ಮಂಗಳೂರು: ಸೃಜನಶೀಲ ಹಾಗೂ ಸೃಜನೇತರ ಬರೆವಣಿಗೆಯಲ್ಲಿ ವ್ಯತ್ಯಾಸವಿದೆ. ಬರಹಗಾರನ ಕಲ್ಪನೆಯಲ್ಲಿ ಮೂಡಿಬರುವ ಕಥೆ, ಕವನಗಳು ಸೃಜನಶೀಲ ಬರೆವಣಿಗೆಯಾದರೆ, ಸತ್ಯದ ಆಧಾರದಲ್ಲಿ ನೇರವಾಗಿ ಬರೆಯುವುದು ಸೃಜನೇತರ ಬರೆವಣಿಗೆಯಾಗಿ ಗುರುತಿಸಲ್ಪಟ್ಟಿದೆ ಎಂದು ಬೆಂಗಳೂರು ಉತ್ತರ ವಿ.ವಿ.ಯ ಕುಲಪತಿ ಪ್ರೊ.ನಿರಂಜನ ವಾನಳ್ಳಿ ಹೇಳಿದರು.
ಬರೆವಣಿಗೆ ಒಂದು ಕಲೆ. ಅಕ್ಷರ ಕಲಿತವರೆಲ್ಲ ಬರಹಗಾರರಾಗಲು ಸಾಧ್ಯವಿಲ್ಲ. ಅದಕ್ಕೆ ವಿಷಯಗ್ರಹಿಕೆ, ಸೃಜನಶೀಲತೆ , ತಪಸ್ಸು ಎಲ್ಲವೂ ಮುಖ್ಯ. ಇಂತಹ ಕಾರ್ಯಾಗಾರಗಳು ಬರೆವಣಿಗೆ ಕಲೆಯನ್ನು ಉದ್ದೀಪನಗೊಳಿಸಲು ಪೂರಕವಾಗಿದೆ ಎಂದು ಅವರು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿ.ವಿ.ಯ ಕುಲ ಸಚಿವ ಕೆ.ರಾಜು ಮೊಗವೀರ ಮಾತನಾಡಿ , ಬರವಣಿಗೆಯ ಸಾಧ್ಯತೆ ಮತ್ತು ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು ಎಂದರು.ವಿ.ವಿ.ಕಾಲೇಜು ಪ್ರಾಂಶುಪಾಲ ಪ್ರೊ.ಗಣಪತಿ ಗೌಡ, ಅಭಾಸಾಪ ದ.ಕ.ಜಿಲ್ಲಾಧ್ಯಕ್ಷ ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಗಳಾಗಿದ್ದರು.ಅಭಾಸಾಪ ವಿಭಾಗ ಸಂಯೋಜಕ ಸುಂದರ ಶೆಟ್ಟಿ ಇಳಂತಿಲ, ಜತೆ ಕಾರ್ಯದರ್ಶಿ ಶ್ರೀಲಕ್ಷ್ಮಿ ಮಠದಮೂಲೆ, ಸಮಿತಿ ಸದಸ್ಯರಾದ ಡಾ.ಸುರೇಶ್ ನೆಗಳಗುಳಿ, ಗೀತಾ ಲಕ್ಷ್ಮೀಶ, ಮಂಗಳೂರು ತಾಲೂಕು ಘಟಕದ ಅಧ್ಯಕ್ಷೆ ಡಾ.ಮೀನಾಕ್ಷಿ ರಾಮಚಂದ್ರ, ಉಪನ್ಯಾಸಕರಾದ ಜಯವಂತ ನಾಯಕ್, ಡಾ.ಸುಧಾ.ಎನ್.ವೈದ್ಯ ಇದ್ದರು.ಮಂಗಳಗಂಗೆ ಸಂಚಿಕೆಯ ಕಾರ್ಯನಿರ್ವಾಹಕ ಸಂಪಾದಕ ಡಾ.ಮಾಧವ.ಎಂ.ಕೆ. ಸ್ವಾಗತಿಸಿದರು. ಅಭಾಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿದುಷಿ ಸುಮಂಗಳಾ ರತ್ನಾಕರ್ ವಂದಿಸಿದರು. ಉಪನ್ಯಾಸಕಿ ಸಿಂಧು ನಿರೂಪಿಸಿದರು.