ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಈಶ್ವರಪ್ಪನವರು ಮೋದಿಯವರ ಫೋಟೋ ಬಳಕೆ ಮಾಡುತ್ತಿರುವುದಕ್ಕೆ ಆಕ್ಷೇಪವಿದೆ. ಮೋದಿಯವರ ಭಾವಚಿತ್ರ ಬಳಕೆ ಮಾಡಿಕೊಳ್ಳಲು ಎನ್ಡಿಎ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ. ಕೋರ್ಟ್ ನಮ್ಮ ಪರವಾಗಿ ತೀರ್ಪು ನೀಡುತ್ತದೆ ಎಂದರು.
ನಾವು ಅಭಿವೃದ್ಧಿ ಮೇಲೆ ಮತಯಾಚಿಸುತ್ತೇವೆ. ಈಶ್ವರಪ್ಪ ಅವರು ಹಿಂದುತ್ವಕ್ಕೆ ಅನ್ಯಾಯವಾಗಿದೆ ಎಂದು ಹೇಳಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ, ಅದನ್ನು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಬಿಜೆಪಿ ಅಧಿಕೃತ ಅಭ್ಯರ್ಥಿ ನಾನು. ನಮ್ಮ ಎನ್ಡಿಎ ನಾಯಕ ನರೇಂದ್ರ ಮೋದಿ ಅವರನ್ನು ನಾವು ಉಪಯೋಗಿಸಿಕೊಳ್ಳಬೇಕೇ ವಿನಃ ಬೇರೆಯವರು ಉಪಯೋಗಿಸಿಕೊಳ್ಳಲು ಬರಲ್ಲ ಎಂದರು.ಸಾಯಿ ಪ್ರಸಾದ್ ದಾಖಲೆ ದುರುಪಯೋಗ:ತೀರ್ಥಹಳ್ಳಿ ಸಾಯಿ ಪ್ರಸಾದ್ ಅವರನ್ನು ಎನ್ಐಎ ಅವರು ವಿಚಾರಣೆ ನಡೆಸಿ, ವಾಪಸ್ ಕಳುಹಿಸಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಹಲವು ಕಡೆ ವಿಚಾರಣೆ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಸಾಯಿ ಪ್ರಸಾದ್ ಹೆಸರು ಕೇಳಿ ಬಂದಿತ್ತು. ಮೊಬೈಲ್ ಶಾಪ್ ಒಂದರಲ್ಲಿ ಸಿಮ್ ಖರೀದಿ ಮಾಡುವಾಗ ನೀಡುವ ದಾಖಲೆ ಪಡೆದು ದುರುಪಯೋಗ ಪಡಿಸಲಾಗಿದೆ. ಅಲ್ಲದೇ ಇದೇ ರೀತಿ 10 ಜನರ ದಾಖಲೆ ಪಡೆದು ದುರುಪಯೋಗಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂತಹ ಘಟನೆ ನಡೆಯುತ್ತಿತ್ತು ಎಂದು ಕೇಳಿದ್ದೆವು. ಆದರೆ, ಈಗ ನಮ್ಮ ತೀರ್ಥಹಳ್ಳಿಯಲ್ಲಿ ಇಂತಹ ಘಟನೆ ನಡೆದಿರುವುದು ಗಾಬರಿಯಾಗುವಂತಹ ವಿಚಾರ. ಇಂತಹ ಘಟನೆ ನಡೆಯದಂತ ಬಿಗಿ ಕಾನೂನು ಕ್ರಮ ಜರುಗಿಸಬೇಕಿದೆ. ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ವಿರೋಧ ಪಕ್ಷದವರಿಗೆ ಅಪಪ್ರಚಾರ ನಡೆಸುವುದೇ ಕೆಲಸವಾಗಿದೆ. ರಾಘಣ್ಣನಿಗೆ, ಚನ್ನಿಯಣ್ಣನಿಗೆ ಬೈಯುವುದೇ ಅವರ ಕೆಲಸ. ನಾನು ಕಳೆದ ನಾಲ್ಕು ಚುನಾವಣೆಯಿಂದಲೂ ಇದನ್ನು ಕೇಳಿಕೊಂಡು ಬಂದಿದ್ದೇನೆ. ನಾವು ಏನು ಮಾಡಿದ್ದೇವೆ, ಮುಂದೆ ಏನು ಮಾಡುತ್ತೇವೆ ಎಂದು ಹೇಳುತ್ತಿದ್ದೇವೆ. ನಮ್ಮ ಪಕ್ಷಕ್ಕೆ ನೀತಿ ನಿಯಮ ಇದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕೃತ ವಿರೋಧ ಪಕ್ಷದ ಸ್ಥಾನವನ್ನು ಪಡೆದುಕೊಳ್ಳಲು ಆಗಿಲ್ಲ. ಈಗ ಕಾಂಗ್ರೆಸ್ಗೆ ಗಾಬರಿಯಾಗುತ್ತಿದೆ. ನಿನ್ನೆ ಒಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಚುನಾವಣೆಯನ್ನು ನಾವು ಮಾಡಿದ ಕೆಲಸದ ಮೇಲೆಯೇ ನಡೆಸುತ್ತೇವೆ ಎಂದರು.