ಆಹಾರ ಉದ್ಯಮಿದಾರರ ಮೇಲ್ವಿಚಾರಕರಿಗೆ ಆಹಾರ ಸುರಕ್ಷತೆ, ಗುಣಮಟ್ಟ ತರಬೇತಿ
ಆಹಾರ ಸುರಕ್ಷತಾ, ಗುಣಮಟ್ಟದ ಪ್ರಮಾಣಪತ್ರ ಹಾಗೂ ಎಫ್ಒಎಸ್ಟಿಒಸಿ ಪ್ರಮಾಣಪತ್ರ ಪಡೆದ ನಂತರ ಟ್ರೇಡ್ ಲೈಸೆನ್ಸ್ ಪಡೆಯುವ ಅವಶ್ಯಕತೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ನಗರದ ಮಥುರಾ ಪ್ಯಾರಡೈಸ್ ಹೋಟೆಲ್ನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ, ಆಹಾರ ಸುರಕ್ಷತಾ ಮತ್ತು ಪ್ರಮಾಣಪತ್ರ ಕೇಂದ್ರ ಶಿವಮೊಗ್ಗ ಜಂಟಿಯಾಗಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲೆಯ ಆಹಾರ ಉದ್ಯಮಿದಾರರು ಮಾರಾಟ ಮಾಡುವ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇಲ್ವಿಚಾರಕರಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.1954ರಲ್ಲಿ ಇದ್ದ ಅನೇಕ ಕಾನೂನುಗಳು ಈಗಲೂ ಇವೆ. ಡಿಜಿಟಲ್ ಯುಗದಲ್ಲಿ ಕಾಲ ಕಾಲಕ್ಕೆ ಕಾನೂನುಗಳು ಹೆಚ್ಚಳ ಆಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರದ ಕಾನೂನುಗಳು ಯಾವತ್ತು ಹೇಗೆ ಬಳಕೆಯಾಗಬೇಕೆಂಬ ಅರಿವು ಮೂಡಿಸುವ ಕಾರ್ಯವನ್ನು ಅಧಿಕಾರಿಗಳು ವ್ಯಾಪಾರಸ್ಥರೊಂದಿಗೆ ನಿರಂತರ ಆತ್ಮೀಯತೆಯಿಂದ ಮಾಡಬೇಕು ಎಂದರು.
ಮಧ್ಯಮವರ್ಗಕ್ಕೆ ಮತ್ತು ಬಡವರ್ಗಕ್ಕೆ ಅನುಕೂಲವಾಗುವ ರೀತಿಯಲ್ಲಿ ಸರ್ಕಾರ ನಿಯಮ ಸರಳೀಕರಣ ಮಾಡಬೇಕು. ಸರ್ಕಾರಗಳಿಗೆ ಕಿವಿ ಕಣ್ಣು ಇರಲ್ಲ. ಬಜೆಟ್ ಮಂಡನೆ ಮುನ್ನ ನಮ್ಮ ಹಕ್ಕನ್ನು ನಾವು ಕೇಳಬೇಕು. ಸರ್ಕಾರದಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡದಿದ್ದರೆ ಉಳಿಯುವುದಿಲ್ಲ ಎಂಬುದನ್ನು ಸರ್ಕಾರ ಗಣನೆಗೆ ತೆಗೆದುಕೊಂಡು ನಿಯಮಾವಳಿಗಳನ್ನು ರೂಪಿಸಬೇಕು ಎಂದರು.
ಜಿಲ್ಲಾ ವಾಣಿಜ್ಯ, ಕೈಗಾರಿಕಾ ಸಂಘದ ಅಧ್ಯಕ್ಷ ಬಿ. ಗೋಪಿನಾಥ್, ಉಪಾಧ್ಯಕ್ಷ ಜಿ. ವಿಜಯಕುಮಾರ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಶಂಕರ್ ನಾರಾಯಣಹೊಳ್ಳ, ಆಹಾರ ಸುರಕ್ಷತಾ ಅಧಿಕಾರಿಗಳಾದ ಸೋಮೇಶ್, ಗುರುರಾಜ್, ಸದಾಶಿವಪ್ಪ. ಶಶಿಕುಮಾರ್, ತರಬೇತಿದಾರರಾದ ಸವಿತಾ, ಸಮುದಾಯ ಅಧಿಕಾರಿಗಳಾದ ಅನುಪಮಾ, ವಾಣಿಜ್ಯ ಕೈಗಾರಿಕಾ ಸಂಘದ ಕಾಯದರ್ಶಿ ಸುರೇಶ್, ಜಿಲ್ಲಾ ಸಂಯೋಜಕರಾದ ಬಿ.ಟಿ. ಹನುಮಂತಯ್ಯ, ಶುಭಂ ಹೋಟೆಲ್ ಮಾಲೀಕರಾದ ಉದಯ್ ಕಡಂಬ ಇದ್ದರು.