ಸಾಮಾಜಿಕ, ಶೈಕ್ಷಣಿಕ ಗಣತಿಗೆ ಕಾಲಮಿತಿ ಬೇಡ: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

KannadaprabhaNewsNetwork |  
Published : Sep 23, 2025, 01:06 AM IST
ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು | Kannada Prabha

ಸಾರಾಂಶ

ರಾಜ್ಯ ಸರ್ಕಾರ ಆರಂಭಿಸಿರುವ ಸಾಮಾಜಿಕ, ಶೈಕ್ಷಣಿಕ ಗಣತಿಯನ್ನು ರಾಜ್ಯದಲ್ಲಿನ 7 ಕೋಟಿ ಜನರ ಸಮೀಕ್ಷೆಯಾಗುವವರೆಗೂ ನಡೆಸಬೇಕು. ಇದಕ್ಕೆ ಯಾವುದೇ ಕಾಲಮಿತಿ ಹಾಕುವುದು ಬೇಡ. ಈ ಸಮೀಕ್ಷೆಯಿಂದ ಯಾರೂ ಸಹ ಹೊರಗುಳಿಯದಂತೆ ನೋಡಿಕೊಳ್ಳಬೇಕಿದೆ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ರಾಜ್ಯ ಸರ್ಕಾರ ಆರಂಭಿಸಿರುವ ಸಾಮಾಜಿಕ, ಶೈಕ್ಷಣಿಕ ಗಣತಿಯನ್ನು ರಾಜ್ಯದಲ್ಲಿನ 7 ಕೋಟಿ ಜನರ ಸಮೀಕ್ಷೆಯಾಗುವವರೆಗೂ ನಡೆಸಬೇಕು. ಇದಕ್ಕೆ ಯಾವುದೇ ಕಾಲಮಿತಿ ಹಾಕುವುದು ಬೇಡ. ಈ ಸಮೀಕ್ಷೆಯಿಂದ ಯಾರೂ ಸಹ ಹೊರಗುಳಿಯದಂತೆ ನೋಡಿಕೊಳ್ಳಬೇಕಿದೆ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ಸಾಮಾಜಿಕ ಶೈಕ್ಷಣಿಕ ಗಣತಿಯನ್ನು ರಾಜ್ಯದಲ್ಲಿ ನಡೆಸುತ್ತಿರುವುದು ಸ್ವಾಗತಾರ್ಹ. ಈ ಸಮೀಕ್ಷೆ ರಾಜ್ಯದಲ್ಲಿ ವಿವಿಧ ಜಾತಿಗಳ ಪ್ರಗತಿಗೆ ಕಾರಣವಾಗಲಿದೆ. ಸಮೀಕ್ಷೆಯನ್ನು ಯಾರೂ ನಿರ್ಲಕ್ಷ್ಯ ಮಾಡಬಾರದು. ಎಲ್ಲರೂ ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡುವುದರ ಮೂಲಕ ನಿಮ್ಮ ನಿಮ್ಮ ಜಾತಿ ಗುರುತಿಸಿಕೊಳ್ಳಬೇಕಿದೆ ಎಂದರು.ರಾಜ್ಯದ ಕೆಲವು ಪ್ರದೇಶಗಳಲ್ಲಿ ಕೆಲಸಕ್ಕಾಗಿ ನಮ್ಮ ರಾಜ್ಯವನ್ನು ಬಿಟ್ಟು ಬೇರೆ ಕಡೆಗಳಲ್ಲಿ ಹಲವಾರು ಜನತೆ ವಲಸೆ ಹೋಗಿದ್ದಾರೆ. ಇಂತಹವರನ್ನು ಸಹ ಗಣತಿಯಲ್ಲಿ ಒಳಪಡಿಸಬೇಕಿದೆ. ಕಟ್ಟಡ ಕೆಲಸಕ್ಕಾಗಿ ಬೆಂಗಳೂರು ಸೇರಿದಂತೆ ಮಹಾನಗರಗಳಿಗೆ ಹೋಗಿದ್ದಾರೆ. ಉತ್ತರ ಕರ್ನಾಟಕದಿಂದ ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಹೋಗಿದ್ದಾರೆ. ಕೊಪ್ಪಳ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಹೋಗಿರುತ್ತಾರೆ. ಇಂತಹರನ್ನು ಸಹ ಸಮೀಕ್ಷೆ ಮಾಡಲು ಪ್ರತ್ಯೇಕವಾದ ತಂಡ ನೇಮಕ ಮಾಡುವಂತೆ ಸರ್ಕಾರವನ್ನು ಶ್ರೀಗಳು ಆಗ್ರಹಿಸಿದರು.

ನಾಡಹಬ್ಬ ಮೈಸೂರಿನ ದಸರಾ ಸಮಯದಲ್ಲಿ ಊರಿನಿಂದ ಹೊರಗೆ ಹೋದವರು ಸಹ ವಾಪಸ್‌ ಬರುತ್ತಾರೆ. ಉತ್ತರ ಕರ್ನಾಟಕದಲ್ಲಿ ದೀಪಾವಳಿ ಸಮಯದಲ್ಲಿ ಹೊರಗಡೆ ಹೋದವರು ವಾಪಸ್‌ ಬರುತ್ತಾರೆ. ಇಂತಹ ಸಮಯದಲ್ಲಿ ಸರ್ಕಾರ ಮಾಡುವ ಸಮೀಕ್ಷೆ ಸರಿಯಿದೆ. ಇದನ್ನು ಸೂಕ್ಷ್ಮವಾಗಿ ಪರಿಗಣಿಸಿ ಸಮೀಕ್ಷೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಸಮೀಕ್ಷೆ ಮಾಡುವವರಿಗೆ ಕಾಲಮಿತಿ ಹಾಕದೇ ಗಣತಿಯಲ್ಲಿ ರಾಜ್ಯದ 7 ಕೋಟಿ ಜನ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಕಾಲಾವಕಾಶ ನೀಡಬೇಕಿದೆ. ರಾಜ್ಯದ ಎಲ್ಲಾ ಜನತೆ ಈ ಸಮೀಕ್ಷೆಯಲ್ಲಿ ಭಾಗವಹಿಸಿದ್ದಾರೆ ಎಂದು ಖಾತರಿಯಾದ ಮೇಲೆ ಸಮೀಕ್ಷೆಯನ್ನು ಪೂರ್ಣ ಮಾಡುವಂತೆ ಶ್ರೀಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.

2011ರ ಗಣತಿಯಲ್ಲಿ ಪ. ಜಾತಿ ಸಮಾಜದ ಜನಸಂಖ್ಯೆ 1.08 ಕೋಟಿ ಇತ್ತು. ಆದರೆ ನಾಗಮೋಹನ್ ದಾಸ್ ಆಯೋಗದ ವರದಿಯಲ್ಲಿ 1.05 ಕೋಟಿ ಎಂದು ತೋರಿಸಿದ್ದಾರೆ. ಇದು ಸರಿಯಾದ ಸಮೀಕ್ಷೆಯಲ್ಲ. ಹತ್ತು ವರ್ಷದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರು ಕನಿಷ್ಠ 25ಲಕ್ಷ ಹಾಗೂ ಭೋವಿ ಸಮುದಾಯ ಕನಿಷ್ಠ 3 ಲಕ್ಷದಿಂದ ರಿಂದ 5 ಲಕ್ಷದವರೆಗೆ ಏರಿಕೆಯಾಗಿದೆ. ಆದರೆ, ಆಯೋಗ ಕಡಿಮೆ ಜನಸಂಖ್ಯೆ ತೋರಿಸಿದೆ. ಆದರೆ, ಈ ಬಾರಿಯ ಸಮೀಕ್ಷೆಯಲ್ಲಿ ಈ ರೀತಿಯಾಗದಂತೆ ನೋಡಿಕೊಳ್ಳಬೇಕಿದೆ. ನಮ್ಮ ಸಮುದಾಯದವರೆಲ್ಲರೂ ಜಾತಿ ಭೋವಿ ಅಥವಾ ವಡ್ಡರ ಎಂದು ಬರೆಸುವುದರ ಮೂಲಕ ನಮ್ಮ ಸಂಘಟನೆ ಪ್ರದರ್ಶನ ಮಾಡಬೇಕಿದೆ, ನಮ್ಮ ಸಮುದಾಯ ಅರೆ ಅಲೆಮಾರಿಯಾಗಿದ್ದು, ಕೆಲಸದ ನಿಮ್ಮಿತ್ತ ಊರನ್ನು ಬಿಟ್ಟು ಹೋಗಿರುತ್ತಾರೆ. ಈ ಸಮಯದಲ್ಲಿ ಊರಿನಲ್ಲಿ ಇರುವುದರ ಮೂಲಕ ಗಣತಿದಾರರು ಬಂದಾಗ ಸರಿಯಾದ ಮಾಹಿತಿ ನೀಡಬೇಕು ಕರೆ ನೀಡಿದ್ದಾರೆ.

ಬಾಕ್ಸ್-1ಕ್ರೈಸ್ತ ಪಟ್ಟಿಯಿಂದ ಪ.ಜಾರಿ ಕೈಬಿಡಿ

48 ಕ್ರೈಸ್ತ ಜಾತಿಗಳಲ್ಲಿ 33 ಜಾತಿಗಳನ್ನು ಕೈ ಬಿಡಲು ಆಯೋಗದ ನಿರ್ಧಾರವಾಗಿದೆ. ವೊಡ್ಡ ಕ್ರಿಶ್ಚಿಯನ್ ಹಾಗೂ ಪರಿಶಿಷ್ಟ ಜಾತಿಗಳನ್ನು ಕ್ರೈಸ್ತ ಪಟ್ಟಿಯಿಂದ ಕೈಬಿಡಲು ಶ್ರೀಗಳು ಆಗ್ರಹಿಸಿದ್ದಾರೆ.

ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಅಡಿಯಲ್ಲಿ ಹಿಂದೂ ಬಿಲ್ ಕೋಡ್ ನಲ್ಲಿ ಬರುವ ಭೋವಿ ಜನಾಂಗವನ್ನು ಧರ್ಮ-ಹಿಂದೂ, ಜಾತಿ-ಭೋವಿ, ಉಪಜಾತಿ-ವಡ್ಡರ ಎಂದು ಬರೆಯಿಸಿ, ಜಾತಿಯ ಪರ್ಯಾಯ ಪದಗಳನ್ನು ಕೋಡ್ ನಂ. ಬಿ.23.2 ರಿಂದ ಬಿ.23.10 ರವರಿಗೆ ನಮೂದಿಸಬೇಕು.

- ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಭೋವಿ ಗುರುಪೀಠದ ಜಗದ್ಗುರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಕ್ಷೇತ್ರಕ್ಕೆ ಆರ್ಥಿಕ ಶಿಸ್ತು ಅಗತ್ಯ
ಅಧಿಕಾರಿಗಳು ಜಾತ್ಯತೀತವಾಗಿ ಕೆಲಸ ಮಾಡಿ : ಸಿಎಂ ಸಿದ್ದರಾಮಯ್ಯ