- ನಾವೇನೂ ತಲೆಕೆಡಿಸಿಕೊಂಡಿಲ್ಲ: ಎಸ್ಸೆಸ್ಸೆಂ ಹೇಳಿಕೆ । ಬೊಮ್ಮಾಯಿ, ಶೆಟ್ಟರ್, ನಮ್ಮ ಪಕ್ಷದಲ್ಲೂ ಅನೇಕರು ಸಿಎಂ ಆದರಲ್ವಾ?
ಕನ್ನಡಪ್ರಭ ವಾರ್ತೆ ದಾವಣಗೆರೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗುತ್ತಾರೆಂದು ಯಾರಿಗಾದರೂ ಗೊತ್ತಿತ್ತಾ? ಅದಕ್ಕಿಂತಲೂ ಮುಂದೆ ಜಗದೀಶ ಶೆಟ್ಟರ್ ಸಹ ಅದೇ ರೀತಿ ಮುಖ್ಯಮಂತ್ರಿಯಾದರು. ನಮ್ಮ ಪಕ್ಷದಲ್ಲೂ ಬಹಳಷ್ಟು ಜನರು ಮುಖ್ಯಮಂತ್ರಿ ಆಗಿದ್ದಾರೆ. ಯಾರ ಹಣೆಬರಹದಲ್ಲಿ ಏನಿದೆಯೋ ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗಣಿ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದರು.
ನಗರದ ತಮ್ಮ ನಿವಾಸದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ನೀವೂ ಆಕಾಂಕ್ಷಿಯೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಯಾರ ಹಣೆ ಬರಹದಲ್ಲಿ ಏನಿದೆಯೋ ಅದನ್ನು ತಪ್ಪಿಸುವುದಕ್ಕೆ ಸಾಧ್ಯವಿಲ್ಲ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ನಾವೇನೂ ತಲೆಕೆಡಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.ಕೋಡಿ ಮಠದ ಸ್ವಾಮೀಜಿ ನಮ್ಮ ಮನೆಗೆ ಭೇಟಿ ನೀಡಿದ್ದು ನಿಜ. ತಮ್ಮ ತಂದೆ ಶಾಮನೂರು ಶಿವಶಂಕರಪ್ಪ ಅವರ ಭೇಟಿ ಮಾಡಲೆಂದು ಬಂದಿದ್ದರು. ತಂದೆಯವರ ಆರೋಗ್ಯ ವಿಚಾರಿಸಿದ ಸ್ವಾಮೀಜಿ ಸ್ವಲ್ಪ ಹೊತ್ತು ಇದ್ದು, ಹೋದರು. ಇದನ್ನು ಹೊರತುಪಡಿಸಿದರೆ ಬೇರಾವುದೇ ವಿಚಾರವನ್ನೂ ಕೋಡಿ ಮಠದ ಸ್ವಾಮೀಜಿ ಬಳಿ ಚರ್ಚೆ ನಡೆಸಿಲ್ಲ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಡಿನ್ನರ್ ಪಾರ್ಟಿ ಅಶೋಕ್ ಪಕ್ಷದಲ್ಲಿದೆ:
- - -
-23ಕೆಡಿವಿಜಿ7, 8, 9.ಜೆಪಿಜಿ: ಎಸ್.ಎಸ್.ಮಲ್ಲಿಕಾರ್ಜುನ.