ಕನ್ನಡಪ್ರಭ ವಾರ್ತೆ ಮಂಡ್ಯ
ಭಾನುವಾರ ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ನಡೆದ ಸಾಹಿತಿ ದೇಶಹಳ್ಳಿ ಮಾದಯ್ಯ ಸ್ಮರಣಾರ್ಥ ೧೧ನೇ ಕನ್ನಡ ಅಕ್ಷರ ಜಾತ್ರೆ ಹಾಗೂ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ಯಾವುದೇ ವಿಶ್ವವಿದ್ಯಾನಿಲಯ ಆರಂಭವಾದಾಗ ಮೂಲಸೌಕರ್ಯ, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಕೊರತೆ ಎದುರಿಸುವುದು ಸಾಮಾನ್ಯ. ಅದನ್ನೇ ಗುರಿಯಾಗಿಸಿಕೊಂಡು ವಿಶ್ವ ವಿದ್ಯಾನಿಲಯ ಮುಚ್ಚುವುದು ಬೇಡ. ಬದಲಾಗಿ ಖಾಲಿ ಇರುವ ಎಲ್ಲಾ ಬೋಧಕೇತರ, ಬೋಧಕ, ಪ್ರಾಧ್ಯಾಪಕ ಹುದ್ದೆಗಳಿಗೆ ಕೂಡಲೇ ನೇಮಕ ಮಾಡಿಕೊಳ್ಳಬೇಕು ಹಾಗೂ ಮೂಲ ಸೌಕರ್ಯ ಕಲ್ಪಿಸಬೇಕು. ಎಲ್ಲಾ ಸರ್ಕಾರಿ ವಿಶ್ವವಿದ್ಯಾನಿಲಯಗಳಿಗೆ ತಲಾ ೧೦೦ ಕೋಟಿ ರು. ವಿಶೇಷ ಅನುದಾನವನ್ನು ಕೂಡಲೇ ನೀಡಬೇಕು. ಮಂಡ್ಯ ವಿಶ್ವವಿದ್ಯಾಲಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಸರ್ಕಾರ ವಿಶ್ವವಿದ್ಯಾಲಯವನ್ನು ಉಳಿಸಬೇಕೆಂದು ಮನವಿ ಮಾಡಿದರು.
ಆಧ್ಯಾತ್ಮಿಕ ವಿಚಾರದಲ್ಲಿ ಭಾರತ ಈ ಹಿಂದೆಯೇ ವಿಶ್ವಗುರು ಆಗಿತ್ತು. ಇದೀಗ ಅದೇ ದಾರಿಯಲ್ಲಿ ನಮ್ಮ ದೇಶ ಮತ್ತೊಮ್ಮೆ ಮುನ್ನಡೆಯುತ್ತಿದೆ. ಅದಕ್ಕೆ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದ ಮಹಾ ಕುಂಭಮೇಳವೇ ಸಾಕ್ಷಿಯಾಗಿದೆ. ಕುಂಭಮೇಳದಲ್ಲಿ ೬೬ ಕೋಟಿ ಜನ ಪುಣ್ಯಸ್ನಾನ ಮಾಡಿದ್ದು, ಇದು ಆಧ್ಯಾತ್ಮದಲ್ಲಿ ಭಾರತ ವಿಶ್ವಗುರುವಾಗಿರುವುದನ್ನು ತೋರಿಸುತ್ತದೆ ಎಂದು ನುಡಿದರು.ಹೊಸವರ್ಷಾಚರಣೆ ಹೆಸರಲ್ಲಿ ಕೆಲವರು ಮೋಜು, ಮಸ್ತಿ ಮಾಡುತ್ತಾರೆ. ಈ ವೇಳೆ ಅನೇಕ ಲೈಂಗಿಕ ದೌರ್ಜನ್ಯ ಹಾಗೂ ಅಪರಾಧ ಚಟುವಟಿಕೆಗೆ ಕಾರಣವಾಗುತ್ತದೆ. ಆದರೆ, ಕುಂಭಮೇಳದಲ್ಲಿ ಇಂತಹ ಒಂದು ಲೈಂಗಿಕ ದೌರ್ಜನ್ಯ ಅಥವಾ ಅಪರಾಧ ಚಟುವಟಿಕೆ ನಡೆಯಲಿಲ್ಲ. ಇದು ಆಧ್ಯಾತ್ಮಿಕತೆಗೆ ಇರುವ ಶಕ್ತಿ ಎಂದರು.
ಪ್ರಾಧ್ಯಾಪಕ ಡಾ.ಎಚ್.ಎಂ.ನಾಗೇಶ್ ಮಾತನಾಡಿ, ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿ ಕೊಡಬಾರದು. ಅಗತ್ಯವೆನಿಸಿದರೆ ಇಂಗ್ಲಿಷ್ ಕಲಿಕೆಗೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಬೇಕು ಎಂದು ಒತ್ತಾಯಿಸಿದರು.
ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದರು.
ವೇದಿಕೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಪಿ.ಸ್ವಾಮಿ, ಚಲನಚಿತ್ರ ನಿರ್ದೇಶಕ ಓಂಕಾರ್ ಪುರುಷೋತ್ತಮ್, ಡಾ.ಜೀಶಂಪ ಸಾಹಿತ್ಯ ವೇದಿಕೆ ಅಧ್ಯಕ್ಷ ಎಸ್.ಕೃಷ್ಣಸ್ವರ್ಣಸಂದ್ರ, ಪದಾಧಿಕಾರಿಗಳಾದ ಮಂಗಲ ಶಿವಣ್ಣ, ಅರಸಯ್ಯ, ರೂಪಾ ಹೊಸಹಳ್ಳಿ ಉಪಸ್ಥಿತರಿದ್ದರು.