ಬರಗಾಲ ಬಂತೆಂದು ಯಾರು ಎದೆಗುಂದಬೇಕಿಲ್ಲ

KannadaprabhaNewsNetwork |  
Published : Aug 13, 2026, 01:30 AM IST
ಮಧುಗಿರಿಯ ಪಶುಪಾಲನಾ ಇಲಾಖೆಯಿಂದ ಹಮ್ಮಿಕೊಂಡಿದ್ದ ತಾಲೂಕಿನ ರೈತರಿಗೆ ಮೇವಿನ ಬೀಜ ಮಿನಿ ಕಿಟ್ಸ್ ಹಾಗೂ ಇತರೆ ಸೌಲಭಅಯಗಳನ್ನು ಶಾಸಕ ಕೆ.ಎನ್.ರಾಜಣ್ಣ ವಿತರಿಸಿದರು.  | Kannada Prabha

ಸಾರಾಂಶ

ಬರಗಾಲ ಬಂತು ಎಂದು ರೈತರು, ಕೂಲಿಕಾರ್ಮಿಕರು ಸೇರಿದಂತೆ ಯಾರೂ ಸಹ ಎದೆಗುಂದಬೇಕಿಲ್ಲ ನಿಮ್ಮ ಜೊತೆ ನಾನು. ಸರ್ಕಾರ ಮತ್ತು ಅಧಿಕಾರಿಗಳು ಇದ್ದೇವೆ ಎಂದು ಶಾಸಕ ಕೆ.ಎನ್.ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಮಧುಗಿರಿ

ಬರಗಾಲ ಬಂತು ಎಂದು ರೈತರು, ಕೂಲಿಕಾರ್ಮಿಕರು ಸೇರಿದಂತೆ ಯಾರೂ ಸಹ ಎದೆಗುಂದಬೇಕಿಲ್ಲ ನಿಮ್ಮ ಜೊತೆ ನಾನು. ಸರ್ಕಾರ ಮತ್ತು ಅಧಿಕಾರಿಗಳು ಇದ್ದೇವೆ ಎಂದು ಶಾಸಕ ಕೆ.ಎನ್.ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಬುಧವಾರ ಇಲ್ಲಿನ ಪಶು ವೈದ್ಯಕೀಯ ಆಸ್ಪತ್ರೆ ಆವರಣದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಹಮ್ಮಿಕೊಂಡಿದ್ದ ತಾಲೂಕಿನ ರೈತರಿಗೆ ಮೇವಿನ ಬೀಜ ಮಿನಿ ಕಿಟ್ಸ್ ಹಾಗೂ ಇತರೆ ಸೌಲಭ್ಯಗಳನ್ನು ವಿತರಿಸಿ ಮಾತನಾಡಿದರು.

ರೈತರು ಭಯ ಪಡುವ ಅಗತ್ಯವಿಲ್ಲ. ಮಳೆ ತಡವಾಗಿ ಆದರೂ ಬರುತ್ತದೆ. ಈಗ್ಗೆ 10 ವರ್ಷಗಳ ಹಿಂದೆ ಇಂತಧ್ದೆ ಬರಗಾಲ ಬಂದಿತ್ತು. ಆಗ ಸಹ ನಾವುಗಳು ಗೋಶಾಲೆಗಳನ್ನು ತೆರೆದು ಮೇವು ಖರೀದಿಸಿ ದನಕರುಗಳನ್ನು ರಕ್ಷಿಸಿದ್ದೆವು. ಈಗಲೂ ಸಗ ಮೇವಿನ ಬೀಜದ ಕಿಟ್‌ಗಳನ್ನು ಕೊಟ್ಟು ರೈತರ ಬದುಕಿಗೆ ನೆರವಾಗಿದ್ದು, ಪ್ರಸ್ತುತ ಬರಗಾಲ ಎದುರಾಗಿರುವ ಹಿನ್ನಲೆಯಲ್ಲಿ ಜನ ಜಾನುವಾರುಗಳಿಗೆ ಏನೇನೂ ಸೌಲಭ್ಯ ಬೇಕೋ ಅದೆಲ್ಲವನ್ನು ಮುನ್ನಚ್ಚರಿಕೆ ಕ್ರಮವಾಗಿ ಕೈಗೊಂಡಿದ್ದೇವೆ. ರಾಸುಗಳಿಗೆ ಮೇವು ಮತ್ತು ಜನರಿಗೆ ಕುಡಿವ ನೀರು ಪೂರೈಸಲು ತಾಲೂಕಿನಲ್ಲಿ ಈಗಾಗಲೇ ಸಣ್ಣ ಮತ್ತು ದೊಡ್ಡ ಚೆಕ್ ಡ್ಯಾಂ ಹಾಗೂ ಕಾಲುವೆಗಳನ್ನು ನಿರ್ಮಿಸಿದ್ದು, ಇದರಿಂದ ಅಂತರ್ಜಲ ವೃದ್ಧಿಸಿದೆ. ಈಗ 500 ಅಡಿ ಬೋರ್ ಕೊರೆದರೆ ಸಾಕು ಗುಣಮಟ್ಟದ ಕುಡಿವ ನೀರು ಲಭ್ಯವಾಗುತ್ತಿದೆ. ಹಾಗಾಗಿ ನಮ್ಮ ತಾಲೂಕಿನಲ್ಲಿ ಕುಡಿವ ನೀರಿಗೆ ಯಾವುದೇ ತೊಂದರೆ ಇಲ್ಲ. ಹಳ್ಳಿಗಳಲ್ಲಿ ರೈತರು , ಕೂಲಿ ಕಾರ್ಮಿಕರು ನಮ್ಮದಿಯಿಂದ ಜೀವನ ಸಾಗಿಸಲು ಅಧಿಕಾರಿಗಳು ಎಲ್ಲ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳಲು ಬದ್ಧವಾಗಿದ್ದು, ಸರ್ಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ವಿತರಿಸಲು ಈಗಾಗಲೇ ಡಿಸಿಎಂ ಡಾ.ಜಿ.ಪರಮೇಶ್ವರ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಕುಡಿವ ನೀರಿಗೆ ಯಾರಿಗೂ ತೊಂದರೆ ಆಗದಂತೆ ಮತ್ತು ಅಧಿಕಾರಿಗಳು ಬಿವಿಜಿ ರಾಮ್ಎ ಜಿ ಯೋಜನೆಯಡಿ ಉದ್ಯೋಗ ಸೃಷ್ಠಿಸಿ ಉದ್ಯೋಗ ದೊರಕಿಸಿ ಕೊಡುವ ಮೂಲಕ ಜನರು ಗುಳೇ ಹೋಗುವುದನ್ನು ತಡೆಗಟ್ಟಬೇಕೆಂದು ಕಟ್ಟಪ್ಪಣೆ ಮಾಡಿ ಹೋಗಿದ್ದಾರೆ. ರೈತರು ಇದರ ಪ್ರಯೋಜನ ಪಡೆದು ತಮ್ಮ ಜೀವನ ಮಟ್ಟ ಸುಧಾರಣೆಗೆ ಮುಂದಾಗಬೇಕು ಎಂದು ಶಾಸಕ ಕೆ.ಎನ್.ರಾಜಣ್ಣ ಕರೆ ನೀಡಿದರು.

ಬರ ಪರಿಹಾರ ಯೋಜನೆಯ ಭಾಗವಾಗಿ ರೈತರಿಗೆ ಉಚಿತ ಅಥವಾ ರಿಯಾಯಿತಿ ದರದಲ್ಲಿ ಗುಣ ಮಟ್ಟದ ಮೇವಿನ ಬೀಜಗಳನ್ನು ವಿತರಿಸಲಾಗುತ್ತಿದೆ. ರೈತರು ತಮ್ಮ ಬಳಿ ಇರುವ ಕನಿಷ್ಠ ನೀರಾವರಿ ಸೌಲಭ್ಯ ಬಳಸಿಕೊಂಡು ಸ್ವತ ತಾವೇ ಮೇವು ಬೆಳೆದುಕೊಳ್ಳಲು ಪ್ರೋತ್ಸಾಹಿಸಲಾಗುತ್ತಿದೆ. ಇದರಿಂದ ಹೊರಗಿನಿಂದ ಹೆಚ್ಚು ಬೆಲೆ ಕೊಟ್ಟು ಮೇವು ಖರೀದಿಸುವ ಅನಿರ್ವಾಯತೆ ತಪ್ಪಿ ರೈತರಿಗೆ ಆರ್ಥಿಕ ನೆರವಾಗುತ್ತದೆ. ರೈತರು ಜಾನುವಾರುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಬೇಡಿ ಎಂದು ರಾಜಣ್ಣ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಎಸಿ ಗೋಟೂರು ಶಿವಪ್ಪ, ತಹಸೀಲ್ದಾರ್ ನಂದಿನಿ, ಜಿಲ್ಲಾ ಉಪನಿರ್ದೇಶಕ ಡಾ.ಶಿವಪ್ರಸಾದ್, ಸಹಾಯಕ ನಿರ್ದೇಶಕ ಜಗದೀಶ್, ಇಒ ಉತ್ತಮ್, ಟಿಎಪಿಸಿಎಂಎಸ್ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಯ್ಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ನಾಗೇಶಬಾಬು, ಮುಖಂಡ ತುಂಗೋಟಿ ರಾಮಣ್ಣ, ಸೇರಿದಂತೆ ಅನೇಕರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಫಿನಾಡಿನಲ್ಲಿ 100 ಮೀಟರ್‌ ಉದ್ದದ ತ್ರಿವರ್ಣ ಧ್ವಜ ಯಾತ್ರೆ
ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ