ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ವತಿಯಿಂದ ವಾಲ್ಮೀಕಿ ಭವನದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ 2025ನೇ ಸಾಲಿನ ಜೀವ ರಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ದೇಶ ಯಾವ ಪಕ್ಷಗಳ ಸ್ವತ್ತಲ್ಲ. ನಿಮ್ಮ ಹೆಗಲ ಮೇಲೆ ಬಹುದೊಡ್ಡ ಜವಾಬ್ದಾರಿಯಿದೆ. ವಿಜ್ಞಾನ, ಸಂಶೋಧನೆ, ಅಭಿವೃದ್ಧಿ ಬಗ್ಗೆ ವಿಚಾರ ಮಾಡಬೇಕು ಎಂದರು.
ದೇಶಕ್ಕೆ ಅನ್ನ ನೀಡುತ್ತಿರುವ ರೈತರ ಸಮಸ್ಯೆ ಹೊಸದೇನಲ್ಲ. ಬೆಳೆ ಇದ್ದಾಗ, ಬೆಲೆ ಇರಲ್ಲ. ಬೆಲೆ ಇದ್ದಾಗ ಬೆಳೆ ಸಿಗಲ್ಲ. ನಾನು ಎಂದಿಗೂ ಪ್ರಶಸ್ತಿಗೆ ಆಸೆ ಪಟ್ಟವನಲ್ಲ. ಜೀವ ರಕ್ಷಕ ಪ್ರಶಸ್ತಿಗೆ ನಾನು ಅರ್ಹನಿದ್ದೇನೋ ಏನೊ ಗೊತ್ತಿಲ್ಲ. ಅಪಘಾತದಲ್ಲಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವವರ ಜೀವ ರಕ್ಷಣೆಯಲ್ಲಿ ತೊಡಗಿರುವ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ನ ಜೊತೆ ನಾನು ಸದಾ ಇರುತ್ತೇನೆಂದು ಭರವಸೆ ನೀಡಿದರು.ರಾಜಕಾರಣ ತುಂಬಾ ಕಷ್ಟ. ಈ ದೇಶ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ಗೆ ಸೇರಿದ್ದಲ್ಲ. ಪ್ರಜೆಗಳಿಗೆ ಸಂಬಂಧಿಸಿದ್ದು, ರಾಜಕೀಯವನ್ನು ಹತ್ತಿರದಿಂದ ವಿಮರ್ಶೆ ಮಾಡಿದಾಗ ಸಮಾಜದಲ್ಲಿ ಬದಲಾವಣೆ ತರಬಹುದು. ಬಿಗ್ಬಾಸ್ ನೋಡುವುದರಲ್ಲಿ ನಮ್ಮ ದೇಶ ಪ್ರಥಮ ಸ್ಥಾನದಲ್ಲಿದೆ. ಫೇಸ್ಬುಕ್, ವಾಟ್ಸ್ಪ್ನಲ್ಲಿ ಕಾಲ ಕಳೆಯುವುದರಿಂದ ಪ್ರಯೋಜನವಿಲ್ಲ. ಕೈಗಾರಿಕೆಗಳು ಬದಲಾಗುತ್ತಿರುವುದರಿಂದ ಮುಂದೆ ಅಪಾಯವಿದೆ. ಶಿಕ್ಷಣದ ಜೊತೆ ಕೌಶಲ್ಯಾಧಾರಿತ ಶಿಕ್ಷಣ ಬೇಕು. ಯುವ ಜನಾಂಗ ಡ್ರಗ್ಸ್ಗೆ ಬಲಿಯಾಗುತ್ತಿರುವುದು ಅತ್ಯಂತ ಅಪಾಯಕಾರಿ ಸಂಗತಿ ಎಂದು ಸಚಿವ ಎಸ್.ಸಂತೋಷ್ ಲಾಡ್ ಕಳವಳ ವ್ಯಕ್ತಪಡಿಸಿದರು.
ಹೆಣ್ಣು ಮಕ್ಕಳಿಗೆ ಮುಟ್ಟಿನ ರಜೆ ನೀಡಬೇಕೆಂಬ ಯೋಜನೆ ಸಂತೋಷ್ ಲಾಡ್ರವರದು. ನಕಲಿ ಕಾರ್ಮಿಕರ ಗುರುತಿನ ಚೀಟಿಗಳನ್ನು ಪತ್ತೆ ಹಚ್ಚಿ ನಿಜವಾದ ಕಾರ್ಮಿಕರಿಗೆ ನ್ಯಾಯ ಒದಗಿಸಿದ್ದಾರೆ. ಸಮಾಜ ಸೇವಕರು ಅಳಿವಿನಂಚಿನಲ್ಲಿರುವುದರಿಂದ ಸಮಾಜ ಸೇವೆಗೆ ಬರುವವರು ಕಡಿಮೆಯಾಗುತ್ತಿದ್ದಾರೆ. ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುವವರನ್ನು ಹುಡುಕುವಂತಾಗಿದೆ. ನೆಮ್ಮದಿಯಾಗಿ ನಿದ್ರೆ ಮಾಡಬೇಕಾದರೆ ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕೆಂದು ಹೇಳಿದರು.
ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮಾತನಾಡಿ, ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ನ ಪದಾಧಿಕಾರಿಗಳು ಸಮುದಾಯದ ನಿಜವಾದ ರತ್ನಗಳು. ಯಾವ ಪ್ರತಿಫಲಾಪೇಕ್ಷೆಯನ್ನು ಬಯಸದೆ ಸಚಿವ ಸಂತೋಷ್ಲಾಡ್ ಜೀವ ರಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆಂದರೆ ಅಂಬೇಡ್ಕರ್ರವರ ವಿಚಾರಧಾರೆಗಳೆ ಅವರಿಗೆ ಪ್ರೇರಣೆ. ಸಮಾಜ ಸೇವೆಯನ್ನು ಚಟ, ಹಠವನ್ನಾಗಿಸಿಕೊಂಡಿರುವ ಲಾಡ್ರವರ ಸಮಾಜ ಸೇವೆ ಹೀಗೆಯೆ ಮುಂದುವರೆಯಲಿ ಎಂದು ಆಶಿಸಿದರು.