಡುಮಂಡಳಿ ಆಡಳಿತ (ಡಿಒ) ಹಾಗೂ ಸ್ಥಳೀಯ ಮಿಲಿಟರಿ ಪ್ರಾಧಿಕಾರದಿಂದ ಆಕ್ಷೇಪಣೆ ವ್ಯಕ್ತವಾಗಿದೆ. ಹೀಗಾಗಿ ಈ ಪ್ರಸ್ತಾವನೆ ಕುರಿತು ಇನ್ನೂ ಅಂತಿಮ ನಿರ್ಧಾರವಾಗಿಲ್ಲ ಎಂದರು.ದಂಡುಮಂಡಳಿ ಪ್ರದೇಶವನ್ನು ಹಸ್ತಾಂತರಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಅಧಿಕಾರ ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ಸೇರಿದೆ. ರಾಜ್ಯ ಸರ್ಕಾರದ ಪ್ರಸ್ತಾವನೆ ರಕ್ಷಣಾ ಸಚಿವಾಲಯಕ್ಕೆ ತಲುಪಿದ ಬಳಿಕವೇ ಮುಂದಿನ ಪ್ರಕ್ರಿಯೆ ನಡೆಯಲಿದೆ. ಸದ್ಯ ಈ ವಿಚಾರ ಪ್ರಸ್ತಾವನೆ ಹಾಗೂ ಪರಿಶೀಲನಾ ಹಂತದಲ್ಲಿದೆ ಎಂದು ತಿಳಿಸಿದರು.ದಂಡುಮಂಡಳಿ ವ್ಯಾಪ್ತಿಯಲ್ಲಿ ಈಗಾಗಲೇ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಗುತ್ತಿಗೆದಾರರು ಹಾಗೂ ಟೆಂಡರ್‌ದಾರರು ಹಣ ಪಾವತಿ ಕುರಿತು ಆತಂಕಪಡುವ ಅಗತ್ಯವಿಲ್ಲ. ಪೂರ್ಣಗೊಂಡ ಹಾಗೂ ನಿಯಮಾನುಸಾರ ಕೈಗೊಂಡಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಹಣವನ್ನು ನಿಯಮದಂತೆ ಪಾವತಿಸಲಾಗುವುದು ಎಂದು ಭರವಸೆ ನೀಡಿದರು.ಪ್ರದೇಶ ಹಸ್ತಾಂತರದ ಕುರಿತು ಮುಂದಿನ ಎಲ್ಲ ನಿರ್ಧಾರಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದಲೇ ಕೈಗೊಳ್ಳಲಾಗುವುದು. ಈ ಬಗ್ಗೆ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು.

-ಮಂಚಲವಾರ ಸುದಾಮ ಹರಿವಿಜಯ, ದಂಡುಮಂಡಳಿ ಸಿಇಒ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇತಿಹಾಸ ಪ್ರಸಿದ್ಧ ಚಿಕ್ಕಗಡಿಯಾರಕ್ಕೆ ನವೀಕರಣ ಭಾಗ್ಯ
ಶಿಸ್ತು, ಪರಿಶ್ರಮದಿಂದ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ