ಮರ ಕಡಿಯುವ ಹಕ್ಕನ್ನು ಅರಣ್ಯ ಇಲಾಖೆಗೆ ಯಾರೂ ಕೊಟ್ಟಿಲ್ಲ: ಅನಂತಮೂರ್ತಿ ಹೆಗಡೆ

KannadaprabhaNewsNetwork |  
Published : Aug 27, 2026, 02:45 AM IST
ಮರಕಡಿದ ಜಾಗಕ್ಕೆ ಅನಂತಮೂರ್ತಿ ಹೆಗಡೆ ಭೇಟಿ ನೀಡಿದರು. | Kannada Prabha

ಸಾರಾಂಶ

ಅಡಕೆ ಮರವನ್ನು ಕಡಿಯುವ ಹಕ್ಕನ್ನು ಅರಣ್ಯ ಇಲಾಖೆಗೆ ಯಾರೂ ಕೊಟ್ಟಿಲ್ಲ. ಮರ ಕಡಿಯಬೇಕು ಎಂದು ಅರಣ್ಯ ಇಲಾಖೆಯ ಯಾವ ನಿಯಮದಲ್ಲಿದೆ? ಮರವನ್ನು ಉಳಿಸಿ, ಬೆಳೆಸುವುದು ಅರಣ್ಯ ಇಲಾಖೆ ಕರ್ತವ್ಯ ಮರ ಕಡಿಯುವುದಲ್ಲ.

ಕನ್ನಡಪ್ರಭ ವಾರ್ತೆ ಯಲ್ಲಾಪುರ

ಅಡಕೆ ಮರವನ್ನು ಕಡಿಯುವ ಹಕ್ಕನ್ನು ಅರಣ್ಯ ಇಲಾಖೆಗೆ ಯಾರೂ ಕೊಟ್ಟಿಲ್ಲ. ಮರ ಕಡಿಯಬೇಕು ಎಂದು ಅರಣ್ಯ ಇಲಾಖೆಯ ಯಾವ ನಿಯಮದಲ್ಲಿದೆ? ಮರವನ್ನು ಉಳಿಸಿ, ಬೆಳೆಸುವುದು ಅರಣ್ಯ ಇಲಾಖೆ ಕರ್ತವ್ಯ ಮರ ಕಡಿಯುವುದಲ್ಲ. ಅರಣ್ಯ ಇಲಾಖೆಯ ಈ ಕ್ರಮವನ್ನು ನಾವು ಖಂಡಿಸುತ್ತೇವೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಆಗ್ರಹಿಸಿದರು.

ತಾಲೂಕಿನ ಕುಂದರಗಿ ಗ್ರಾಪಂ ವ್ಯಾಪ್ತಿಯ ಬೆಳ್ಳಂಬೆಯ ಸದಾಶಿವ ನಾಯ್ರ ತೋಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮರಕಡಿದ ಜಾಗಕ್ಕೆ ಭೇಟಿ ನೀಡಿ ರೈತನಿಗೆ ಧೈರ್ಯ ತುಂಬಿ ಮಾತನಾಡಿದ ಅವರು, ಸುಮಾರು ೫೦ ವರ್ಷದಿಂದ ವಾಸವಿದ್ದ ಸದಾಶಿವ ನಾಯ್ಕ್ ಬೆಳ್ಳಂಬೆ ಅವರಿಗೆ ಸೇರಿದ ಸುಮಾರು ೬ರಿಂದ ೭ ವರ್ಷದ ೪೦ ಅಡಕೆ ಗಿಡಗಳನ್ನು ಅರಣ್ಯ ಅಧಿಕಾರಿಗಳು ಕಡೆದು ಹಾಕಿದ್ದಾರೆ. ಇದು ಸದಾಶಿವ ನಾಯ್ಕ ಕಣ್ಣೀರಿಗೆ ಕಾರಣವಾಗಿದೆ. ಸದಾಶಿವ ಕೂಲಿ ಕೆಲಸಕ್ಕೆ ಹೋದ ಸಮಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬಂದು ಅಮಾನುಷವಾಗಿ ಮರ ಕಡಿದಿದ್ದಾರೆ. ಇವರು ಹತ್ತಾರು ಎಕರೆ ಜಮೀನು ಹೊಂದಿದವರಲ್ಲ. ನಿನ್ನೆ ಮೊನ್ನೆಯಿಂದ ಕೃಷಿ ಮಾಡುತ್ತಿಲ್ಲ. ಸಾಕಷ್ಟು ವರ್ಷಗಳಿಂದ ಇದೇ ಊರಿನಲ್ಲಿ ಕೃಷಿ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಅರಣ್ಯ ಇಲಾಖೆಗೆ ರೈತರ ಬಗ್ಗೆ ಕನಿಕರ ಇರಬೇಕು. ಅರಣ್ಯ ಇಲಾಖೆಯ ಈ ಕ್ರಮ ಖಂಡನೀಯ. ರೈತರ ಪರವಾಗಿ ಸದಾ ನಾವು ಇರಲಿದ್ದೇವೆ ಎಂದರು.

ಈ ಸಂದರ್ಭ ಬಿಜೆಪಿ ತಾಲೂಕಾ ಉಪಾಧ್ಯಕ್ಷ ಗಣೇಶ ಹೆಗಡೆ, ಗ್ರಾಪಂ ಮಾಜಿ ಅಧ್ಯಕ್ಷೆ ದೀಪಾ ರಾಘವೇಂದ್ರ ಸಿದ್ದಿ, ಮಾಳಕೊಪ್ಪ ಮಂಚಿಕೇರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿನೇಶ್ ಭಟ್ಟ, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಬಾಬಣ್ಣ ಪತ್ರಕರ್, ರಾಮಕೃಷ್ಣ ಹೆಗಡೆ, ಗ್ರಾಪಂ ಮಾಜಿ ಸದಸ್ಯ ಸೀತಾರಾಮ್ ಗೌಡ, ಭರಣಿ ಬೂತ್ ಅಧ್ಯಕ್ಷ ಗಂಗಾಧರ ನಾಯಕ್ ಸೇರಿ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಕಾಸ ಸೌಹಾರ್ದ ಕೋ​ ಆಪರೇಟಿವ್ ಬ್ಯಾಂಕ್ ಶೇ. 16 ಡಿವಿಡೆಂಡ್ ಘೋಷಣೆ
ವಿಜಯನಗರ ಜಿಲ್ಲೆಯಲ್ಲಿ ಸಂಭ್ರಮದಿಂದ ಈದ್‌ ಮಿಲಾದ್‌ ಆಚರಣೆ