ಅಂಬೇಡ್ಕರ್ ಪ್ರತಿಮೆ ಪಕ್ಕ ಶೌಚಗೃಹ ನಿರ್ಮಾಣ ಬೇಡ

KannadaprabhaNewsNetwork |  
Published : May 23, 2026, 01:30 AM IST
 ಮಾಗಡಿ ಪಟ್ಟಣದ ಪುರಸಭೆ ಮುಂಭಾಗದ ಆವರಣದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಪಕ್ಕದಲ್ಲಿ ಪೌರಕಾರ್ಮಿಕರಿಗಾಗಿ ವಿಶ್ರಾಂತಿ ಗೃಹ ಜೊತೆ ಶೌಚಗ್ರಹ ನಿರ್ಮಾಣದ ವಿರುದ್ಧ ಎಚ್.ಎಂ.ಕೃಷ್ಣ್ಣಮೂರ್ತಿ ಹಾಗೂ ದಲಿತ ಮುಖಂಡರು ಕಾಮಗಾರಿ ಸ್ಥಗಿತಕ್ಕೆ ಒತ್ತಾಯಿಸಿ ಮನವಿ ಸಲ್ಲಿಸುತ್ತಿರುವುದು. | Kannada Prabha

ಸಾರಾಂಶ

ಮಾಗಡಿ: ಪಟ್ಟಣದ ಪುರಸಭೆ ಕಾರ್ಯಾಲಯದ ಮುಂದಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಪಕ್ಕದಲ್ಲಿ ಪೌರಕಾಮಿರ್ಕರಿಗಾಗಿ ವಿಶ್ರಾಂತಿ ಹಾಗೂ ಶೌಚಗೃಹ ನಿರ್ಮಿಸಲು ಮುಂದಾಗಿರುವ ಪುರಸಭೆ ಅಧಿಕಾರಿಗಳ ಕ್ರಮಕ್ಕೆ ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಎಂ. ಕೃಷ್ಣಮೂರ್ತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ

ಮಾಗಡಿ: ಪಟ್ಟಣದ ಪುರಸಭೆ ಕಾರ್ಯಾಲಯದ ಮುಂದಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಪಕ್ಕದಲ್ಲಿ ಪೌರಕಾಮಿರ್ಕರಿಗಾಗಿ ವಿಶ್ರಾಂತಿ ಹಾಗೂ ಶೌಚಗೃಹ ನಿರ್ಮಿಸಲು ಮುಂದಾಗಿರುವ ಪುರಸಭೆ ಅಧಿಕಾರಿಗಳ ಕ್ರಮಕ್ಕೆ ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಎಂ. ಕೃಷ್ಣಮೂರ್ತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಕೆಂಪೇಗೌಡ ಅಭಿವೃದ್ಧಿ ಸಮಿತಿ, ದಲಿತ ಸಂಘರ್ಷ ಸಮಿತಿ, ನಿಸರ್ಗ ಟ್ರಸ್ಟ್ ವತಿಯಿಂದ ಕಾಮಗಾರಿ ನಿಲ್ಲಿಸುವಂತೆ ಪುರಸಭೆಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ದೇಶಕ್ಕೆ ಸಂವಿಧಾನ ನೀಡಿ ಜಗತ್ತಿಗೇ ಮಾದರಿಯಾದ ಮಹಾಪುರುಷನ ಪ್ರತಿಮೆ ಪಕ್ಕದಲ್ಲಿ ಕೇವಲ ೨೨ ಅಡಿ ಅಂತರದಲ್ಲಿ ಶೌಚಗೃಹ ನಿರ್ಮಿಸುವುದು ಅಂಬೇಡ್ಕರ್ ಅವರಿಗೆ ಹಾಗೂ ಈ ಮಣ್ಣಿನ ಜನತೆಗೆ ಮಾಡುವ ಅಪಮಾನ. ಪುರಸಭೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾನವೀಯತೆ ಮರೆತು ಕೆಲಸ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತದೆ. ಶೌಚಗೃಹದಿಂದ ಬರುವ ದುರ್ವಾಸನೆಯಿಂದ ಜನ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಇಷ್ಟೆಲ್ಲಾ ಅವಾಂತರಗಳು ನಡೆಯುತ್ತಿದ್ದರೂ ಶಾಸಕ ಬಾಲಕೃಷ್ಣ ರವರ ಗಮನಕ್ಕೆ ಇದು ಬಂದಿಲ್ಲವೇ ಎಂದು ಪ್ರಶ್ನಿಸಿದರು.

ತಾಪಂ ಮಾಜಿ ಅಧ್ಯಕ್ಷ ಚಂದೂರಾಯನಹಳ್ಳಿ ಕೃಷ್ಣ ಮಾತನಾಡಿ, ಮಾಜಿ ಶಾಸಕರಾದ ಎ.ಮಂಜುನಾಥ್‌ ಸುಮಾರು ೧೬ ಲಕ್ಷ ರು. ವೆಚ್ಚದಲ್ಲಿ, ಗೃಹ ಸಚಿವರಾಗಿದ್ದ ಡಾ. ಜಿ.ಪರಮೇಶ್ವರ್ ಅವರ ಸಮ್ಮುಖದಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಮಹಾತ್ಮರ ಪ್ರತಿಮೆಗಳ ಪಕ್ಕದಲ್ಲಿ ಅವರ ಸಾಧನೆಗಳನ್ನು ಬಿಂಬಿಸುವ ಗ್ರಂಥಾಲಯ, ಸಸಿ ನೆಟ್ಟು ಉದ್ಯಾನವನ ಮಾಡುವುದು ಅಥವಾ ವಿಶ್ರಾಂತಿ ಆಸನಗಳನ್ನು ಅಳವಡಿಸುವುದು ಸೂಕ್ತ. ಅದನ್ನು ಬಿಟ್ಟು ಪ್ರತಿಮೆಯ ಪಕ್ಕದಲ್ಲೇ ಶೌಚಾಲಯ ನಿರ್ಮಿಸಲು ಮುಂದಾಗಿರುವುದು ಇಡೀ ಸಮಾಜಕ್ಕೆ ಹಾಗೂ ಸಂವಿಧಾನ ಶಿಲ್ಪಿಗೆ ಮಾಡುತ್ತಿರುವ ಅಪಮಾನ ಎಂದು ಮುಖಂಡರು ಬೇಸರ ವ್ಯಕ್ತಪಡಿಸಿದರು.

ದಲಿತ ಮುಖಂಡ ಸಿ.ಜಯರಾಂ ಮಾತನಾಡಿ, ಕೆಂಪೇಗೌಡರ ಪ್ರತಿಮೆಯನ್ನು ಹೈಕೋರ್ಟ್ ಆದೇಶದ ಅನ್ವಯ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಾವು ಕೋರ್ಟ್ ಆದೇಶಕ್ಕೆ ಗೌರವ ನೀಡಿ ಅಂದು ಸುಮ್ಮನಿದ್ದೆವು. ಆದರೆ ಅದನ್ನೇ ನಮ್ಮ ದೌರ್ಬಲ್ಯ ಎಂದು ಭಾವಿಸಿ, ಈಗ ಯಾರಿಗೂ ಮಾಹಿತಿ ನೀಡದೆ, ಕೌನ್ಸಿಲ್‌ನಲ್ಲಿ ಯಾವುದೇ ನಿರ್ಣಯ ಕೈಗೊಳ್ಳದೆ ತರಾತುರಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಗುಂಡಿ ತೆಗೆಯುತ್ತಿರುವುದು ಖಂಡನೀಯ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಆಕ್ಷೇಪ ವ್ಯಕ್ತಪಡಿಸಿ, ಪುರಸಭೆ ಮ್ಯಾನೇಜರ್ ರವಿಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ವಾಯುಸೇನೆ ನಿವೃತ್ತ ಅಧಿಕಾರಿ ಶಿವಲಿಂಗಯ್ಯ, ರೈತ ಮುಖಂಡ ಶಿವಲಿಂಗಯ್ಯ, ಎನ್‌ಇಎಸ್ ಆನಂದ್, ಸೈಯ್ಯದ್, ದೊಡ್ಡಿ ಗೋಪಿ, ರಮೇಶ್, ಹೇಮಂತ್, ರಾಮಣ್ಣ, ಮೋಹನ್, ಜೀವಿಕ ಗಂಗಹನುಮಯ್ಯ ಇತರರು ಉಪಸ್ಥಿತರಿದ್ದರು.

(ಫೋಟೋ ಕ್ಯಾಫ್ಞನ್‌)

ಮಾಗಡಿಯ ಪುರಸಭೆ ಮುಂಭಾಗದ ಆವರಣದಲ್ಲಿ ಡಾ. ಅಂಬೇಡ್ಕರ್ ಪ್ರತಿಮೆ ಪಕ್ಕದಲ್ಲಿ ಪೌರಕಾರ್ಮಿಕರಿಗಾಗಿ ವಿಶ್ರಾಂತಿ ಹಾಗೂ ಶೌಚಗ್ರಹ ನಿರ್ಮಾಣ ಸ್ಥಗಿತಗೊಳಿಸುವಂತೆ ಎಚ್.ಎಂ.ಕೃಷ್ಣಮೂರ್ತಿ ಹಾಗೂ ದಲಿತ ಮುಖಂಡರು ಮನವಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಗೀತೋತ್ಸವದಲ್ಲಿ ವಿವಿಧ ಕಲಾವಿದರಿಂದ ನಾದ ಝೇಂಕಾರ
ಉತ್ತಮ ಸಮಾಜ ನಿರ್ಮಾಣವೇ ಭೀಮ್‌ ಆರ್ಮಿ ಉದ್ದೇಶ