ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಟಾಸ್ಕ್ ಫೋರ್ಸ್ ಸಭೆ
ಸಾರ್ವಜನಿಕರ ಕುಡಿಯುವ ನೀರಿಗಾಗಿ ಸರ್ಕಾರದಿಂದ ಕೊರೆಸಲಾಗಿರುವ ಕೊಳವೆ ಬಾವಿಯ 500 ಮೀ. ಅಂತರದಲ್ಲಿ ಖಾಸಗಿ ಕೊಳವೆ ಬಾವಿ ಕೊರೆಯುವುದಕ್ಕೆ ಅವಕಾಶ ನೀಡಬಾರದು. ಒಂದು ಅನಧಿಕೃತ ಕೊಳವೆ ಬಾವಿ ಕೊರೆದಿರುವುದು ಕಂಡು ಬಂದರೆ ತಕ್ಷಣ ಕೊಳವೆ ಬಾವಿ ವಶಕ್ಕೆ ಪಡೆಯುವಂತೆ ಅಧಿಕಾರಿಗಳಿಗೆ ಶಾಸಕ ಎಚ್.ಡಿ.ತಮ್ಮಯ್ಯ ನಿರ್ದೇಶಿಸಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸೋಮವಾರ ನಡೆದ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿ ಗ್ರಾಮದ ಜನರ ಕುಡಿವ ನೀರಿಗೆ ಕೊರೆಸಲಾದ ಕೊಳವೆ ಬಾವಿಯಲ್ಲಿ ಉತ್ತಮ ನೀರು ಬಂದಿದೆ ಎಂದ ತಕ್ಷಣ ಸುತ್ತಮುತ್ತಲಿನ ಖಾಸಗಿ ಜಮೀನವರು ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸುತ್ತಾರೆ. ಇದರಿಂದ ಸರ್ಕಾರದ ಕೊಳವೆ ಬಾವಿಯಲ್ಲಿ ನೀರು ಕಡಿಮೆ ಆಗಲಿದೆ. ಇದಕ್ಕೆ ಅವಕಾಶ ನೀಡಬೇಡಿ. ಸರ್ಕಾರದ ಕೊಳವೆ ಬಾವಿಯ 500 ಮೀ. ಅಂತರದಲ್ಲಿ ಹೊಸ ಕೊಳವೆ ಬಾವಿ ತೆಗೆಸಲು ಅವಕಾಶ ನೀಡಬೇಡಿ. ಒಂದು ವೇಳೆ ಅನಧಿಕೃತ ಕೊಳವೆ ಬಾವಿ ತೆಗೆದರೆ ತಕ್ಷಣ ಕೊಳವೆ ಬಾವಿಯನ್ನು ಸರ್ಕಾರದ ವಶಕ್ಕೆ ಪಡೆಯಿರಿ ಎಂದು ತಿಳಿಸಿದರು.ಮೆಸ್ಕಾಂ ಅಧಿಕಾರಿಗೆ ತರಾಟೆ
ಜಿಪಂ ಸಿಇಒ ಎಚ್.ಎಸ್. ಕೀರ್ತನಾ ಮಾತನಾಡಿ, ಕುಡಿಯುವ ನೀರಿನ ವ್ಯವಸ್ಥೆಗೆ ಜಿಲ್ಲೆಗೆ ₹4 ಕೋಟಿ ಅನುದಾನ ನೀಡಲಾಗಿದೆ. ಈವರೆಗೆ ₹1.5 ಕೋಟಿ ಮಾತ್ರ ವೆಚ್ಚವಾಗಿದೆ. ಇನ್ನೂ ₹2.5 ಕೋಟಿ ಬಾಕಿ ಇದೆ. ಕಾಮಗಾರಿ ಕೈಗೊಳ್ಳುವ ಮೊದಲು ಕಡ್ಡಾಯವಾಗಿ ಟಾಸ್ಕ್ ಫೋರ್ಸ್ ಸಭೆಯಲ್ಲಿ ಅನುಮತಿ ಪಡೆಯಬೇಕು ಎಂದರು.
ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ (ಪ್ರಭಾರಿ) ಪೂರ್ಣಿಮಾ, ಚಿಕ್ಕಮಗಳೂರು ತಹಸೀಲ್ದಾರ್ ರೇಷ್ಮಾ ಶೆಟ್ಟಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚಿದಾನಂದ್ ಮೊದಲಾದವರಿದ್ದರು.
ಗೋಮಾಳದಲ್ಲಿ ಕೊಳವೆಗೆ ಗ್ರಾಮಸ್ಥರ ಅಡ್ಡಿ
ಆಗ ಜಿಪಂ ಸಿಇಒ ಎಚ್.ಎಸ್.ಕೀರ್ತನಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅಡ್ಡಿ ಪಡಿಸುವವರ ವಿರುದ್ಧ ಈ ವರೆಗೆ ಏಕೆ ಪೊಲೀಸ್ ದೂರು ನೀಡಿ ಎಫ್ಐಆರ್ ದಾಖಲಿಸುವ ಕೆಲಸ ಮಾಡಿಲ್ಲ ಎಂದು ಪ್ರಶ್ನಿಸಿದರು. ಕುಡಿಯುವ ನೀರಿನ ವಿಚಾರಕ್ಕೆ ಯಾರೇ ಅಡ್ಡಿ ಪಡಿಸಿದರೂ ಮೂಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದರು.