ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ಅವ್ಯವಹಾರ ಪತ್ತೆಯಾಗಿಲ್ಲ

KannadaprabhaNewsNetwork |  
Published : Feb 08, 2024, 01:36 AM IST
ಲೋಕಾಯುಕ್ತ ತನಿಖೆ | Kannada Prabha

ಸಾರಾಂಶ

ದೂರು ಬಂದ ಹಿನ್ನೆಲೆಯಲ್ಲಿ ಹಿನ್ನಲೆ ಉಪಲೋಕಾಯುಕ್ತರು ಉಡುಪಿ ನೋಂದಣಿ ಕಚೇರಿಯ ತನಿಖೆಗೆ ಸರ್ಚ್ ವಾರೆಂಟ್ ಅನ್ನು ಹೊರಡಿಸಿ ತನಿಖೆಗೆ ಮಂಗಳೂರು ವಿಭಾಗ ಲೋಕಾಯುಕ್ತ ಎಸ್.ಪಿ ಗೆ ಆದೇಶಿಸಿದ್ದರು. ಅದರಂತೆ ಬುಧವಾರ ಮಂಗಳೂರಿನ ಲೋಕಾಯುಕ್ತ ಪೋಲಿಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲಿಸಿದರು. ಆದರೇ ಈ ಸಂದರ್ಭದಲ್ಲಿ ಯಾವುದೇ ಅವ್ಯವಹಾರಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ

ಕನ್ನಡಪ್ರಭ ವಾರ್ತೆ ಉಡುಪಿ

ಕಳೆದ ವಾರ ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ಜ.ಕೆ.ಎನ್.ಫಣೀಂದ್ರ ಉಡುಪಿ ಜಿಲ್ಲೆಗೆ ಭೇಟಿ ನೀಡಿ ಸಾರ್ವಜನಿಕ ಅಹವಾಲು ಸ್ವೀಕಾರ ಸಂದರ್ಭದಲ್ಲಿ ವಕೀಲರರೊಬ್ಬರು ಉಡುಪಿ ಉಪನೋಂದಾಣಿ ಕಛೇರಿಯಲ್ಲಿ ಭ್ರಷ್ಟಚಾರ ನಡೆಯುತ್ತಿದೆ ಎಂದು ಮೌಖಿಕವಾಗಿ ದೂರಿದ್ದರು.

ಈ ಹಿನ್ನಲೆ ಉಪಲೋಕಾಯುಕ್ತರು ಉಡುಪಿ ನೋಂದಣಿ ಕಚೇರಿಯ ತನಿಖೆಗೆ ಸರ್ಚ್ ವಾರೆಂಟ್ ಅನ್ನು ಹೊರಡಿಸಿ ತನಿಖೆಗೆ ಮಂಗಳೂರು ವಿಭಾಗ ಲೋಕಾಯುಕ್ತ ಎಸ್.ಪಿ ಗೆ ಆದೇಶಿಸಿದ್ದರು.

ಅದರಂತೆ ಬುಧವಾರ ಮಂಗಳೂರಿನ ಲೋಕಾಯುಕ್ತ ಪೋಲಿಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲಿಸಿದರು. ಆದರೇ ಈ ಸಂದರ್ಭದಲ್ಲಿ ಯಾವುದೇ ಅವ್ಯವಹಾರಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.ಮದುವೆ ಹಾಲ್‌ನಲ್ಲಿ ಕಳವು: ಸಿಸಿ ಟಿವಿಯಲ್ಲಿ ಸೆರೆಕನ್ನಡಪ್ರಭ ವಾರ್ತೆ ಬ್ರಹ್ಮಾವರಇಲ್ಲಿನ ಮದುವೆ ಹಾನ್ ನಲ್ಲಿ ನಡೆದ ಕಳ್ಳತನದ ದೃಶ್ಯಗಳು ಸಿಸಿ ಟಿವಿಯಲ್ಲಿ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.ಶ್ಯಾಮಿಲಿ ಸಭಾಭವನದಲ್ಲಿ ನೀಲಾವರದ ಜಯಶ್ರೀ ಸುರೇಶ್ ಎಂಬವರ ಮಗಳ ಮದುವೆಯ ಆರತಕ್ಷತೆ ನಡೆಯುತ್ತಿತ್ತು. ಈ ಸಂದರ್ಭ ಬಾಲಕನೊಬ್ಬ ಬ್ಯಾಗನ್ನು ಕಳವು ಮಾಡಿದ್ದಾನೆ. ಜಯಶ್ರೀ ಅವರು ತಮ್ಮ ಬ್ಯಾಗನ್ನು ಕುರ್ಚಿ ಮೇಲಿಟ್ಟು ವೇದಿಕೆಯಲ್ಲಿ ಫೋಟೋ ತೆಗೆಸಿಕೊಳ್ಳುತ್ತಿದ್ದರು. ಬ್ಯಾಗಿನಲ್ಲಿ ಸುಮಾರು 2.40 ಲಕ್ಷ ರು. ಮೌಲ್ಯದ ನಗದು ಹಾಗೂ ಆಭರಣಗಳಿದ್ದವು. ಬಾಲಕನು ಯಾರಿಗೂ ಸಂಶಯ ಬಾರದಂತೆ ನೇರವಾಗಿ ವೇದಿಕೆಗೆ ಹೋಗಿ ಕುರ್ಚಿಯಲ್ಲಿದ್ದ ಬ್ಯಾಗನ್ನು ಎತ್ತಿಕೊಂಡು ಹೊರಗೆ ಹೋಗಿದ್ದಾನೆ. ನಂತರ ಬ್ಯಾಗ್ ಕಾಣದಿದ್ದಾಗ ಜಯಶ್ರೀ ಅವರು ಪೊಲೀಸ್ ದೂರು ನೀಡಿದ್ದಾರೆ.ಪೊಲೀಸರು ಬಂದು ಸಿಸಿ ಕ್ಯಾಮರಗಳನ್ನು ಪರಿಶೀಲಿಸಿದಾಗ ಕಳ್ಳತನದ ಈ ದೃಶ್ಯ ಪತ್ತೆಯಾಗಿದೆ. ಬಾಲಕನೊಂದಿಗೆ ಯುವಕನೂ ಇದ್ದು, ಇಬ್ಬರ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ